‘ತ್ಯಾಗ, ಪ್ರೀತಿ, ಭ್ರಾತೃತ್ವ  ಪ್ರತಿ ಕುಟುಂಬಕ್ಕೆ  ಆದರ್ಶ’


Team Udayavani, Sep 9, 2018, 11:21 AM IST

9-sepctember-8.jpg

ಪುತ್ತೂರು: ಮೇರಿ ಮಾತೆಯ ಧನಾತ್ಮಕತೆ, ಪ್ರೀತಿ, ತ್ಯಾಗ ಹಾಗೂ ಭ್ರಾತೃತ್ವದ ಚಿಂತನೆಗಳನ್ನು ನಮ್ಮ ಕುಟುಂಬದಲ್ಲಿ ಅಳವಡಿಸುತ್ತಾ ಸಮಾಜದಲ್ಲಿ ಆದರ್ಶವಾಗಿ ಜೀವಿಸಬೇಕು ಎಂದು ಮಾಯಿದೆ ದೇವುಸ್‌ ಚರ್ಚ್‌ನ ಸಹಾಯಕ ಧರ್ಮಗುರು ವಂ| ಪ್ರವೀಣ್‌ ಡಿ’ಸೋಜಾ ಹೇಳಿದರು.

ಪುತ್ತೂರು ಮಾಯಿದೆ ದೇವುಸ್‌ ಚರ್ಚ್‌ನಲ್ಲಿ ಶನಿವಾರ ನಡೆದ ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮ ದಿನವನ್ನು ಸಾರುವ ‘ಮೊಂತಿ ಫೆಸ್ತ್-ಕುಟುಂಬದ ಹಬ್ಬದಲ್ಲಿ ಬೈಬಲ್‌ ವಾಚಿಸಿ ಹಬ್ಬದ ಸಂದೇಶ ನೀಡಿದರು. ತ್ಯಾಗವೇ ಪರಿಪೂರ್ಣ ಜೀವನಕ್ಕೆ ದಾರಿ. ಸಮಾಜದಲ್ಲಿ ಜೀವಿಸುವಾಗ ನಾವು ಇತರರಿಗೆ ಆದರ್ಶರಾಗಿ ಬಾಳುತ್ತಾ, ಪರಸ್ಪರ ಹೊಂದಾಣಿಕೆಯಲ್ಲಿ ಸಾಗುತ್ತಾ, ಸಹೋದರತ್ವ ಭಾವನೆಯಿಂದ ಎಲ್ಲರನ್ನು ನೋಡುವಂತಾದಾಗ ಇತರರು ನಮ್ಮನ್ನು ಅನುಕರಿಸಲು ಶಕ್ತರಾಗುತ್ತಾರೆ. ತಂದೆ- ತಾಯಿಯನ್ನು ಗೌರವದಿಂದ ಕಾಣುವುದೇ ಮೇರಿ ಮಾತೆಗೆ ನಮನ ಸಲ್ಲಿಸಿದಂತೆ ಎಂದರು.

ಪ್ರಧಾನ ಧರ್ಮಗುರು ವಂ| ಆಲ್ಫ್ರೆಡ್ ಜಾನ್‌ ಪಿಂಟೊ ಅವರು ದಿವ್ಯ ಬಲಿಪೂಜೆಯ ನೇತೃತ್ವ ವಹಿಸಿದ್ದರು. ಸಹಾಯಕ ಧರ್ಮಗುರು ವಂ| ಪ್ರವೀಣ್‌ ಡಿ’ಸೋಜಾ ಅವರು ಭತ್ತದ ತೆನೆಗಳನ್ನು ಶುದ್ಧೀಕರಿಸಿ, ಆಶೀರ್ವಚಿಸಿದರು. ವಂ| ವಲೇರಿಯನ್‌ ಮಸ್ಕರೇನ್ಹಸ್‌ ಮಿತ್ತೂರು ಅವರು ಬಲಿಪೂಜೆಯಲ್ಲಿ ಪಾಲ್ಗೊಂಡರು. ಚರ್ಚ್‌ ಪಾಲನ ಸಮಿತಿಯ ಉಪಾಧ್ಯಕ್ಷ ಜೆ.ಪಿ. ರೋಡ್ರಿಗಸ್‌, ಕಾರ್ಯದರ್ಶಿ ಫೆಬಿಯನ್‌ ಗೋವಿಯಸ್‌, ಚರ್ಚ್‌ ಸ್ಯಾಕ್ರಿಸ್ಟಿಯನ್‌ ಬ್ಯಾಪ್ಟಿಸ್ಟ್‌ ತಾವ್ರೊ, ಗಾಯನ ಮಂಡಳಿ ಸದಸ್ಯರು, ವೇದಿ ಸೇವಕರು, ವಾಳೆ ಗುರಿಕಾರರು ಸಹಕರಿಸಿದರು. 

ಮರೀಲ್‌ ಸೇಕ್ರೆಡ್‌ ಹಾರ್ಟ್‌ ಚರ್ಚ್‌ನಲ್ಲಿ ಬೆದ್ರಾಳ-ಕಾಡುಮನೆ ಪರಿಸರದ ಕ್ರೈಸ್ತ ಬಾಂಧವರು ಹೊಸ ಧಾನ್ಯಗಳ, ಭತ್ತದ ತೆನೆಯ ಜೊತೆಗೆ ಭಕ್ತಿ ಮೆರವಣಿಗೆ ಮೂಲಕ ಚರ್ಚ್ಗೆ ಆಗಮಿಸಿದರು. ಬನ್ನೂರು ಸಂತ ಅಂತೋನಿ ಚರ್ಚ್‌ನಲ್ಲಿ ಚರ್ಚ್‌ನ ಪ್ರವೇಶ ದ್ವಾರದಲ್ಲಿನ ಮರಿಯಮ್ಮರವರ ಗ್ರೊಟ್ಟೊ ಬಳಿಯಲ್ಲಿ ಭತ್ತದ ತೆನೆಗಳಿಗೆ ಪ್ರಧಾನ ಧರ್ಮಗುರು ವಂ| ಪ್ರಶಾಂತ್‌ ಫೆರ್ನಾಂಡೀಸ್‌ ಅವರು ಪವಿತ್ರ ಜಲ ಸಂಪ್ರೋಕ್ಷಿಸಿ ಆಶೀರ್ವಚಿಸಿದರು. ಹೂವು ತಂದ ಮಕ್ಕಳಿಗೆ ಕಬ್ಬು ವಿತರಿಸಲಾಯಿತು. ಹಬ್ಬದ ಇನ್ನೊಂದು ವಿಶೇಷವೆಂದರೆ ಹೊಸ ಅಕ್ಕಿ ಊಟ. ತೆನೆಯನ್ನು ಮೆರವಣಿಗೆಯ ಮೂಲಕ ಒಳಗೆ ತಂದು ಧರ್ಮಗುರುಗಳಿಂದ ಆಶೀರ್ವಾದ ಪಡೆದು, ಮನೆಗೆ ಕೊಂಡೊಯ್ಯಲಾಗುತ್ತದೆ. ಮನೆಯಲ್ಲಿ ಮೇಣದ ಬತ್ತಿಯನ್ನು ಉರಿಸಿ ಆ ಭತ್ತದ ತೆನೆಯನ್ನು ಬೆಸ ಸಂಖ್ಯೆ ಆಧಾರದಲ್ಲಿ ಪುಡಿ ಮಾಡಿ ಹಾಲು ಅಥವಾ ಪಾಯಸದಲ್ಲಿ ಸೇರಿಸಿ ಮನೆಯ ಎಲ್ಲ ಸದಸ್ಯರು ಸೇವಿಸುತ್ತಾರೆ. ಅಂದಿನ ಹಬ್ಬದ ಎಲ್ಲ ಅಡುಗೆ ಸಸ್ಯಾಹಾರವಾಗಿದ್ದು, ಬೆಸ ಸಂಖ್ಯೆ ಆಧಾರದಲ್ಲಿರುತ್ತದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.