ಪರಿಹಾರ ನಿಮ್ಮ ಹಕ್ಕಿನದ್ದಾಗಿದೆ: ನಳಿನ್‌ ಕುಮಾರ್‌


Team Udayavani, Sep 8, 2018, 2:55 PM IST

8-sepctember-16.jpg

ಬಂಟ್ವಾಳ: ಪ್ರಕೃತಿ ವಿಕೋಪದಿಂದ ನಷ್ಟ ಹೊಂದಿರುವ ಮಂದಿ ಪಡೆಯುತ್ತಿರುವ ಪರಿಹಾರವು ನಿಮ್ಮ ಹಕ್ಕಿನದ್ದಾಗಿದೆ. ಕೇಂದ್ರ ಸರಕಾರವು ಪ್ರಕೃತಿ ವಿಕೋಪ ಅಡಿಯಲ್ಲಿ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಪ್ರಧಾನಿ ಮೋದಿ ಅವರು ನಮ್ಮ ಹಕ್ಕುಗಳನ್ನು ನಮಗೆ ಒಪ್ಪಿಸುತ್ತಿದ್ದಾರೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಅವರು ಸೆ. 7ರಂದು ಬಂಟ್ವಾಳ ಶಾಸಕರ ಕಚೇರಿಯಲ್ಲಿ ಪಾಣೆಮಂಗಳೂರು, ಬಂಟ್ವಾಳ, ವಿಟ್ಲ ಹೋಬಳಿ ಮಟ್ಟದ ಪ್ರಕೃತಿ ವಿಕೋಪ ಪರಿಹಾರ ವಿತರಣೆ, ವಿವಿಧ ಯೋಜನೆಗಳ ನಷ್ಟ ಪರಿಹಾರ ಮೊತ್ತ 18,16,252 ರೂ. ಚೆಕ್ಕನ್ನು 148 ಮಂದಿಗೆ ವಿತರಿಸಿ ಮಾತನಾಡಿದರು.

ಜನಸಾಮಾನ್ಯನ ಸಂಕಷ್ಟದ ಸಮಯದಲ್ಲಿ ಸರಕಾರ ನಿಮ್ಮ ಜತೆಗಿದೆ. ಅರ್ಹ ಫಲಾನುಭವಿಗಳು ಸೂಕ್ತ ಅರ್ಜಿ ಸಲ್ಲಿಸಿ ಸರಕಾರದ ನಿಯಮಾನುಸಾರ ಇರುವ ಪರಿಹಾರ ಪಡೆಯಬೇಕು. ನಿಮ್ಮ ಸಮಸ್ಯೆ ಬಗ್ಗೆ ಶಾಸಕರಲ್ಲಿ ಮನವಿ ಮಾಡಿ ಅರ್ಜಿ ನೀಡಿದಲ್ಲಿ ಅದಕ್ಕೂ ನಿಯಮಾನುಸಾರ ಸ್ಪಂದನ ನೀಡುತ್ತಾರೆ ಎಂದರು.

ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಮಾತನಾಡಿ, ಇಂದು ಜಿಲ್ಲೆಗೆ ಬರುವ ಮುಖ್ಯಮಂತ್ರಿಯವರಿಗೆ ಜಿಲ್ಲೆಯ ಜನರ ಸಂಕಷ್ಟಗಳನ್ನು ತಿಳಿಸಿ ಇನ್ನಷ್ಟು ಪರಿಹಾರ ನೀಡಲು ಮನವಿ ಮಾಡಲಾಗುವುದು. ಇಲ್ಲಿ ವಿತರಿಸುವ ಎಲ್ಲ ಸೌಲಭ್ಯಗಳು ಸರಕಾರದ ಮಟ್ಟದಿಂದ ಬಂದಿರುತ್ತವೆ. ನಾವು ಸರಕಾರದಿಂದ ಬರುವ ಪರಿಹಾರವನ್ನು ನಿಮಗೆ ನ್ಯಾಯೋಚಿತವಾಗಿ ಒದಗಿಸುವ ಕೆಲಸ ಮಾಡುತ್ತೇವೆ. ನಿಮ್ಮ ಸಂಕಷ್ಟಗಳ ಬಗ್ಗೆ ಸರಕಾರಕ್ಕೆ ಮನವಿ ಮಾಡುತ್ತೇವೆ. ಅಧಿಕಾರಿ ವರ್ಗದವರು ನೆರೆ ಪರಿಹಾರ, ರಾಷ್ಟ್ರೀಯ ಕುಟುಂಬ ಪರಿಹಾರ ವಿತರಣೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಉತ್ತಮ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಬಗ್ಗೆ ನಮಗೆ ಅಭಿಮಾನವಿದೆ ಎಂದರು.

ಜನರು ಸರಕಾರವು ಒದಗಿಸಿರುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ನಿಮಗೆ ಅರ್ಹವಾಗಿ ಸಂದಾಯ ಆಗಬೇಕಾದ ಸವಲತ್ತುಗಳನ್ನು ಪಡೆಯಲು ಹಿಂಜರಿಕೆ ಬೇಡ ಎಂದರು. ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಮಾತನಾಡಿ, ಜನಪ್ರತಿನಿಧಿಗಳು ಜನರ ಸಂಕಷ್ಟಕ್ಕೆ ನೆರವಾಗಬೇಕು. ಪ್ರಸ್ತುತ ವರ್ಷದಲ್ಲಿ ಅತಿವೃಷ್ಟಿಯಿಂದ ಅಡಿಕೆ ಕೊಳೆ ರೋಗದಿಂದ ದೊಡ್ಡ ಪ್ರಮಾಣದ ನಷ್ಟ ಅನುಭವಿಸಿದೆ. ಅಡಿಕೆ ಮಾತ್ರವಲ್ಲ, ಕಾಳುಮೆಣಸು ಸಹಿತ ಇತರ ಕೃಷಿಗಳಿಗೂ ಮಳೆಯಿಂದ ಹಾನಿ ಒದಗಿದೆ. ಸರಕಾರದಿಂದ ಪ್ರಸ್ತುತ ಇರುವ ಪರಿಹಾರ ಮೊತ್ತ ನಾವು ಸಲ್ಲಿಸುವ ಅರ್ಜಿಯ ಮೊತ್ತಕ್ಕೂ ಸಾಕಾಗುವುದಿಲ್ಲ ಎಂದರು. ಕೊಳೆರೋಗ ಪರಿಹಾರ ಹೆಚ್ಚಿಸಬೇಕು. ನಷ್ಟ ಪರಿಹಾರವನ್ನು ಅಧಿಕಾರಿಗಳ ಮೂಲಕ ಅಂದಾಜಿಸಬೇಕು ಎಂಬುದಕ್ಕಾಗಿ ತಾ| ಕಚೇರಿಯ ಎದುರು ಕೊಳೆ ರೋಗದಿಂದ ಉದುರಿದ ಅಡಿಕೆ ನಳ್ಳಿಯನ್ನು ಹಾಕಿ ಪ್ರತಿಭಟನೆ ಮಾಡಲಾಗಿದೆ. 

ಅವಕಾಶ
94 ಸಿಸಿ ಅರ್ಜಿ ಸಲ್ಲಿಸದವರು ಸೆ. 16ರ ತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅನೇಕ ಜನರು ತಿಳಿವಳಿಕೆಯ ಕೊರತೆ, ಸಂಪರ್ಕದ ಕೊರತೆ, ಬಡತನಗಳಿಂದ ಅರ್ಜಿ ಸಲ್ಲಿಸದೇ ಇರಬಹುದು. ನಿಮ್ಮ ಮನೆ ಅಡಿ ಸ್ಥಳಕ್ಕೆ ನೀವು ಈಗಲೂ ಅರ್ಜಿ ಸಲ್ಲಿಸಲು ಅವಕಾಶ ಇದೆ.
– ರಾಜೇಶ್‌ ನಾೖಕ್‌
ಉಳಿಪ್ಪಾಡಿಗುತ್ತು ಶಾಸಕರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.