ಪುಣ್ಚಪ್ಪಾಡಿ: ನಿವೇಶನದ ಜಾಗದ ಸರ್ವೇ
Team Udayavani, Sep 8, 2018, 2:40 PM IST
ಸವಣೂರು: ಪುಣ್ಚಪ್ಪಾಡಿ ಗ್ರಾಮದ ಕುಮಾರ ಮಂಗಲದಲ್ಲಿ ನಿವೇಶನಕ್ಕಾಗಿ ಕಾದಿರಿಸಿದ ಜಾಗದ ಹಕ್ಕುಪತ್ರ ಹೊಂದಿರುವ ಫಲಾನುಭವಿಗಳಿಗೆ ಗಡಿ ಗುರುತು ಮಾಡಿಕೊಡುವ ನಿಟ್ಟಿನಲ್ಲಿ ಶುಕ್ರವಾರ ಸರ್ವೇಯರ್ ಸ್ಥಳಕ್ಕೆ ಭೇಟಿ ನೀಡಿದರು.
ಕಡಬ ಕಂದಾಯ ಇಲಾಖೆಯ ಸರ್ವೇಯರ್ ಶಿವಣ್ಣ ಹಾಗೂ ಅವರ ತಂಡ ಸರ್ವೇ ಕಾರ್ಯ ನಡೆಸಿ, ಗಡಿ ಗುರುತು ಮಾಡಿದರು. ಸವಣೂರು ಗ್ರಾಮ ಪಂಚಾಯತ್ ಈ ಸ್ಥಳವನ್ನು ನಿವೇಶನಕ್ಕಾಗಿ ಕಾದಿರಿಸಿದ್ದರೂ, ಕೆಲವೊಂದು ತಾಂತ್ರಿಕ ಕಾರಣ, ಅಧಿಕಾರಿಗಳ ಸ್ಪಂದನೆ ದೊರೆಯದ ಕಾರಣ ಪಲಾನುಭವಿಗಳಿಗೆ ನಿವೇಶನದ ಗಡಿಗುರುತು ಮಾಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈ ಕುರಿತು ಉದಯವಾಣಿ ಸುದಿನ ಜೂ. 25ರಂದು ಸಚಿತ್ರ ವರದಿ ಪ್ರಕಟಿಸಿತ್ತು.
ಇಲ್ಲಿ ಮನೆ ಹೊಂದಿರುವ ಪಲಾನುಭವಿಗಳು ನಿವೇಶನದ ಗಡಿಗುರುತು ಮಾಡಿಸುವ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದರೂಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಸ್ಪಂದನೆ ದೊರೆಯದೆ ಕಂಗಾಲಾಗಿದ್ದರು. ಸಮಸ್ಯೆಯನ್ನು ಮನಗಂಡ ಸವಣೂರು ಗ್ರಾಮ ಪಂಚಾಯತ್ ಫಲಾನುಭವಿಗಳಿಗೆ ನಿವೇಶನ ಒದಗಿಸಿಕೊಡುವ ನಿಟ್ಟಿನಲ್ಲಿ ಸತತ ಪ್ರಯತ್ನಪಟ್ಟಿದ್ದು, ಇದೀಗ ಸರ್ವೇಯರ್ ಗಡಿಗುರುತು ಮಾಡಿರುವುದು ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಸಹಕಾರಿಯಾಗಲಿದೆ.
ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ., ಪಿಡಿಓ ನಾರಾಯಣ ಬಟ್ಟೋಡಿ, ಸದಸ್ಯೆ ವೇದಾವತಿ, ಮಾಜಿ ಸದಸ್ಯ ನಾಗರಾಜ್, ಸಿಬಂದಿ ಪ್ರಮೋದ್ ಕುಮಾರ್ ರೈ, ಗ್ರಾಮಕರಣಿಕ ಸುನೀಲ್, ಗ್ರಾಮ ಸಹಾಯಕ ಶೀನಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ