ಶಾಲೆ ಆವರಣದಲ್ಲಿ ಗೆದ್ದಲು ತಿನ್ನುತ್ತಿವೆ ಮರಗಳು


Team Udayavani, Sep 10, 2018, 11:10 AM IST

sepctember-5.jpg

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆ ವಠಾರದಲ್ಲಿ ಐದು ವರ್ಷಗಳಿಂದ ಕೊಂಬೆ ಮುರಿದ ಸಾವಿರಾರು ರೂ. ಬೆಲೆಬಾಳುವ ಮರಗಳು ಗೆದ್ದಲು ಹಿಡಿದಿವೆ.

ಶಾಲೆಯಲ್ಲಿ ಹಲವು ವರ್ಷಗಳ ಹಿಂದೆ ವನಮಹೋತ್ಸವ ಆಚರಿಸಿದ ವೇಳೆ ವಿದ್ಯಾರ್ಥಿಗಳು ನೆಟ್ಟ ಗಿಡಗಳಿಗೆ ಈಗ ಈ ಸ್ಥಿತಿ ಬಂದಿದೆ. ಈ ಮರಗಳು ರಸ್ತೆಯ ಕಡೆಗೆ ವಾಲಿ ಅಪಾಯಕಾರಿ ಸ್ಥಿತಿಯಲ್ಲಿ ನಿಂತಿವೆ. ಈ ಮರಗಳನ್ನು ಶಾಲೆಯ ಪೀಠೊಪಕರಣಗಳಿಗೆ ಬಳಸಲು ನಿರ್ಧರಿಸಿ, ಕಡಿಯಲಾಗಿತ್ತು. ಈ ವೇಳೆ ಸ್ಥಳಕ್ಕೆ ಧಾವಿಸಿದ ಉಪ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬಂದಿ, ಮರಗಳು ಶಾಲೆಯ ಆವರಣದ ಒಳಗಿದ್ದರೂ ಗಿಡ ನೆಟ್ಟಿರುವುದಕ್ಕೆ ದಾಖಲೆ ಹಾಜರುಪಡಿಸಿದರೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು. 

ಕಡಿದಿರುವ ಸಾವಿರಾರು ರೂ. ಬೆಲೆಬಾಳುವ ಮರಗಳನ್ನು ಮುಟ್ಟುಗೋಲು ಹಾಕಿಕೊಂಡು ಸ್ವಾಧೀನಪಡಿಸಿಕೊಂಡಿದ್ದಲ್ಲದೆ ಶಾಲಾಭಿವೃದ್ಧಿ ಸಮಿತಿಗೆ ದಂಡವನ್ನೂ ವಿಧಿಸಿದ್ದರು. ಈಗ 10ಕ್ಕೂ ಮಿಕ್ಕಿ ಮರಗಳು ಗೆಲ್ಲುಗಳು ಮುರಿದ ಸ್ಥಿತಿಯಲ್ಲಿ ಹಾಗೆಯೇ ಉಳಿದು ಗೆದ್ದಲು ಹಿಡಿದಿವೆ. ಈ ಮರಗಳು ಶಾಲೆಗೂ ಬಳಕೆಯಾಗಿಲ್ಲ, ಅರಣ್ಯ ಇಲಾಖೆಯೂ ಅವುಗಳನ್ನು ಸಾಗಿಸಿಲ್ಲ. ಇದು ವ್ಯಾಪಕ ಟೀಕೆಗೆ ಕಾರಣವಾಗಿದೆ.

ಏನು ಮಾಡಲು ಸಾಧ್ಯ?
ಆವರಣದೊಳಗೆ ಹಿರಿಯ ವಿದ್ಯಾರ್ಥಿಗಳು ನೆಟ್ಟು ಬೆಳೆಸಿದ ಮರಗಳಿವು. ಈಗ ಅಪಾಯದಲ್ಲಿದ್ದು, ಶಾಲಾಭಿವೃದ್ಧಿ ಸಮಿತಿ ಸಭೆ ನಡೆಸಿ, ಬೆಂಟ್‌ ಹಾಗೂ ಡೆಸ್ಕ್ ರಚಿಸಲು ಅವುಗಳನ್ನು ಕತ್ತರಿಸಲು ತೀರ್ಮಾನಿಸಿತ್ತು. ಮರಗಳನ್ನು ಕಡಿಯುವ ಹೊತ್ತಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿ, ಕಡಿದ ಮರಗಳನ್ನು ವಶಪಡಿಸಿಕೊಂಡಿದ್ದಾರೆ. ದಾಖಲೆ ಹಾಜರುಪಡಿಸುವಂತೆ ತಿಳಿಸಿದ್ದಾರೆ. ಈ ಹಿಂದೆ ಶಾಲೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಹಲವು ದಾಖಲೆಗಳು ಸುಟ್ಟುಹೋಗಿವೆ. ಏನು ಮಾಡಲು ಸಾಧ್ಯ?
– ಕೆ. ಮಹಾಲಿಂಗ,
ಶಾಲಾ ಮುಖ್ಯ ಗುರು

ದಾಖಲೆಗಳು ಸುಟ್ಟಿವೆ
ಶಾಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆಂದೇ ಮರಗಳನ್ನು ಕಡಿಸಿದ್ದು. ದಾಖಲೆಗಳು ಸುಟ್ಟು ಹೋಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಲಾಖಾಧಿಕಾರಿಗಳಿಗೆ ಇದನ್ನು ಮನವರಿಕೆ ಮಾಡಲು ಯತ್ನಿಸಿದರೂ ದಂಡ ವಿಧಿಸಿದ್ದಾರೆ. 10ಕ್ಕೂ ಹೆಚ್ಚು ಮರಗಳು ಗೆದ್ದಲು ಹಿಡಿಯುವ ಸ್ಥಿತಿಯಲ್ಲಿವೆ.
– ಇಲ್ಯಾಸ್‌ ಕರಾಯ, ಎಸ್‌ಡಿಎಂಸಿ ಸದಸ್ಯ

ಎಂ.ಎಸ್‌. ಭಟ್‌

ಟಾಪ್ ನ್ಯೂಸ್

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.