ಡಿಸೆಂಬರ್‌ ಅಂತ್ಯಕ್ಕೆ ಪರಿಹಾರ ಕೇಂದ್ರ ತೆರವು 


Team Udayavani, Dec 23, 2018, 9:05 AM IST

jodupala.jpg

ಅರಂತೋಡು: ಆಗಸ್ಟ್‌ ತಿಂಗಳ ಮಹಾಮಳೆಯಿಂದ ನಿರಾಶ್ರಿತರಾದವರಿಗಾಗಿ ಆರಂಭಿಸಲಾಗಿದ್ದ ಪರಿಹಾರ ಕೇಂದ್ರಗಳನ್ನು ಈ ತಿಂಗಳ ಕೊನೆಗೆ ಮುಚ್ಚಲಾಗುವುದು ಎಂದು ಕೊಡಗು ಜಿಲ್ಲಾಡಳಿತ ಸಂತ್ರಸ್ತರಿಗೆ ಸೂಚನೆ ನೀಡಿದೆ. ಶಾಶ್ವತ ಪುನರ್ವಸತಿ ಇನ್ನೂ ಒದಗದೆ ನಿರಾಶ್ರಿತರು ಮತ್ತೆ ಬೀದಿಗೆ ಬೀಳುವ ಭೀತಿಯಲ್ಲಿದ್ದಾರೆ.

ಕಲ್ಲುಗುಂಡಿ ಮತ್ತು ಸಂಪಾಜೆ ಪರಿಹಾರ ಕೇಂದ್ರಗಳಲ್ಲಿರುವ ಕೆಲವು ನಿರಾಶ್ರಿತರು ಕೊಡಗು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಸಂದರ್ಭ ಈ ಮಾಹಿತಿ ಲಭಿಸಿದೆ. ಡಿಸೆಂಬರ್‌ ಕೊನೆಗೆ ಪರಿಹಾರ ಕೇಂದ್ರ ಮುಚ್ಚಲಾಗುವುದು. ಮನೆ ಬಾಡಿಗೆಗೆ ಎಂದು ಮಾಸಿಕ 10,000 ರೂ. ನೀಡಲಾಗುತ್ತದೆ. ಗುರುತಿಸಲಾದ ಜಾಗದಲ್ಲಿ ಮನೆ ನಿರ್ಮಾಣವಾದ ಬಳಿಕ ಅಲ್ಲಿಗೆ ಕಳುಹಿಸಿ ಕೊಡಲಾಗುತ್ತದೆ ಎಂದು ಕೊಡಗು ಜಿಲ್ಲಾಧಿಕಾರಿ ಹೇಳಿದ್ದಾರೆ ಎಂದು ನಿರಾಶ್ರಿತರು “ಉದಯವಾಣಿ’ಗೆ ತಿಳಿಸಿದ್ದಾರೆ.

ಜೋಡುಪಾಲ ಹಾಗೂ ಎರಡನೇ ಮೊಣ್ಣಂಗೇರಿಯ ನಿರಾಶ್ರಿತರಿಗೆ ಕೊಡಗು ಸಂಪಾಜೆ ಶಾಲೆ ಬಳಿ ಹಾಗೂ ಮದೆನಾಡಿನಲ್ಲಿ ಜಾಗ ಗುರುತಿಸಲಾಗಿದ್ದರೂ ಮನೆ ನಿರ್ಮಾಣ ಇನ್ನೂ ಆರಂಭ ಆಗಿಲ್ಲ. ಪರಿಹಾರ ಕೇಂದ್ರ ಮುಚ್ಚಲ್ಪಟ್ಟು ಬಾಡಿಗೆ ಮನೆಗೆ ತೆರಳಿದ ಬಳಿಕ ಸರಕಾರ ಬಾಡಿಗೆ ಹಣ ನೀಡದಿದ್ದರೆ ನಾವು ಮತ್ತೆ ಬೀದಿ ಪಾಲಾಗಬಹುದು ಎಂಬ ಭಯ ವ್ಯಕ್ತಪಡಿಸಿರುವ ನಿರಾಶ್ರಿತರು, ಇನ್ನೂ ಆರಂಭವೇ ಆಗದ ಮನೆ ಪೂರ್ಣಗೊಳ್ಳಲು ಎಷ್ಟು ಕಾಲ ಹಿಡಿಯಬಹುದು ಎಂಬ ಖಚಿತ ಮಾಹಿತಿ ಇಲ್ಲದೆ ಚಿಂತೆ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗೆ ಮನವಿ
ದಕ್ಷಿಣ ಕನ್ನಡದ ಸಂಪಾಜೆ ಕಲ್ಲುಗುಂಡಿ ಮತ್ತು ಕೊಡಗು ಸಂಪಾಜೆಯ ಪರಿಹಾರ ಕೇಂದ್ರಗಳನ್ನು ಮನೆ ನಿರ್ಮಾಣ ಪೂರ್ಣವಾಗುವ ತನಕ ಮುಚ್ಚಬಾರದು. ನಾವು ಯಾವುದೇ ಕಾರಣಕ್ಕೂ ಪರಿಹಾರ ಕೇಂದ್ರ ಬಿಟ್ಟು ಹೋಗುವುದಿಲ್ಲ ಎಂದು ನಿರಾಶ್ರಿತರು ಜಿಲ್ಲಾಧಿಕಾರಿಗಳಿಗೆ ನೀಡಿದ ಮನವಿಯಲ್ಲಿ ವಿನಂತಿಸಿಕೊಂಡಿದ್ದಾರೆ. 

ನಿರಾಶ್ರಿತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಉಚಿತ ಪಾಸ್‌ ನೀಡಲಾಗಿತ್ತು. ಅದನ್ನು ನವೀಕರಣ ಮಾಡದೆ ಅಧಿಕಾರಿಗಳು ಸತಾಯಿಸುತ್ತಿದ್ದರು. ಈ ಬಗ್ಗೆ “ಉದಯವಾಣಿ’ಯಲ್ಲಿ ವರದಿ ಪ್ರಕಟವಾದ ಬಳಿಕ ಕೆಎಸ್ಸಾರ್ಟಿಸಿ ಪಾಸ್‌ ನವೀಕರಿಸಿತ್ತು. ಈಗ ಪಾಸ್‌ ಅವಧಿ ಮುಗಿದಿದ್ದು, ಮತ್ತೆ ನವೀಕರಿಸಿಲ್ಲ. 

ಡಿಸೆಂಬರ್‌ ಕೊನೆಯ ವೇಳೆಗೆ ಪರಿಹಾರ ಕೇಂದ್ರ ತೆರವುಗೊಳಿಸುತ್ತೇವೆ, ಪ್ರತಿ ಕುಟುಂಬಕ್ಕೆ ತಿಂಗಳಿಗೆ 10 ಸಾವಿರ ರೂ. ಮನೆ ಬಾಡಿಗೆಯಾಗಿ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಆದರೆ ಈ ತನಕ ಕೆಲವರಿಗೆ 3,800 ರೂ. ಬಿಟ್ಟರೆ ಬೇರೇನೂ ಪರಿಹಾರ ನೀಡಿಲ್ಲ. ಈ ಕಾರಣದಿಂದ ಭರವಸೆಯ ಮೇಲೆ ನಂಬಿಕೆ ಇಲ್ಲ. ಮನೆ ನಿರ್ಮಾಣ ಮಾಡಿಕೊಡುವ ತನಕ ನಾವು ಎಲ್ಲಿಗೂ ಹೋಗುವುದಿಲ್ಲ.
ಭುವನೇಶ್ವರಿ ಸಂತ್ರಸ್ತೆ, ಜೋಡುಪಾಲ

 ಪರಿಹಾರ ಕೇಂದ್ರಗಳಲ್ಲಿ  ಇರುವ ಸಂತ್ರಸ್ತರಿಗೆ ಬಾಡಿಗೆ  ಮನೆ ಹುಡುಕಲು ಡಿಸೆಂಬರ್‌ ಕೊನೆಯ ವಾರದವರೆಗೆ ಸಮಯಾವಕಾಶ ನೀಡಲಾಗುವುದು. ಆ ಬಳಿಕ ಅರ್ಹರಿಗೆ ಬಾಡಿಗೆಯಾಗಿ ಮಾಸಿಕ 10,000ರೂ.ಒದಗಿಸಲಾಗುವುದು.  
ಶ್ರೀ ವಿದ್ಯಾ  ಜಿಲ್ಲಾಧಿಕಾರಿ,  ಕೊಡಗು

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.