ಅತಿವೃಷ್ಟಿ ಬಳಿಕ ಮೂರನೇ ಮದುವೆ: ಹೊಸ ಜೀವನಕ್ಕೆ ವಾರಿಜಾ, ರುದ್ರೇಶ್‌


Team Udayavani, Sep 7, 2018, 10:50 AM IST

z-marriage-1.jpg

ಅರಂತೋಡು/ ಮಡಿಕೇರಿ: ಕೊಡಗಿನಲ್ಲಿ ಪ್ರಕೃತಿ ಮುನಿಸಿಕೊಂಡ ಪರಿಣಾಮ ಶುಭ ಕಾರ್ಯಗಳಿಗೂ ವಿಘ್ನ ಎದುರಾಗಬಹುದೆನ್ನುವ ಆತಂಕದ ನಡುವೆಯೇ ಹೃದಯವಂತರ ಸಹಕಾರದಿಂದ ಸಂತ್ರಸ್ತ ಕುಟುಂಬಗಳ ಮಕ್ಕಳ ವಿವಾಹ ಮಹೋತ್ಸವಗಳು ನಿರ್ವಿಘ್ನವಾಗಿ ನಡೆಯುತ್ತಿವೆ. 

ಈಗಾಗಲೇ ನಿಗದಿಯಾಗಿದ್ದ ವಿವಾಹಗಳು ಗುಡ್ಡಗಳು ಕುಸಿದಷ್ಟೇ ವೇಗವಾಗಿ ಮುರಿದು ಬೀಳಬಹುದೆನ್ನುವ ಬೇಸರ ಹೆಣ್ಣು ಹೆತ್ತ ಕುಟುಂಬಗಳಲ್ಲಿತ್ತು. ಆದರೆ ವಿವಿಧ ಸಂಘ, ಸಂಸ್ಥೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ನಿಶ್ಚಿತಾರ್ಥವಾಗಿದ್ದ ಮದುವೆಯನ್ನು ನಿಗದಿತ ಮುಹೂರ್ತದಲ್ಲಿ ನೆರವೇರಿಸುವ ಮೂಲಕ ನೊಂದ ಮನಗಳಲ್ಲಿ ಮುಗುಳ್ನಗೆ ಬೀರುವಂತೆ ಮಾಡಿದ್ದಾರೆ.

ಮಹಾಮಳೆಯ ಅನಂತರ ಜಿಲ್ಲೆಯಲ್ಲಿ ಎರಡು ಜೋಡಿಯ ವಿವಾಹ ಸಾರ್ವಜನಿಕರ ಸಹಕಾರದಿಂದಲೇ ನಡೆದಿತ್ತು. ಗುರುವಾರ ಮೂರನೇ ಜೋಡಿಯ ವಿವಾಹ ಕೂಡ ವಿವಿಧ ಸಂಘ, ಸಂಸ್ಥೆಗಳ ಸಹಾಯ ಹಸ್ತದ ಮೂಲಕವೇ ನೆರವೇರಿತು. ಜೋಡುಪಾಲ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ನಿರಾಶ್ರಿತರಾಗಿ ಕಲ್ಲುಗುಂಡಿ ಸ. ಹಿ. ಪ್ರಾಥಮಿಕ ಶಾಲೆಯ ಪರಿಹಾರ ಕೇಂದ್ರದಲ್ಲಿ ವಾಸ್ತವ್ಯವಿದ್ದ ದಿ| ಕೃಷ್ಣಪ್ಪ ನಾೖಕ ಅವರ ಪುತ್ರಿ ವಾರಿಜಾ ಅವರ ವಿವಾಹವು ಪುಣೆ ಮೂಲದ ರುದ್ರೇಶ್‌ ಅವರೊಂದಿಗೆ ನಗರದ ಅಶ್ವಿ‌ನ ಆಸ್ಪತ್ರೆ ಆವರಣದಲ್ಲಿರುವ ಗಣಪತಿ ದೇವಾಲಯದಲ್ಲಿ ನೆರವೇರಿತು. 

ಪರಿಹಾರ ಕೇಂದ್ರದಲ್ಲೇ ಮದರಂಗಿ ಶಾಸ್ತ್ರ!
ಮದುರಂಗಿ ಕಾರ್ಯಕ್ರಮವನ್ನು ಕಲ್ಲುಗುಂಡಿ ಸ. ಹಿ. ಪ್ರಾಥಮಿಕ ಶಾಲೆಯ ನಿರಾಶ್ರಿತರ ಕೇಂದ್ರದಲ್ಲೇ ನಡೆಸ ಲಾಯಿತು. ವಧುವಿನ ತಾಯಿ ರೋಹಿಣಿ ಹಾಗೂ ಕುಟುಂಬಸ್ಥರು, ಕೇಂದ್ರದ ನಿವಾಸಿಗಳು ಉಪಸ್ಥಿತರಿದ್ದರು. ಸುಳ್ಯ ತಹಶೀಲಾಲ್ದರ್‌ ಕುಂಞಮ್ಮ, ಊರ ಪ್ರಮುಖರಾದ ಗ್ರಾ.ಪಂ. ಸದಸ್ಯರಾದ ಸೋಮಶೇಖರ ಕೊಯಿಂಗಾಜೆ, ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಪಿ. ಜಗದೀಶ್‌, ಮಾಜಿ ಅಧ್ಯಕ್ಷೆ ಬಿ.ಎಸ್‌. ಯಮುನಾ, ಸದಸ್ಯರಾದ ಜಿ.ಕೆ. ಹಮೀದ್‌ ಗೂನಡ್ಕ, ನಾಗೇಶ್‌ ಪಿ.ಆರ್‌, ಗಣ್ಯರಾದ ಬಾಲಚಂದ್ರ ಕಳಗಿ, ಪಿ.ಎಲ್‌. ಆನಂದ ಗೌಡ, ಎಸ್‌.ಕೆ. ಮಹಮ್ಮದ್‌ ಹನೀಫ್, ಹರೀಶ್‌, ಅವಿನ್‌ ರಂಗತ್‌ಮಲೆ, ಕಾರ್ತಿಕ್‌, ಸೋಮನಾಥ, ಭರತ್‌, ಉಮೇಶ್‌, ಪ್ರಶಾತ್‌ ವಿ.ವಿ., ಕಿಶೋರ್‌ ಕುಮಾರ್‌ ಪಿ.ಬಿ., ಯೂಸುಫ್ ಕಲ್ಲುಗುಂಡಿ, ವಿಜಯ ನಿಡಿಂಜಿ, ಪ್ರಕಾಶ್‌ ರೈ, ಮನೋಹರ, ಕಿಶೋರ್‌ ಬಿ.ಎಸ್‌., ಕಾಂತಿ ಬಿ.ಎಸ್‌. ಅವಿನಾಶ್‌, ಮೆಲ್ವಿನ್‌, ಪೊಲೀಸ್‌ ಇಲಾಖೆಯ ಸುನಿಲ್‌ ಹಾಗೂ ಸಿಬಂದಿ ಹಾಗೂ ಚೆಂಬು, ಸಂಪಾಜೆ ಗ್ರಾಮದ ಊರವರು ಭಾಗವಹಿಸಿದರು.

ಪಶುಪಾಲನಾ ಕೇಂದ್ರದಲ್ಲಿ 101 ಹಸುಗಳು 
ಮಡಿಕೇರಿ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕೂಡಿಗೆಯ ಜರ್ಸಿ ತಳಿ ಸಂವರ್ಧನಾ ಕೇಂದ್ರದಲ್ಲಿ ಪ್ರಕೃತಿ ವಿಕೋಪ ಜಾನುವಾರು ಸಂರಕ್ಷಣಾ ಮತ್ತು ಪಾಲನಾ ಕೇಂದ್ರದಲ್ಲಿ ಈಗಾಗಲೇ 101 ಹಸುಗಳು ದಾಖಲಾಗಿವೆ. ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳಾದ ಮುಕ್ಕೊಡ್ಲು, ಹಟ್ಟಿಹೊಳೆ, ಮಾದಾಪುರ, ಇಗ್ಗೊಡು, ತಂತಿಪಾಲ ಸಹಿತ ಕೆಲವು ಪ್ರದೇಶಗಳಿಂದ ರಕ್ಷಿಸಲಾದ ಹಸುಗಳಿಗೆ ಇಲ್ಲಿ ಆರೈಕೆ ಮಾಡಲಾಗುತ್ತಿವೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.