ಸೆ. 16: ಬೆನ್ನು ಮೂಳೆ ರೋಗಿಗಳ ಸೇವಾಧಾಮ ಉದ್ಘಾಟನೆ


Team Udayavani, Sep 7, 2018, 2:44 PM IST

7-september-17.jpg

ಬೆಳ್ತಂಗಡಿ: ಕನ್ಯಾಡಿಯ ಸೇವಾ ಭಾರತಿಯು ಬೆಂಗಳೂರಿನ ಎಪಿಡಿ ಸಂಸ್ಥೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಿರುವ ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಸಾಮಾಜಿಕ ಪುನಃಶ್ಚೇತನ ಕೇಂದ್ರ ಸೇವಾಧಾಮದ ಉದ್ಘಾಟನ ಸಮಾರಂಭ ಸೆ. 16ರಂದು ಬೆಳಗ್ಗೆ 10.30ಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ. ವಿನಾಯಕ ರಾವ್‌ ತಿಳಿಸಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಮಾಜಿಕವಾಗಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಸೇವಾ ಭಾರತಿ ಸಂಸ್ಥೆ ಈ ವರ್ಷ ಬಾಲಭಾರತಿ, ಪುನಶ್ಚೇತನ ಕೇಂದ್ರ ಉದ್ಘಾಟನೆಯ ಯೋಜನೆ ಹಾಕಿಕೊಂಡಿತ್ತು. ಪ್ರಸ್ತುತ ಅದರ ಉದ್ಘಾಟನೆ ನಡೆಯಲಿದ್ದು, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ನವರು ಉಚಿತವಾಗಿ ನೀಡಿದ ಕಟ್ಟಡದಲ್ಲಿ ಕೇಂದ್ರ ಕಾರ್ಯಾಚರಿಸಲಿದೆ ಎಂದರು. 

ಕೇಂದ್ರದಲ್ಲಿ ಪ್ರಸ್ತುತ 5 ಮಂದಿ ಬೆನ್ನುಮೂಳೆ ಮುರಿತಕ್ಕೊಳಗಾದವರನ್ನು ಮಾನಸಿಕ, ದೈಹಿಕವಾಗಿ ಸದೃಢಗೊಳಿಸುವ ಕೆಲಸ ಮಾಡಲಾಗುತ್ತದೆ. ಇವರು ಸುಮಾರು 2 ತಿಂಗಳ ಕಾಲ ಇಲ್ಲಿ ನಿಲ್ಲಬೇಕಾಗಿದ್ದು, ಫಿಸಿಯೋಥೆರಪಿ, ಭಜನೆ, ಆರೈಕೆ ಮೊದಲಾದ ಕೆಲಸ ಮಾಡಲಾಗುತ್ತದೆ. ತಾಲೂಕಿನಲ್ಲಿ ಸದ್ಯ 60 ಮಂದಿ ಬೆನ್ನುಮೂಳೆ ಮುರಿತಕ್ಕೊಳಗಾದವರಿದ್ದು, ಜಿಲ್ಲೆಯಲ್ಲಿ 500 ಮಂದಿಯಿರಬಹುದು ಎಂದರು.

ಪ್ರಸ್ತುತ ಒಮ್ಮೆ ಭೇಟಿ ನೀಡಿದವರಿಗೆ 10,500 ರೂ. ಚಾರ್ಜ್‌ ಮಾಡಲಾಗುತ್ತಿದ್ದು, ರೋಗಿಗಳ ಜತೆಗೆ ಒಬ್ಬರು ಆರೈಕೆ ಮಾಡುವವರೂ ಇರುತ್ತಾರೆ. ಸದ್ಯಕ್ಕೆ 16 ಲಕ್ಷ ರೂ. ಅನುದಾನದ ಅಗತ್ಯವಿದ್ದು, ದಾನಿಗಳ ಮೂಲಕ ಅದನ್ನು ಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ. ಕೇಂದ್ರಕ್ಕೆ ಈಗಾಗಲೇ 7 ಮಂದಿ ಸಿಬಂದಿಯನ್ನೂ ನೇಮಕ ಮಾಡಲಾಗಿದೆ ಎಂದರು.

ಸೇವಾಧಾಮವನ್ನು ದಂತವೈದ್ಯೆ ಡಾ| ರಾಜಲಕ್ಷ್ಮೀ ಎಸ್‌.ಜೆ. ಉದ್ಘಾಟಿಸಲಿದ್ದು, ಶಾಸಕ ಹರೀಶ್‌ ಪೂಂಜ ಕಾರ್ಯಾಲಯ, ಸಂಸದ ನಳಿನ್‌ಕುಮಾರ್‌ ಕಟೀಲು ವಸತಿ ವಿಭಾಗ, ವಿ.ಪ. ಸದಸ್ಯ ಕೆ. ಹರೀಶ್‌ ಕುಮಾರ್‌ ಫಿಸಿಯೋಥೆರಪಿ ವಿಭಾಗವನ್ನು ಉದ್ಘಾಟಿಸಲಿದ್ದಾರೆ ಎಂದರು. ಸಂಸ್ಥೆಯ ಅಧ್ಯಕ್ಷ ಬಿ. ಕೃಷ್ಣಪ್ಪ ಗುಡಿಗಾರ್‌, ಉಪಾಧ್ಯಕ್ಷ ಕೆ. ರಾಘವೇಂದ್ರ ಬೈಪಡಿತ್ತಾಯ, ಕೇಂದ್ರದ ವ್ಯವಸ್ಥಾಪಕ ಬಾಲಕೃಷ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.