ಚಾರ್ಮಾಡಿ: 6 ಚಕ್ರ ವಾಹನಕ್ಕೆ ಅವಕಾಶ
Team Udayavani, Aug 31, 2018, 10:06 AM IST
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಘನ ವಾಹನ ಸಂಚಾರದ ಕುರಿತು ಹಲವು ಗೊಂದಲಗಳಿದ್ದು, ಆರು ಚಕ್ರಗಳ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಗುರುವಾರ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಎರಡು ಆ್ಯಕ್ಸೆಲ್ ಇರುವ 6 ಚಕ್ರದ ಲಾರಿಗಳು, ಗರಿಷ್ಠ 20 ಅಡಿ ಉದ್ದ ಹಾಗೂ 16 ಟನ್ಗಿಂತ ಕಡಿಮೆ ಇರುವ ಸರಕು ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡುವಂತೆ ಆದೇಶ ನೀಡಿದ್ದಾರೆ. ಪೊಲೀಸರು ಘಾಟಿ ರಸ್ತೆಯಲ್ಲಿ ತೆರಳದಂತೆ ಗುರುವಾಯನಕೆರೆಯಲ್ಲಿ ಲಾರಿಗಳನ್ನು ತಡೆದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಈ ಭಾಗದಲ್ಲಿ ಪೂರ್ತಿ ಲಾರಿಗಳು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬೆಳ್ತಂಗಡಿ ತಹಶೀಲ್ದಾರ್ ಮದನ್ ಮೋಹನ್ ಸ್ಥಳಕ್ಕೆ ತೆರಳಿ ಲಾರಿಗಳಿಗೆ ಘಾಟಿ ರಸ್ತೆಯ ಮೂಲಕ ತೆರ ಳುವುದಕ್ಕೆ ಸೂಚನೆ ನೀಡಿದರು. ಬಳಿಕ 6 ಚಕ್ರಗಳ ಸರಕು ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಹೀಗಾಗಿ ಜಿಲ್ಲಾಧಿಕಾರಿ ಹೊಸ ಆದೇಶ ನೀಡಿದ್ದಾರೆ.
ಗುರುವಾರವೂ ಲಾರಿಗಳು ಸಹಿತ ಹೆಚ್ಚಿನ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿ ಸಿದ್ದು, ಕೊಂಚ ಟ್ರಾಫಿಕ್ ಸಮಸ್ಯೆ ಉಂಟಾ ಗಿತ್ತು. ವಾಹನಗಳ ನಿಧಾನ ಗತಿಯ ಸಂಚಾರ ದಿಂದಲೂ ತೊಂದರೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!