ಪರಿಹಾರ ನಿಮ್ಮ ಹಕ್ಕಿನದ್ದಾಗಿದೆ: ನಳಿನ್‌ ಕುಮಾರ್‌


Team Udayavani, Sep 8, 2018, 2:55 PM IST

8-sepctember-16.jpg

ಬಂಟ್ವಾಳ: ಪ್ರಕೃತಿ ವಿಕೋಪದಿಂದ ನಷ್ಟ ಹೊಂದಿರುವ ಮಂದಿ ಪಡೆಯುತ್ತಿರುವ ಪರಿಹಾರವು ನಿಮ್ಮ ಹಕ್ಕಿನದ್ದಾಗಿದೆ. ಕೇಂದ್ರ ಸರಕಾರವು ಪ್ರಕೃತಿ ವಿಕೋಪ ಅಡಿಯಲ್ಲಿ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಪ್ರಧಾನಿ ಮೋದಿ ಅವರು ನಮ್ಮ ಹಕ್ಕುಗಳನ್ನು ನಮಗೆ ಒಪ್ಪಿಸುತ್ತಿದ್ದಾರೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಅವರು ಸೆ. 7ರಂದು ಬಂಟ್ವಾಳ ಶಾಸಕರ ಕಚೇರಿಯಲ್ಲಿ ಪಾಣೆಮಂಗಳೂರು, ಬಂಟ್ವಾಳ, ವಿಟ್ಲ ಹೋಬಳಿ ಮಟ್ಟದ ಪ್ರಕೃತಿ ವಿಕೋಪ ಪರಿಹಾರ ವಿತರಣೆ, ವಿವಿಧ ಯೋಜನೆಗಳ ನಷ್ಟ ಪರಿಹಾರ ಮೊತ್ತ 18,16,252 ರೂ. ಚೆಕ್ಕನ್ನು 148 ಮಂದಿಗೆ ವಿತರಿಸಿ ಮಾತನಾಡಿದರು.

ಜನಸಾಮಾನ್ಯನ ಸಂಕಷ್ಟದ ಸಮಯದಲ್ಲಿ ಸರಕಾರ ನಿಮ್ಮ ಜತೆಗಿದೆ. ಅರ್ಹ ಫಲಾನುಭವಿಗಳು ಸೂಕ್ತ ಅರ್ಜಿ ಸಲ್ಲಿಸಿ ಸರಕಾರದ ನಿಯಮಾನುಸಾರ ಇರುವ ಪರಿಹಾರ ಪಡೆಯಬೇಕು. ನಿಮ್ಮ ಸಮಸ್ಯೆ ಬಗ್ಗೆ ಶಾಸಕರಲ್ಲಿ ಮನವಿ ಮಾಡಿ ಅರ್ಜಿ ನೀಡಿದಲ್ಲಿ ಅದಕ್ಕೂ ನಿಯಮಾನುಸಾರ ಸ್ಪಂದನ ನೀಡುತ್ತಾರೆ ಎಂದರು.

ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಮಾತನಾಡಿ, ಇಂದು ಜಿಲ್ಲೆಗೆ ಬರುವ ಮುಖ್ಯಮಂತ್ರಿಯವರಿಗೆ ಜಿಲ್ಲೆಯ ಜನರ ಸಂಕಷ್ಟಗಳನ್ನು ತಿಳಿಸಿ ಇನ್ನಷ್ಟು ಪರಿಹಾರ ನೀಡಲು ಮನವಿ ಮಾಡಲಾಗುವುದು. ಇಲ್ಲಿ ವಿತರಿಸುವ ಎಲ್ಲ ಸೌಲಭ್ಯಗಳು ಸರಕಾರದ ಮಟ್ಟದಿಂದ ಬಂದಿರುತ್ತವೆ. ನಾವು ಸರಕಾರದಿಂದ ಬರುವ ಪರಿಹಾರವನ್ನು ನಿಮಗೆ ನ್ಯಾಯೋಚಿತವಾಗಿ ಒದಗಿಸುವ ಕೆಲಸ ಮಾಡುತ್ತೇವೆ. ನಿಮ್ಮ ಸಂಕಷ್ಟಗಳ ಬಗ್ಗೆ ಸರಕಾರಕ್ಕೆ ಮನವಿ ಮಾಡುತ್ತೇವೆ. ಅಧಿಕಾರಿ ವರ್ಗದವರು ನೆರೆ ಪರಿಹಾರ, ರಾಷ್ಟ್ರೀಯ ಕುಟುಂಬ ಪರಿಹಾರ ವಿತರಣೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಉತ್ತಮ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಬಗ್ಗೆ ನಮಗೆ ಅಭಿಮಾನವಿದೆ ಎಂದರು.

ಜನರು ಸರಕಾರವು ಒದಗಿಸಿರುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ನಿಮಗೆ ಅರ್ಹವಾಗಿ ಸಂದಾಯ ಆಗಬೇಕಾದ ಸವಲತ್ತುಗಳನ್ನು ಪಡೆಯಲು ಹಿಂಜರಿಕೆ ಬೇಡ ಎಂದರು. ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಮಾತನಾಡಿ, ಜನಪ್ರತಿನಿಧಿಗಳು ಜನರ ಸಂಕಷ್ಟಕ್ಕೆ ನೆರವಾಗಬೇಕು. ಪ್ರಸ್ತುತ ವರ್ಷದಲ್ಲಿ ಅತಿವೃಷ್ಟಿಯಿಂದ ಅಡಿಕೆ ಕೊಳೆ ರೋಗದಿಂದ ದೊಡ್ಡ ಪ್ರಮಾಣದ ನಷ್ಟ ಅನುಭವಿಸಿದೆ. ಅಡಿಕೆ ಮಾತ್ರವಲ್ಲ, ಕಾಳುಮೆಣಸು ಸಹಿತ ಇತರ ಕೃಷಿಗಳಿಗೂ ಮಳೆಯಿಂದ ಹಾನಿ ಒದಗಿದೆ. ಸರಕಾರದಿಂದ ಪ್ರಸ್ತುತ ಇರುವ ಪರಿಹಾರ ಮೊತ್ತ ನಾವು ಸಲ್ಲಿಸುವ ಅರ್ಜಿಯ ಮೊತ್ತಕ್ಕೂ ಸಾಕಾಗುವುದಿಲ್ಲ ಎಂದರು. ಕೊಳೆರೋಗ ಪರಿಹಾರ ಹೆಚ್ಚಿಸಬೇಕು. ನಷ್ಟ ಪರಿಹಾರವನ್ನು ಅಧಿಕಾರಿಗಳ ಮೂಲಕ ಅಂದಾಜಿಸಬೇಕು ಎಂಬುದಕ್ಕಾಗಿ ತಾ| ಕಚೇರಿಯ ಎದುರು ಕೊಳೆ ರೋಗದಿಂದ ಉದುರಿದ ಅಡಿಕೆ ನಳ್ಳಿಯನ್ನು ಹಾಕಿ ಪ್ರತಿಭಟನೆ ಮಾಡಲಾಗಿದೆ. 

ಅವಕಾಶ
94 ಸಿಸಿ ಅರ್ಜಿ ಸಲ್ಲಿಸದವರು ಸೆ. 16ರ ತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅನೇಕ ಜನರು ತಿಳಿವಳಿಕೆಯ ಕೊರತೆ, ಸಂಪರ್ಕದ ಕೊರತೆ, ಬಡತನಗಳಿಂದ ಅರ್ಜಿ ಸಲ್ಲಿಸದೇ ಇರಬಹುದು. ನಿಮ್ಮ ಮನೆ ಅಡಿ ಸ್ಥಳಕ್ಕೆ ನೀವು ಈಗಲೂ ಅರ್ಜಿ ಸಲ್ಲಿಸಲು ಅವಕಾಶ ಇದೆ.
– ರಾಜೇಶ್‌ ನಾೖಕ್‌
ಉಳಿಪ್ಪಾಡಿಗುತ್ತು ಶಾಸಕರು

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.