ಶಾಲೆ ಶತಮಾನೋತ್ಸವ ನೆನಪಿಗೆ ಅಡಿಕೆ ತೋಟ


Team Udayavani, Sep 9, 2018, 10:10 AM IST

9-sepctember-2.jpg

ಸುಳ್ಯ: ಶಾಲೆಯ ಶತಮಾನೋತ್ಸವದ ಆಚರಣೆಯನ್ನು ಸ್ಮರಣೀಯವಾಗಿಸಲು ಹಾಗೂ ಶಾಲೆಗೊಂದು ನಿಶ್ಚಿತ ಆದಾಯ ಮೂಲ ಒದಗಿಸಿಕೊಡಲು ಗ್ರಾಮಸ್ಥರು ಅಡಿಕೆ ತೋಟ ನಿರ್ಮಿಸಿಕೊಟ್ಟಿದ್ದಾರೆ! ಸುಳ್ಯ ತಾಲೂಕಿನ ಕನಕಮಜಲು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಇಂತಹ ಪ್ರಯತ್ನವೊಂದು ಯಶಸ್ವಿಯಾಗಿದೆ. ಭವಿಷ್ಯಕ್ಕೆ ಈ ಸರಕಾರಿ ಶಾಲೆಯನ್ನು ಉಳಿಸುವುದಕ್ಕಾಗಿ ಹಾಗೂ ಶಾಲೆಯ ಆರ್ಥಿಕ ಮಟ್ಟ ಹೆಚ್ಚಿಸುವುದಕ್ಕಾಗಿ ಇಂತಹ ವಿನೂತನ ಪ್ರಯತ್ನಕ್ಕೆ ಎಸ್‌ ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಗ್ರಾಮಸ್ಥರು ಮುಂದಾಗಿರುವುದು ವಿಶೇಷ.

ಊರಿನವರೆಲ್ಲ ಸೇರಿ ಅಡಿಕೆ ತೋಟ ನಿರ್ಮಿಸುವ ಹೆಜ್ಜೆ ಇರಿಸಿದ್ದು, ಈ ವಿನೂತನ ಪ್ರಯತ್ನ ಮಾದರಿಯಾಗಿದೆ. ಕನಕಮಜಲು ಶ್ರೀ ನರಿಯೂರು ರಾಮಣ್ಣ ಗೌಡ ಕಿರಿಯ ಪ್ರಾಥಮಿಕ ಶಾಲೆ ಗ್ರಾಮದ ವಿದ್ಯಾ ದೇಗುಲವಾಗಿ ಮಕ್ಕಳಿಗೆ ಜ್ಞಾನ ಒದಗಿಸುತ್ತಿದೆ. ಆ ಶಾಲೆ ಶತಮಾನದಷ್ಟು ಹಿಂದೆ ಸ್ಥಾಪನೆಗೊಂಡಿದೆ. ಶಿಕ್ಷಣ ಪ್ರೇಮಿ ನರಿಯೂರಿನ ರಾಮಣ್ಣ ಗೌಡ ಶಾಲೆಗೆ ಸ್ಥಳದಾನ ಮಾಡಿದ್ದರು. ಬಳಿಕ ಅವರ ಪುತ್ರ ನರಿಯೂರು ಕೇಶವಾನಂದ ಅವರೂ ಶಾಲೆಗೆ ನೆರವು ನೀಡುತ್ತ ಬಂದಿದ್ದಾರೆ. ಈ ವರ್ಷದ ಡಿಸೆಂಬರ್‌ ಅಂತ್ಯಕ್ಕೆ ಶಾಲೆ 101ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದೆ. ಶಾಲೆಯ ಶತಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಬದಲು ಅಡಿಕೆ ತೋಟ ನಿರ್ಮಾಣವಾಗುತ್ತಿದೆ.

1.80 ಎಕ್ರೆಯಲ್ಲಿ ನಿರ್ಮಾಣ
ಇದು ಗ್ರಾಮಸ್ಥರದೇ ಚಿಂತನೆ. ಶಾಲೆಗೆ 2.80 ಎಕ್ರೆ ಜಾಗವಿದೆ. ಈ ಪೈಕಿ ಮೀಸಲಿಟ್ಟ 1.80 ಎಕ್ರೆ ಜಾಗದಲ್ಲಿ ಅಡಿಕೆ ತೋಟ ನಿರ್ಮಿಸಲಾಗಿದೆ. ಆ. 29ರಂದು ಅದರ ಉದ್ಘಾಟನೆಯೂ ಆಗಿದೆ. ಭೂಮಿ ಹದಗೊಳಿಸಿ 276 ಅಡಿಕೆ ಸಸಿ ಹಾಗೂ 8 ತೆಂಗಿನ ಗಿಡಗಳನ್ನು ನೆಟ್ಟಿದ್ದಾರೆ. ಎಸ್‌ಡಿಎಂಸಿ ಸಮಿತಿಯವರು, ಹಳೆ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಪ್ರೇಮಿಗಳ ಸಹಿತ ನೂರು ಮಂದಿ ಶ್ರಮ ಸೇವೆ ಮೂಲಕ ಸಸಿಗಳನ್ನು ನೆಟ್ಟಿದ್ದಾರೆ.

ನಿರ್ವಹಣೆಗೆ ಸಮಿತಿ
ಅಡಿಕೆ ತೋಟ ನಿರ್ವಹಣೆಗೆ ರಕ್ಷಣಾ ಸಮಿತಿ ರಚಿಸಲು ಎಸ್‌ಡಿಎಂಸಿ ನಿರ್ಧರಿಸಿದೆ. ಈಗ ಸಮಿತಿ ಸದಸ್ಯರು, ದಾನಿಗಳು ಹಣ ಭರಿಸಿದ್ದಾರೆ. ಶಾಲೆಯ ಕೊಳವೆ ಬಾವಿ ನೀರನ್ನು ಕೃಷಿಗೆ ಬಳಸಿಕೊಳ್ಳಲಾಗಿದೆ. ಮುಂದಕ್ಕೆ ನೀರಾವರಿ ಯಂತ್ರಗಳನ್ನು ಶಾಲೆಯ ತೋಟದಲ್ಲೇ ಅಳವಡಿಸಿ ಕೃಷಿ ಚಟುವಟಿಕೆಗೆ ಅಗತ್ಯ ಸಾಮಗ್ರಿ ಖರೀದಿಸುವುದು ನಿರ್ವಹಣ ಸಮಿತಿಯ ಉದ್ದೇಶ.

ಕೃಷಿ, ಪರಿಸರದ ಪಾಠ
ಗ್ರಾಮದಲ್ಲಿ 440 ಮನೆಗಳಿದ್ದು, ಎಲ್ಲ ಮನೆಯವರೂ ಕೃಷಿ ಚಟುವಟಿಕೆಗೆ ಕೈಜೋಡಿಸಿದ್ದಾರೆ. ವಿದ್ಯಾ ದೇಗುಲವನ್ನು ಸ್ವಾವಲಂಬಿಯಾಗಿಸಲು ಮುಂದಾಗಿದ್ದಾರೆ. ಕಳೆದ ವರ್ಷ 94 ಮಕ್ಕಳಿದ್ದ ಈ ಶಾಲೆಯಲ್ಲಿ ಈ ವರ್ಷ 101 ವಿದ್ಯಾರ್ಥಿಗಳಿದ್ದಾರೆ. ಅಡಿಕೆ ತೋಟ ನಿರ್ಮಿಸುವ ಕಾರ್ಯದಲ್ಲಿ ಅವರದೂ ಅಳಿಲು ಸೇವೆ ಇದೆ. ಅಲ್ಲದೆ, ಪಾಠದೊಂದಿಗೆ ಅವರಿಗೆ ಕೃಷಿ ಹಾಗೂ ಪರಿಸರದ ಪ್ರೀತಿಯ ಪಾಠವೂ ಸಿಗುತ್ತಿದೆ.

ಸಾಮೂಹಿಕ ಪ್ರಯತ್ನ 
ಸರಕಾರಿ ಶಾಲೆ ಉಳಿವಿಗೆ ಪುಟ್ಟ ಪ್ರಯತ್ನವಿದು. ಊರಿನ ಹತ್ತು ಸಮಾನ ಮನಸ್ಕರು ಸೇರಿ ಇಂತಹದ್ದೊಂದು ಅಡಿಕೆ ತೋಟವನ್ನು ಶಾಲೆಗಾಗಿ ನಿರ್ಮಿಸಲು ಮುಂದಾಗಿದ್ದೇವೆ. ಇದು ಆರಂಭ.ಮುಂದೆ ಬೇಕಿರುವ ಎಲ್ಲ ವ್ಯವಸ್ಥೆಗಳನ್ನು ಸಾಮೂಹಿಕವಾಗಿ ಯಾವುದೇ ಜಾತಿ, ಮತ, ಪಕ್ಷ ಭೇದವಿಲ್ಲದೆ ಮಾಡುತ್ತೇವೆ. ಸ್ಥಳದಾನಿಗಳ ಸಹಕಾರ ದೊಡ್ಡದಿದೆ.
– ವಾಸುದೇವ ಪೆರಂಬಾರು
  ಎಸ್‌ಡಿಎಂಸಿ ಅಧ್ಯಕ್ಷ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.