ಬಿಷಪ್‌ ಅಲೋಶಿಯಸ್‌ ಅವರಿಗೆ ಬೀಳ್ಕೊಡುಗೆ


Team Udayavani, Sep 10, 2018, 12:49 PM IST

secptember-11.jpg

ಮಹಾನಗರ: ಕೊಡಿಯಾಲ ಬೈಲ್‌ ಬಿಷಪ್ಸ್‌ ಹೌಸ್‌ನ ಶಾಲೋಮ್‌ ಪ್ರೇಯರ್‌ ಮಿನಿಸ್ಟ್ರಿ ಸಂಸ್ಥೆಯ 3ನೇ ವಾರ್ಷಿಕ ದಿನಾಚರಣೆ ಹಾಗ ಸಂಸ್ಥೆಯ ವತಿಯಿಂದ ನಿರ್ಗಮನ ಬಿಷಪ್‌ ರೆ| ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ ಅವರಿಗೆ ಬೀಳ್ಕೊಡುಗೆ ಹಾಗೂ ನಿಯೋಜಿತ ಬಿಷಪ್‌ ರೆ| ಡಾ| ಪೀಟರ್‌ ಪಾವ್ಲ್ ಸಲ್ದಾನ್ಹಾ ಅವರಿಗೆ ಸ್ವಾಗತ ಕೋರುವ ಸಮಾರಂಭ ರವಿವಾರ ಜರಗಿತು.

12 ವರ್ಷಗಳಿಂದ ಧರ್ಮ ಪ್ರಾಂತದ ಪ್ರಧಾನ ಗುರುವಾಗಿ ಕಾರ್ಯನಿರ್ವಹಿಸುತ್ತಿರುವ ಮೊ| ಡೆನಿಸ್‌ ಮೊರಾಸ್‌ ಪ್ರಭು ಅವರೂ ಸದ್ಯದಲ್ಲಿಯೇ ನಿವೃತ್ತರಾಗಲಿದ್ದು, ಅವರನ್ನು ಕೂಡ ಈ ಸಂದರ್ಭ ಸಮ್ಮಾನಿಸಲಾಯಿತು. ಬಿಷಪ್ಸ್‌ ಹೌಸ್‌ ಚಾಪೆಲ್‌ನಲ್ಲಿ ಈ ಕಾರ್ಯಕ್ರಮ ನಡೆಯಿತು.

ರೋಸ ಮಿಸ್ತಿಕಾ ಕಾನ್ವೆಂಟ್‌ನ ಸುಪೀರಿಯರ್‌ ಸಿ| ಜುಲಿಯಾನಾ ಅವರು ಬಿಷಪ್‌ ಅಲೋಶಿಯಸ್‌ ಅವರ ಸಮ್ಮಾನ ಪತ್ರವನ್ನು ಹಾಗೂ ಚೇತನ್‌ ಮೆಂಡೊನ್ಸಾ ಅವರು ಮೊ| ಡೆನಿಸ್‌ ಮೊರಾಸ್‌ ಅವರು ಸಮ್ಮಾನ ಪತ್ರವನ್ನು ವಾಚಿಸಿದರು.

ಪ್ರೇರಣೆ ಲಭಿಸಲಿ
ಸಮ್ಮಾನಕ್ಕೆ ಪ್ರತಿಕ್ರಿಯಿಸಿದ ಮೊ| ಡೆನಿಸ್‌ ಮೊರಾಸ್‌ ಪ್ರಭು ಅವರು ಶಾಲೋಮ್‌ ಪ್ರೇಯರ್‌ ಮಿನಿಸ್ಟ್ರಿಯ ಚಟುವಟಿಕೆಗಳಿಂದ ಜನರಲ್ಲಿ ಪ್ರಾರ್ಥನೆಯ ಬಗೆಗಿನ ಒಲವು ಷಹೆಚ್ಚಾಗುವಂತೆ ಪ್ರೇರಣೆ ಲಭಿಸಲಿ ಎಂದು ಹಾರೈಸಿದರು. ಮನೆಗಳಲ್ಲಿ ದೈನಂದಿನ ದೇವರ ಪ್ರಾರ್ಥನೆ ಕುರಿತಂತೆ ಜನರಲ್ಲಿ ಆಸಕ್ತಿ ಹೆಚ್ಚಬೇಕೆಂದು ನಿಯೋಜಿತ ಬಿಷಪ್‌ ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನಾ ಹೇಳಿದರು.

ಧರ್ಮ ಪ್ರಾಂತದ ಪಾಲನಾ ಪರಿಷತ್‌ ಕಾರ್ಯದರ್ಶಿ ಎಂ.ಪಿ. ನೊರೋನ್ಹಾ ಅವರು ಸ್ವಾಗತಿಸಿ ಪ್ರಸ್ತಾವನೆಗೈದರು. ವಂ| ಮನೋಹರ್‌, ವಂ| ಜಾರ್ಜ್‌ ಕರಮವಲ್ಲಿ, ಸಿ| ಲಿಲ್ಲಿಸ್‌, ಸಿ| ಲೆತೀಶಿಯಾ, ವಂ| ಅನಿಲ್‌ ಆಲ್ಪ್ರೆ ಡ್‌ ಅವರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಬಿಷಪ್‌ ಅಲೋಶಿಯಸ್‌ ಪಾವ್ಲ್  ಡಿ’ಸೋಜಾ ನೇತೃತ್ವದಲ್ಲಿ ಬಲಿಪೂಜೆ ನಡೆಯಿತು. ರೆ| ಡಾ| ಪೀಟರ್‌ ಪಾವ್ಲ್ ಸಲ್ದಾನ್ಹಾ ಅವರು ಪ್ರವಚನ ನೀಡಿದರು. 

ದೇವರಲ್ಲಿ ವಿಶ್ವಾಸವಿರಿಸಿ
ದೇವರಲ್ಲಿ ಅಚಲ ವಿಶ್ವಾಸವಿರಿಸಿ ಪ್ರಾರ್ಥಿಸುವುದರಿಂದ ಭಕ್ತರ ಬದುಕಿನಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ. ಶಾಲೋಮ್‌ ಪ್ರೇಯರ್‌ ಮಿನಿಸ್ಟ್ರಿ ಈ ದಿಶೆಯಯಲ್ಲಿ ಜನರಲ್ಲಿ ಪ್ರಾರ್ಥನೆಯ ಮಹತ್ವವನ್ನು ತಿಳಿಸುವಲ್ಲಿ ಮಾದರಿಯಾಗಿ ಕಾರ್ಯ ನಿರ್ವ ಹಿಸುತ್ತಿದೆ ಎಂದು ಬಿಷಪ್‌ ಅಲೋಶಿಯಸ್‌ ಪಾವ್ಲ್ 
ಡಿ’ಸೋಜಾ ಅವರು ಶ್ಲಾಘಿಸಿದರು.

ಟಾಪ್ ನ್ಯೂಸ್

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.