ಹಳೆನೇರೆಂಕಿ: ದೈವದ ಕಟ್ಟೆ ಒಡೆದು ನಿಧಿ ಶೋಧ


Team Udayavani, Sep 11, 2018, 1:21 PM IST

daiv-katte.jpg

ಕಡಬ: ರಾಮಕುಂಜ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಳೆ ನೇರೆಂಕಿ ಗ್ರಾಮದ ಹೊಸಮಾ ರಡ್ಡ ಪಾತ್ರ ಮಾಡಿಯಲ್ಲಿ  ದೈವದ ಕಟ್ಟೆಯನ್ನು ಒಡೆದು ಗುಂಡಿ ತೋಡಿ ನಿಧಿಗಾಗಿ ಹುಡುಕಾಡಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಸುಮಾರು 400 ವರ್ಷಗಳ ಇತಿಹಾಸ ಹೊಂದಿರುವ ಪಾತ್ರಮಾಡಿ ಉಳ್ಳಾಕ್ಲು ದೈವದ ಕಟ್ಟೆಯನ್ನು ಕೆಲವು ದಿನಗಳ ಹಿಂದೆಯೇ ಒಡೆದು ಹಾಕಿ ಕಟ್ಟೆಯ ಸುತ್ತ ಗುಂಡಿ ತೋಡಿ ನಿಧಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. 

ಕಟ್ಟೆಯ ಹತ್ತಿರದ ಜಮೀನಿನ ಮಾಲಕರು ತಮ್ಮ ತೋಟದಲ್ಲಿ ತೆಂಗಿನ ಕಾಯಿ ಕೀಳುವ ಸಂದರ್ಭದಲ್ಲಿ ಗುಂಡಿ ತೋಡಿರುವುದು ಕಂಡು ಬಂತು. ಸ್ಥಳೀಯರಾದ ಅಶೋಕ್‌ ಹಾಗೂ ಹರೀಶ್‌ ಆಚಾರ್ಯ ಅವರು ಗುಂಡಿ ತೋಡಿರುವುದನ್ನು  ಖಚಿತಪಡಿಸಿ ಸಾಮಾಜಿಕ ಮುಂದಾಳು ಸಂಜೀವ ಗೌಡ ಮುಳಿಮಜಲು ಅವರ ಮೂಲಕ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಕಡಬ ಎಸ್‌ಐ ಪ್ರಕಾಶ್‌ ದೇವಾಡಿಗ ಹಾಗೂ ಸಿಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಸ್ಥಳದಲ್ಲಿ ಕುಂಕುಮ ತುಂಬಿದ ಎರಡು ಬಾಟಲಿಗಳು  ಪತ್ತೆಯಾಗಿವೆ.

ಜೈನರ ಕಾಲದ ಕಟ್ಟೆ 
ಜೈನ ಅರಸರ ಕಾಲದಲ್ಲಿ ಇಲ್ಲಿ ದೈವದ ಕಟ್ಟೆ ನಿರ್ಮಿಸಲಾಗಿದ್ದು, ಹಳೆ ನೇರೆಂಕಿಯ ಚಕ್ರವರ್ತಿ ಕೊಡ ಮಣಿತ್ತಾಯ  ದೈವಸ್ಥಾನಕ್ಕೆ ಸಂಬಂಧ ಪಟ್ಟ ಕಟ್ಟೆ ಎಂದು ಹೇಳಲಾಗಿದೆ. ಸುಮಾರು 40 ವರ್ಷಗಳಿಂದ  ಇಲ್ಲಿ  ದೈವಗಳಿಗೆ ಪರ್ವ ಕೊಡುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಟ್ಟೆಯ ಸುತ್ತ ಗಿಡಗಂಟಿ  ಬೆಳೆದು ಯಾರೂ ಹೋಗುವಂತಿರಲಿಲ್ಲ. 

ಹಿಂದೆಯೂ ಅಗೆಯಲಾಗಿತ್ತು 
ಕಟ್ಟೆಯ ಅಡಿಯಲ್ಲಿ ಬಂಗಾರದ ಕಣಜ ಇದೆ  ಎನ್ನುವ ನಂಬಿಕೆ  ಸ್ಥಳೀಯರಲ್ಲಿದೆ.  ಸುಮಾರು 500 ಮೀ. ದೂರದಲ್ಲಿ ನಾಗದೇವರ ಬನವಿದೆ. ಅದರಲ್ಲಿ ಚಿನ್ನದ ಕೊಪ್ಪರಿಗೆ ಇದೆ ಎಂದು  12 ವರ್ಷಗಳ ಹಿಂದೆ ಅಲ್ಲಿಯೂ ಅಗೆಯಲಾಗಿತ್ತು. 

ಶಿಕ್ಷೆಗಾಗಿ ದೈವಕ್ಕೆ ಮೊರೆ 
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಊರಿನ ಆಸ್ತಿಕರು  ಸೇರಿ ಕಟ್ಟೆ ಕೆಡವಿದವರಿಗೆ ವರ್ಷದೊಳಗೆ ತಕ್ಕ ಶಾಸ್ತಿಯಾಗಬೇಕು ಎಂದು ದೈವದಲ್ಲಿ ಪ್ರಾರ್ಥಿಸಿದರು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.