ಹೊಳೆ ದಾಟಲು ಕಾಲುಸಂಕವೇ ಆಸರೆ; ಬೇಕಿದೆ ಶಾಶ್ವತ ಸೇತುವೆ


Team Udayavani, Aug 23, 2018, 1:30 AM IST

kalu-sanka-22-8.jpg

ಬೆಳ್ತಂಗಡಿ: ಮಳೆಗಾಲದಲ್ಲಿ ಇಲ್ಲಿನ ಜನರ ಕಷ್ಟ ದೇವರಿಗೇ ಪ್ರೀತಿ. ದೈನಂದಿನ ಕೆಲಸ ಕಾರ್ಯಗಳಿಗೆ ಹಾಗೂ ಶಾಲಾ-ಕಾಲೇಜಿಗೆ ತೆರಳುವ ಮಕ್ಕಳಿಗೆ ಅಡಿಕೆ ಮರದ ಕಾಲು ಸಂಕವೇ ರಾಜಮಾರ್ಗ. ಸಣ್ಣ ಮಕ್ಕಳಂತೂ ಈ ಕಾಲು ಸಂಕವನ್ನು ದಾಟಲುಪಡುವ ಕಷ್ಟ ಹೇಳತೀರದು. ಅನಾರೋಗ್ಯ ಉಂಟಾದರೆ ಆಸ್ಪತ್ರೆಗೆ ತೆರಳಬೇಕಾದರೆ ಹರಸಾಹಸ ಪಡುವ ಸ್ಥಿತಿ ಇಲ್ಲಿನವರದ್ದು.

ಎಲ್ಲಿದೆ ಏಳೂವರೆ ಹೊಳೆ ?
ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ದಿಡುಪೆಗೆ ಹೋಗುವ ರಸ್ತೆಯಲ್ಲಿ ಸುಮಾರು 9 ಕಿ.ಮೀ. ಸಾಗಿದಾಗ ಮಿತ್ತಬಾಗಿಲು ಗ್ರಾ.ಪಂ. ವ್ಯಾಪ್ತಿಯ ಕುಕ್ಕಾವು ಪ್ರದೇಶವಿದೆ. ಇಲ್ಲಿಂದ ಕೂಡಬೆಟ್ಟು ಕ್ಷೇತ್ರಕ್ಕೆ ಹೋಗುವ ದಾರಿಯಲ್ಲಿ ಕಕ್ಕೆನೇಜಿ ಸಮೀಪ ಏಳೂವರೆ ಹೊಳೆ ಸಿಗುತ್ತದೆ. ಇಲ್ಲಿನ ನೂರಾರು ಮನೆಯವರು ಈ ಹೊಳೆ ದಾಟಿಕೊಂಡೇ ಮುಖ್ಯರಸ್ತೆಗೆ ಬರಬೇಕು. ಇಲ್ಲಿ ಸೇತುವೆ ನಿರ್ಮಾಣವಾದರೆ ಅದೆಷ್ಟೋ ವರ್ಷಗಳ ಬೇಡಿಕೆ ಈಡೇರಿದಂತಾಗುತ್ತದೆ. ಸಂಸದರು, ಶಾಸಕರು, ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ ಇಲ್ಲಿ ಸೇತುವೆ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಮನಸ್ಸು ಮಾತ್ರ ಇನ್ನೂ ಮಾಡಿಲ್ಲ.

ಅಡಿಕೆ ಮರದ ಕಾಲು ಸಂಕ
ಇಲ್ಲಿನವರು ಸೇತುವೆ ಇಲ್ಲ ಎಂದು ಕೈಕಟ್ಟಿ ಕುಳಿತುಕೊಂಡಿಲ್ಲ. ಹೊಳೆ ದಾಟಲು ಸ್ವಪ್ರಯತ್ನ ಮಾಡುತ್ತಲೇ ಬಂದಿದ್ದಾರೆ. ಪ್ರತಿ ವರ್ಷವೂ ಅಡಿಕೆ ಮರದ ಕಾಲು ಸಂಕ ನಿರ್ಮಿಸಿ ಹೊಳೆ ದಾಟುತ್ತಿದ್ದಾರೆ. ಈ ವರ್ಷವೂ ಸುಮಾರು 30ಕ್ಕೂ ಅಧಿಕ ಮಂದಿ ಗ್ರಾಮಸ್ಥರು ಶ್ರಮ ದಾನದ ಮೂಲಕ ಒಂದೇ ದಿನದಲ್ಲಿ ಅಡಿಕೆ ಮರದ ಕಾಲುಸಂಕವನ್ನು ನಿರ್ಮಿಸಿಕೊಂಡಿದ್ದಾರೆ. ಈ ಮಳೆಗಾಲಕ್ಕೆ ಅದೇ ಆಸರೆ. ಮುಂದಿನ ವರ್ಷಕ್ಕೆ ಮತ್ತೆ ಬೇರೆಯೇ ಕಾಲುಸಂಕ ಹಾಕಬೇಕು ಎನ್ನುತ್ತಾರೆ ಸ್ಥಳೀಯರು.


ಮನವಿಗೆ ಬೆಲೆ ಇಲ್ಲ

ಸೇತುವೆ ಬೇಡಿಕೆಗೆ ಸಂಬಂಧಿಸಿದಂತೆ ಎಲ್ಲ ಹಂತದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಹಿಂದೊಮ್ಮೆ 40 ಲಕ್ಷ ರೂ. ಅಂದಾಜು ಪಟ್ಟಿಯನ್ನೂ ಸರಕಾರಕ್ಕೆ ಸಲ್ಲಿಸಲಾಗಿತ್ತು. ಈ ಹೊಳೆಗೆ ತುರ್ತಾಗಿ ಸೇತುವೆ ಅಗತ್ಯವಿದೆ. ಈಗಲೂ ಜನಪ್ರತಿನಿಧಿಗಳ, ಸರಕಾರದ ಗಮನ ಸೆಳೆಯಲಾಗುತ್ತಿದೆ ಎನ್ನುತ್ತಾರೆ ಮಿತ್ತಬಾಗಿಲು ಗ್ರಾ.ಪಂ. ಮಾಜಿ ಅಧ್ಯಕ್ಷ ವಾಸುದೇವ ರಾವ್‌ ಕಕ್ಕೆನೇಜಿ.

ಆದೇಶವಾಗಿತ್ತು
ಕೆ.ಎಸ್‌. ಈಶ್ವರಪ್ಪ ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭ 2012-13ರ ಸಾಲಿನಲ್ಲಿ ಆರ್‌.ಐ.ಡಿ.ಎಫ್‌. ನಬಾರ್ಡ್‌ ಯೋಜನೆಯಡಿ ಮಿತ್ತಬಾಗಿಲು ಗ್ರಾ.ಪಂ. ವ್ಯಾಪ್ತಿಯ ಕುಕ್ಕಾವು – ಕಕ್ಕೆನೇಜಿ – ಕೂಡಬೆಟ್ಟು ರಸ್ತೆಯ ಕಕ್ಕೆನೇಜಿಯಲ್ಲಿ ಏಳೂವರೆ ಹೊಳೆಗೆ 30 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ಕಾಮಗಾರಿಗೆ ಆದೇಶವಾಗಿತ್ತು. ಆದರೆ ಕಾರಣಾಂತರಗಳಿಂದ ಅದೂ ವಾಪಸ್ಸಾಗಿತ್ತು ಎನ್ನುವ ಮಾಹಿತಿಯೂ ಇದೆ.

— ಗುರು ಮುಂಡಾಜೆ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.