ಗಡಿಪಿಲ: ವಿದ್ಯುತ್ ಕಂಬಕ್ಕೆ ಪಿಕಪ್ ಢಿಕ್ಕಿ
Team Udayavani, Sep 7, 2018, 2:15 PM IST
ನರಿಮೊಗರು: ಕಾಣಿಯೂರು ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗಡಿಪಿಲ ಸಮೀಪ ಪಿಕಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಕಂಬವೂ ತುಂಡಾಗಿ ಧರೆಗೆ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಪುತ್ತೂರು ಕಡೆಯಿಂದ ಬರುತಿದ್ದ ಪಿಕಪ್, ಗಡಿಪಿಲ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸವಣೂರು ಸಬ್ ಸ್ಟೇಷನ್ಗೆ ವಿದ್ಯುತ್ ಪ್ರವಹಿಸುವ ಎಚ್.ಟಿ. ಲೈನ್ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಬುಡದಿಂದಲೇಕಿತ್ತು ಬಂದಿದೆ. ಅಪಘಾತದಿಂದಾಗಿ ಸವಣೂರು ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆಯಾಗಿದೆ. ಹೀಗಾಗಿ, ಪಿಕಪ್ ಚಾಲಕ ಮತ್ತು ನಿರ್ವಾಹಕ ಅದೃಷ್ಟವಶಾತ್ ಪಾರಾಗಿದ್ದಾರೆ. ಗಡಿಪಿಲ – ಮಂಜೇಶ್ವರ – ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಅತೀ ಹೆಚ್ಚು ಅಪಘಾತ ಸಂಭವಿಸುವ ಪ್ರದೇಶ ಇದಾಗಿದ್ದು, ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ವಿದ್ಯುತ್ ನಿಲುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ