ಕಾಂತಮಂಗಲ ಸೇತುವೆ ದುರಸ್ತಿ ಕಾಮಗಾರಿ ಆರಂಭ


Team Udayavani, Sep 10, 2018, 10:56 AM IST

sepctember-4.jpg

ಅಜ್ಜಾವರ: ಸುಳ್ಯ-ಮಂಡೆಕೋಲು ಸಂಪರ್ಕದ ಕಾಂತಮಂಗಲ ಸೇತುವೆ ದುರಸ್ತಿ ಪ್ರಗತಿಯಲ್ಲಿದ್ದು, ಅಜ್ಜಾವರ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಸೂಕ್ತ ಪರ್ಯಾಯ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

ಕಾಂತಮಂಗಲ ಸೇತುವೆ ದುರಸ್ತಿ 15 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿದೆ. ಒಂದು ತಿಂಗಳ ಅವಧಿಯಲ್ಲಿ ಸೇತುವೆ ಮೇಲ್ಭಾಗವನ್ನು ಅಗೆದು, ಕಬ್ಬಿಣದ ಬೆಲ್ಟ್‌ಗಳನ್ನು ಅಳವಡಿಸಿ, ಮೂರು ಇಂಚಿನ ಕಾಂಕ್ರೀಟ್‌ ಹಾಕುವ ಕಾಮಗಾರಿ ನಡೆಯಲಿದ್ದು, ಸೆ. 7ರಿಂದ ಸುಳ್ಯ – ಮಂಡೆಕೋಲು ರಸ್ತೆ ಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಪರ್ಯಾಯ ಮಾರ್ಗ ಅನುಸರಿಸಬೇಕು ಎಂದು ಜಿ.ಪಂ. ಎಂಜಿನಿಯರಿಂಗ್‌ ವಿಭಾಗ ತಿಳಿಸಿದೆ. ಈ ಭಾಗದ ಜನರು ಕಾಂತಮಂಗಲ- ಅಜ್ಜಾವರ ರಸ್ತೆಯನ್ನೆ ನೆಚ್ಚಿಕೊಂಡಿದ್ದಾರೆ. ಹೀಗಾಗಿ, ಕಾಂತಮಂಗಲ ಸೇತುವೆ ತನಕ ಒಂದು ವಾಹನದಲ್ಲಿ ಸಂಚರಿಸಿ, ಕಾಲ್ನಡಿಗೆಯಲ್ಲಿ ಸೇತುವೆ ದಾಟಿ, ಅದರಾಚೆಗೆ ಮತ್ತೊಂದು ವಾಹನ ಹಿಡಿದು ಹೋಗುತ್ತಿದ್ದಾರೆ.

ಆಟೋ ರಿಕ್ಷಾ ಬಳಕೆ
ಮಂಡೆಕೋಲು ಗ್ರಾಮದಿಂದ ಕಾಂತಮಂಗಲ ಸೇತುವೆ ವರೆಗೆ ಬಸ್‌ ಓಡಾಟ ಇದೆ. ಸೇತುವೆಯ ಎರಡೂ ಭಾಗಗಳಲ್ಲಿ ಜನರ ಅನುಕೂಲಕ್ಕಾಗಿ ಆಟೋ ರಿಕ್ಷಾಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಜನ ದೊಡ್ಡೇರಿ, ಕಾಂತಮಂಗಲಕ್ಕೆ ತೆರಳುತ್ತಿದ್ದಾರೆ.

ಸಂಚಾರ ವೆಚ್ಚ ದುಬಾರಿ
ಕೆಲಸ ಕಾರ್ಯಗಳಿಗೆ ದಿನನಿತ್ಯ ಸುಳ್ಯ ಕಡೆಗೆ ಬರುವ ಜನರು ಎರಡು ವಾಹನಗಳನ್ನು ಬದಲಾಯಿಸಬೇಕಿದ್ದು, ಪ್ರಯಾಣ ದರ ಬಿಸಿ ಮುಟ್ಟಿಸಿದೆ.  ಮಂಡೆಕೋಲು, ಅಜ್ಜಾವರದಿಂದ ಕಾಂತ ಮಂಗಲದವರೆಗೆ ಒಂದು ವಾಹನದಲ್ಲಿ ಹಾಗೂ ಸೇತುವೆಯ ಇನ್ನೊಂದು ಭಾಗದಿಂದ ಸುಳ್ಯಕ್ಕೆ ಮತ್ತೊಂದು ವಾಹನದಲ್ಲಿ ಸಂಚರಿಸಬೇಕಿದೆ. ಆಟೋಗಳ ದರ ಭರಿಸಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ ಸ್ಥಳೀಯರಾದ ವೆಂಕಟ್ರಮಣ ಭಟ್‌.

ಬದಲಿ ಮಾರ್ಗ ಇನ್ನಷ್ಟು ದೂರ
ಬದಲಿ ಮಾರ್ಗವೂ ಕಾಂತಮಂಗಲ ರಸ್ತೆಗೆ ಹೋಲಿಸಿದರೆ ದೂರವೇ. ಅಜ್ಜಾವರ- ನಾರ್ಕೋಡು – ಸುಳ್ಯ ರಸ್ತೆ 14 ಕಿ.ಮೀ. ಉದ್ದವಿದ್ದರೆ ಅಲ್ಲಿಂದ ಅಜ್ಜಾವರ, ಮಂಡೆಕೋಲಿಗೆ 6 ಕಿ.ಮೀ. ದೂರವಿದೆ. ಮಂಡೆಕೋಲು – ಮುರೂರು – ಜಾಲ್ಸೂರು ಮಾರ್ಗವಾಗಿ ಸಂಚರಿಸಿದರೆ 18 ಕಿ.ಮೀ. ದೂರವಾಗುತ್ತದೆ. ಪೇರಾಲು – ಆಡ್ಕಾರು ಮಾರ್ಗವೂ 16 ಕಿ.ಮೀ. ಆಗುತ್ತದೆ. 14 ಕಿ.ಮೀ. ಇರುವ ಸುಳ್ಯ- ಕಾಂತಮಂಗಲ – ಮಂಡೆಕೋಲು ರಸ್ತೆಯೇ ಎಲ್ಲರಿಗೂ ಅನುಕೂಲ.

ಸುಳ್ಯ- ನಾರ್ಕೋಡು ರಸ್ತೆ ಶಿಥಿಲ
ಸುಳ್ಯದಿಂದ ನಾರ್ಕೋಡು ಮಾರ್ಗವಾಗಿ ಅಜ್ಜಾವರ ತಲುಪುವ ರಸ್ತೆಯ ಡಾಮರು ಕಿತ್ತುಹೋಗಿ ಸಂಪೂರ್ಣ ಹಾಳಾಗಿದೆ. ಈ ಭಾಗದಲ್ಲಿ ಲಾರಿಗಳ ಓಡಾಟವೂ ಜಾಸ್ತಿ. ಅಜ್ಜಾವರ, ಮಂಡೆಕೋಲು ಗ್ರಾಮಸ್ಥರು ಈ ರಸ್ತೆಯನ್ನು ಅಷ್ಟಾಗಿ ಆಶ್ರಯಿಸಿಲ್ಲ. ದುರಸ್ತಿಯಾದರೆ ಈ ಮಾರ್ಗವನ್ನು ಬದಲಿ ರಸ್ತೆಯಾಗಿ ಉಪಯೋಗಿಸಬಹುದು ಎನ್ನುತ್ತಾರೆ ಸ್ಥಳೀಯರು.

ಅಡ್ಕಾರು ಪ್ರದೇಶದಿಂದ ಪೇರಾಲುವರೆಗೆ ರಸ್ತೆ ಚೆನ್ನಾಗಿದೆ. ಅಜ್ಜಾವರ – ಮಂಡೆಕೋಲು ಭಾಗದ ಜನರು ಈ ರಸ್ತೆಯನ್ನು ಬದಲಿ ಮಾರ್ಗವಾಗಿ ಬಳಸುತ್ತಿದ್ದಾರೆ. ತುಸು ದೂರವೆನಿಸಿದರೂ ಸ್ವಂತ ವಾಹನವಿದ್ದವರು ಇದರಲ್ಲೇ ಓಡಾಡುತ್ತಿದ್ದಾರೆ. ದ್ವಿಚಕ್ರ ವಾಹನ ಗಳು, ಕಾರು, ಪಿಕಪ್‌, ಸಣ್ಣ ಲಾರಿಗಳು ಈ ಮಾರ್ಗವಾಗಿ ಸಂಚರಿಸುತ್ತಿವೆ. ಜಾಲ್ಸೂರು- ಮುರೂರು – ಮಂಡೆಕೋಲು ರಸ್ತೆ ಸುಗಮವಾಗಿದ್ದರೂ ಸುಳ್ಯ ಭಾಗದ ಜನರು ಸಂಚರಿಸುವುದು ಕಡಿಮೆ. ಸುಳ್ಯದಿಂದ 18 ಕಿ.ಮೀ. ದೂರ ಇರುವುದೇ ಇದಕ್ಕೆ ಕಾರಣ.

ಬದಲಿ ವ್ಯವಸ್ಥೆ ಇಲ್ಲ
ಸೇತುವೆಯನ್ನು ಮುಚ್ಚಿಸಿ ಸಂಚಾರ ನಿಷೇಧಿಸಿದರೂ ಜನರ ಓಡಾಟಕ್ಕೆ ಬದಲಿ ವ್ಯವಸ್ಥೆ ಮಾಡಿಲ್ಲ. ಮೊದಲೇ ಈ ಭಾಗದಲ್ಲಿ ಬಸ್‌ ಸಂಚಾರ ವಿರಳ. ರಸ್ತೆ ಬಂದ್‌ ಆದ ಮೇಲೆ ಜನರು ಪರದಾಡುವಂತಾಗಿದೆ. ಹೀಗಾಗಿ, ಶಿಥಿಲಗೊಂಡಿರುವ ನಾರ್ಕೋಡು, ಅಡ್ಪಾಂಗಾಯ ಅಜ್ಜಾವರ ರಸ್ತೆ ದುರಸ್ತಿ ಮಾಡಿಸಬೇಕು. ಮಂಡೆಕೋಲು ಅಜ್ಜಾವರ ಪೇರಾಲು ಅಡ್ಕಾರು ಸುಳ್ಯಕೆ ಹೆಚ್ಚಿನ ಬಸ್‌ ಸೇವೆ ಒದಗಿಸಬೇಕು. ಶೀಘ್ರವಾಗಿ ಸೇತುವೆ ದುರಸ್ತಿ ಕಾರ್ಯ ಮುಗಿಸಬೇಕು ಎಂದು ಸ್ಥಳೀಯರಾದ ನವೀನ್‌ ಆಗ್ರಹಿಸಿದ್ದಾರೆ.

ಸೇತುವೆಯಲೇ ಓಡಾಟ
ಜನರು ಸೇತುವೆಯ ಮೇಲೆ ಓಡಾಡುವುದರಿಂದ ದುರಸ್ತಿ ಕಾಮಗಾರಿಗೆ ಅಡ್ಡಿಯಾಗುತ್ತಿದೆ. ರಸ್ತೆ ಮುಚ್ಚಿದ್ದರೂ ಜನರ ಸಂಚಾರ ಕಡಿಮೆ ಯಾಗಿಲ್ಲ. ದ್ವಿಚಕ್ರ ವಾಹನಗಳಲ್ಲಿ ಬರುವವರೂ ಸೇತುವೆಯ ಒಂದು ಭಾಗದಲ್ಲಿ ವಾಹನ ನಿಲ್ಲಿಸಿ, ನಡೆದು ಬರುತ್ತಿದ್ದಾರೆ ಎಂದು ಕಾರ್ಮಿಕರು ಹೇಳುತ್ತಿದ್ದಾರೆ.

ಅವಲಂಬನೆ
ಸೇತುವೆ ದುರಸ್ತಿ ಆರಂಭವಾದ ಮೇಲೆ ಜನರು ಹೆಚ್ಚಾಗಿ ಆಟೋ ಅವಲಂಬಿಸಿದ್ದಾರೆ. ಜನರು ಅಜ್ಜಾವರ, ಮಂಡೆಕೋಲು ಭಾಗಕ್ಕೂ ಆಟೋದಲ್ಲಿ ಹೋಗುತ್ತಿದ್ದಾರೆ. 
– ಸದಾನಂದ, ಆಟೋ ಚಾಲಕ

 ಶಿವಪ್ರಸಾದ್‌ ಮಣಿಯೂರು

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.