ಸೆ. 5ರಿಂದ ಕಾಂತಮಂಗಲ ಸೇತುವೆ ದುರಸ್ತಿ


Team Udayavani, Aug 30, 2018, 11:03 AM IST

30-agust-6.jpg

ಸುಳ್ಯ : ಕುಸಿದು ಬೀಳುವ ಹಂತದಲ್ಲಿರುವ ಅಂತಾರಾಜ್ಯ ಸಂಪರ್ಕ ರಸ್ತೆಯ ಕಾಂತಮಂಗಲ ಸೇತುವೆ ದುರಸ್ತಿಗೆ ಮುಹೂರ್ತ ಕೂಡಿ ಬಂದಿದೆ. ಮಂಜೂರಾತಿ 5 ಲಕ್ಷ ರೂ. ಅನುದಾನ ಸೇರಿ ಒಟ್ಟು 15 ಲಕ್ಷ ರೂ. ವೆಚ್ಚದಲ್ಲಿ ಸೆ. 5ರಿಂದ ಸೇತುವೆ ದುರಸ್ತಿ ಕಾಮಗಾರಿ ಪ್ರಾರಂಭಗೊಳ್ಳಲಿದೆ. ಸುಳ್ಯ-ಅಜ್ಜಾವರ-ಮಂಡೆಕೋಲು ರಸ್ತೆಯ ಕಾಂತಮಂಗಲದಲ್ಲಿ ಪಯಸ್ವಿನಿ ನದಿಗೆ 35 ವರ್ಷಗಳ ಹಿಂದೆ ನಿರ್ಮಿಸಿರುವ ಸೇತುವೆ ಶಿಥಿಲಾವಸ್ಥೆಗೆ ತಲುಪಿತ್ತು. ಮೇಲ್ಪದರ ಶಿಥಿಲಗೊಂಡು, ದೊಡ್ಡದಾದ ಬಿರುಕು ಸೃಷ್ಟಿಯಾಗಿದೆ. ಸೇತುವೆ ಮೇಲೆ ನಿಂತರೆ ಬಿರುಕಿನಲ್ಲಿ ನದಿಯ ನೀರು ಕಾಣುತ್ತಿದೆ. ಕಬ್ಬಿಣದ ಪ್ಲೇಟುಗಳು ತುಕ್ಕು ಹಿಡಿದಿವೆ. ವಾಹನ ಸವಾರರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿತ್ತು.

15 ಲಕ್ಷ ರೂ. ಅಗತ್ಯ
ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ 10 ಲಕ್ಷ ರೂ. ಪ್ರಸ್ತಾವನೆಯಲ್ಲಿ 5 ಲಕ್ಷ ರೂ. ಬಿಡುಗಡೆಯಾಗಿದೆ. ಜಿ.ಪಂ. ಯೋಜನೆಯಡಿ 5 ಲಕ್ಷ ರೂ. ಮಂಜೂರಾತಿ ಹಂತದಲ್ಲಿದ್ದು, ಬಿಡುಗಡೆಗೊಳ್ಳಲು ಬಾಕಿ ಇದೆ. ಶಾಸಕರ ಮೂಲಕ 5 ಲಕ್ಷ ರೂ.ಗೆ ಬೇಡಿಕೆ ಇಡಲಾಗಿದೆ. ಒಟ್ಟು 15 ಲಕ್ಷ ರೂ. ಅನುದಾನದಲ್ಲಿ ಈಗ 5 ಲಕ್ಷ ರೂ. ಬಿಡುಗಡೆಯಾಗಿದ್ದು, ಉಳಿದ ಅನುದಾನ ಮಂಜೂರುಗೊಳ್ಳಬೇಕಷ್ಟೆ ಎಂದು ಜಿ.ಪಂ. ಎಂಜಿನಿಯರಿಂಗ್‌ ವಿಭಾಗ ಮಾಹಿತಿ ನೀಡಿದೆ.

ಒಟ್ಟು 15 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾರ್ಯ ಆರಂಭಿಸಲಾಗುತ್ತದೆ. ಸೇತುವೆಯಲ್ಲಿ ತುಕ್ಕು ಹಿಡಿದ ಕಬ್ಬಿಣದ ಪ್ಲೇಟ್‌ ಬದಲಾವಣೆ, ಎರಡು ಕಡೆಗಳಲ್ಲಿ ಕಾಂಕ್ರೀಟ್‌ ಮೊದಲಾದ ದುರಸ್ತಿ ಕಾಮಗಾರಿ ನಡೆಯಲಿದೆ. ದುರಸ್ತಿ ಸಂದರ್ಭ ಬೇರೆ ಅವಶ್ಯಕತೆ ಕಂಡು ಬಂದಲ್ಲಿ ಆ ಕೆಲಸವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.

ಒಂದು ತಿಂಗಳು ಬಂದ್‌
ಸುಳ್ಯದಿಂದ ಕಾಂತಮಂಗಲ-ಅಜ್ಜಾವರ, ಮಂಡೆಕೋಲು ಮೂಲಕ ಕಾಸರಗೋಡು ಸಂಪರ್ಕಿಸುವ ಅಂತಾರಾಜ್ಯ ಸಂಪರ್ಕ ರಸ್ತೆ ಸೆ. 5ರಿಂದ ಅ. 5ರ ತನಕ ಬಂದ್‌ ಆಗಲಿದೆ. ಇಲ್ಲಿ ಘನ ಮತ್ತು ಲಘು ವಾಹನ ಓಡಾಟ ನಿರ್ಬಂಧಿಸಲಾಗುತ್ತದೆ.

ಪರ್ಯಾಯ ರಸ್ತೆಗಳು
ಕಾಂತಮಂಗಲ ಸೇತುವೆ ಮೂಲಕ ಸಂಚರಿಸುವ ವಾಹನಗಳಿಗೆ ನಾಲ್ಕು ಪರ್ಯಾಯ ರಸ್ತೆಯನ್ನು ಗುರುತಿಸಲಾಗಿದೆ. ಜಿ.ಪಂ. ಎಂಜಿನಿಯರಿಂಗ್‌ ವಿಭಾಗ ಈ ಕುರಿತು ಮಾಹಿತಿ ನೀಡಿದೆ. ದುರಸ್ತಿ ವೇಳೆಸಂಚರಿಸಲು ಬಳಸಬಹುದಾದ ರಸ್ತೆಗಳು ಈ ಕೆಳಗಿನಂತಿವೆ.

1. ಮಂಡೆಕೋಲು-ಮುರೂರು- ಜಾಲ್ಸೂರು-ಸುಳ್ಯ
2. ಅಡ್ಪಂಗಾಯ – ಪೇರಾಲು- ಬೈತಡ್ಕ- ಸುಳ್ಯ
3. ಅಜ್ಜಾವರ-ಪೇರಾಲು-ಬೈತಡ್ಕ- ಸುಳ್ಯ
4. ಅಜ್ಜಾವರ-ನಾರ್ಕೋಡು- ಸುಳ್ಯ

ಸಹಕಾರ ಅಗತ್ಯ
ಕಾಂತಮಂಗಲ ಸೇತುವೆ ದುರಸ್ತಿ ಸೆ. 5ರಿಂದ ಆರಂಭಗೊಳ್ಳುತ್ತದೆ. ಮುಂದಿನ ಒಂದು ತಿಂಗಳು ವಾಹನ ಸಂಚಾರ ಬಂದ್‌ ಮಾಡಲಾಗಿದೆ. ಪರ್ಯಾಯ ರಸ್ತೆ ವ್ಯವಸ್ಥೆ ಮಾಡಲಾಗಿದೆ. ವಾಹನ ಸವಾರರು ಆ ರಸ್ತೆ ಬಳಸಿಕೊಳ್ಳಬಹುದು. ದುರಸ್ತಿ ಸಂದರ್ಭದಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ.
– ಮಣಿಕಂಠ,
ಜಿ.ಪಂ. ಎಂಜಿನಿಯರ್‌

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.