ಉಕ್ಕಿ ಹರಿದ ನೇತ್ರಾವತಿ: ಹಲವು ಪ್ರದೇಶ ಮುಳುಗಡೆ
Team Udayavani, Aug 17, 2018, 1:45 AM IST
ಬಂಟ್ವಾಳ: ಸತತ ಮಳೆ, ಉಪ್ಪಿನಂಗಡಿಯಿಂದ ನೇತ್ರಾವತಿ ನದಿಯಲ್ಲಿ ನೀರು ಹರಿದು ಬರುತ್ತಿದ್ದು ಗುರುವಾರ ಮುಂಜಾನೆಯಿಂದಲೇ ನೆರೆ ಉಕ್ಕೇರಿ 3 ಗಂಟೆ ಸುಮಾರಿಗೆ ಅಪಾಯ ಮಟ್ಟ 9 ಮೀ. ದಾಟುವ ಮೂಲಕ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಹಲವಾರು ಮನೆಗಳು ಮುಳುಗಡೆ ಆಗಿದ್ದು, ಜನರು ಮತ್ತು ಸೊತ್ತುಗಳನ್ನು ತೆರವು ಮಾಡಲಾಗಿದೆ.
ಬುಧವಾರ ಸಂಜೆ ಹೊತ್ತಿಗೆ 7 ಮೀ.ಗೆ ಇಳಿದಿದ್ದ ನೆರೆ ನೀರು ಗುರುವಾರ ಬೆಳಗ್ಗೆ ಏರಿಕೆ ಕಂಡಿತು. ಜಕ್ರಿಬೆಟ್ಟು ರಾಯರಚಾವಡಿ, ಬಂಟ್ವಾಳ ಬಸ್ತಿಪಡ್ಪು, ಬಂಟ್ವಾಳ ಬಡ್ಡಕಟ್ಟೆ, ಕಂಚುಗಾರ ಪೇಟೆ, ಪಾಣೆ ಮಂಗಳೂರು ಆಲಡ್ಕ, ನಂದಾವರ ಸೇತುವೆ, ಪಾಣೆಮಂಗಳೂರು ಅಕ್ಕರಂ ಗಡಿ, ಜೈನರಪೇಟೆ, ಗೂಡಿನಬಳಿ, ಪಾಣೆಮಂಗಳೂರು ಸುಣ್ಣದಗೂಡು ಪ್ರದೇಶಗಳು ಜಲಾವೃತ ಆಗಿವೆ.
ಪಾಣೆಮಂಗಳೂರು ಭಯಂಕೇಶ್ವರ ದೇವಸ್ಥಾನದ ಸುತ್ತು ವಠಾರಕ್ಕೆ ನೀರು ಬಂದಿದೆ. ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದೇವಸ್ಥಾನದ ಹೊರಾಂಗಣ ರಸ್ತೆಯ ಮಟ್ಟಕ್ಕೆ ನೀರು ಏರಿಕೆಯಾಗಿದೆ. ಬಂಟ್ವಾಳದ ಅಗ್ನಿ ಶಾಮದ ಠಾಣೆ ನೀರಿನಿಂದ ಆವೃತ್ತವಾಗಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ದೋಣಿ ಬಳಸಿ ಅಲಡ್ಕದಲ್ಲಿ ಮನೆಯೊಳಗೆ ಇದ್ದವರನ್ನು ಸುರಕ್ಷಿತ ಪ್ರದೇಶಕ್ಕೆ ಸಾಗಿಸಲಾಗಿದೆ. ಡಿಸಿ ಶಶಿಕಾಂತ್ ಸೆಂಥಿಲ್ ಮತ್ತು ಹಿರಿಯ ಅಧಿಕಾರಿಗಳು ಮುಳುಗಡೆ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಶಾಲೆಗಳಿಗೆ ರಜೆ
ಭಾರೀ ಮಳೆ ಮತ್ತು ನೆರೆ ಸಾಧ್ಯತೆಯ ಮಾಹಿತಿ ಗುರುವಾರ ಬೆಳಗ್ಗೆ ಲಭ್ಯ ಆಗುತ್ತಿದ್ದಂತೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶಿವಪ್ರಕಾಶ್ ಅವರು ಪ್ರಾಥಮಿಕ, ಪ್ರೌಢ, ಅಂಗನವಾಡಿ ಶಾಲೆಗಳಿಗೆ ರಜೆಯನ್ನು ಘೋಷಿಸಿ ತುರ್ತು ಆದೇಶ ರವಾನಿಸಿದರು.
ಡ್ಯಾಂ ನೀರು ಹೊರಕ್ಕೆ
ಶಂಭೂರು ಎಎಂಆರ್ ಡ್ಯಾಂನಲ್ಲಿ ಗುರುವಾರ ಬೆಳಗ್ಗಿನಿಂದ ಪ್ರತೀ 3 ಗಂಟೆಗಳಿಗೆ ಒಮ್ಮೆ ಸೈರನ್ ಮೊಳಗಿಸಿ ಮುನ್ನೆಚ್ಚರಿಕೆ ನೀಡಲಾಯಿತು. ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಕ್ರಸ್ಟ್ ಗೇಟ್ಗಳನ್ನು ತೆರೆದು ನೀರು ಹೊರಕ್ಕೆ ಹರಿಸಲಾಗುತ್ತಿದೆ. ಇಲ್ಲಿ ಗರಿಷ್ಠ ನೀರಿನ ಮಟ್ಟ 18.9 ಮೀಟರಾಗಿದ್ದು, ನೀರಿನ ಮಟ್ಟವನ್ನು ಕಾಯ್ದುಕೊಳ್ಳುವುದಕ್ಕಾಗಿ ಎಲ್ಲ ಗೇಟ್ಗಳನ್ನು ತೆರೆದಿರುವುದಾಗಿ ಮೂಲಗಳು ಹೇಳಿವೆ. ತುಂಬೆ ಡ್ಯಾಂನಲ್ಲಿಯೂ ಎಲ್ಲ ಗೇಟ್ ಗಳನ್ನು ಗರಿಷ್ಠ ಮಟ್ಟಕ್ಕೆ ಏರಿಸುವ ಮೂಲಕ ನೀರು ಸರಾಗ ಹರಿಯುವಿಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮನಪಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ