ಪುಣಚಪ್ಪಾಡಿ: ಸಂಚಾರಿ ಆರೋಗ್ಯ ಸೇವೆ ಆರಂಭ
Team Udayavani, Sep 12, 2018, 10:43 AM IST
ಸವಣೂರು: ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಣಚಪ್ಪಾಡಿ ಗ್ರಾಮದಲ್ಲಿ ಸಂಚಾರಿ ಆರೋಗ್ಯ ಸೇವೆ ಶುಕ್ರವಾರ ಆರಂಭವಾಗಿದ್ದು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವೈದ್ಯರು ಹಾಗೂ ಸಿಬಂದಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿದರು.
ಪುಣಚಪ್ಪಾಡಿ ಗ್ರಾಮದಲ್ಲಿ ವಿವಿಧ ಕಾರಣಗಳಿಂದ ಹಲವರು ಅಕಾಲಿಕ ಮರಣಹೊಂದಿರುವ ಕುರಿತು “ಉದಯವಾಣಿ’ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಬಳಿಕ ಆರೋಗ್ಯ ಇಲಾಖೆಯು ಗ್ರಾಮದಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿತ್ತು. ಗ್ರಾಮದಲ್ಲಿ ವಿಧವೆಯರ ಸಂಖ್ಯೆ ಹೆಚ್ಚಿರುವ ಕುರಿತೂ ವರದಿಯಲ್ಲಿ ಉಲ್ಲೇಖೀಸಲಾಗಿತ್ತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ಪುಣಚಪ್ಪಾಡಿ ಗ್ರಾಮದ ಕುರಿತು ಜಿಲ್ಲಾಧಿ ಕಾರಿಗಳಿಂದ ವರದಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಜಿಲ್ಲೆಯಲ್ಲಿಯೇ ಹೆಚ್ಚು ಪ.ಜಾ., ಪ.ಪಂ.ದ ಕುಟುಂಬಗಳೂ ಈ ಗ್ರಾಮದಲ್ಲಿ ಇವೆ.
ಮುಂದೆ ವಾರದಲ್ಲಿ ಒಂದು ದಿನ ನಿಗದಿ ಮಾಡಿ ಗ್ರಾಮದ ಜನತೆಯ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ