ಐದು ಮಕ್ಕಳ ಸಂಸಾರಕ್ಕೆ ಟಾರ್ಪಲ್‌ ಜೋಪಡಿಯೇ ಆಸರೆ 


Team Udayavani, Sep 12, 2018, 11:13 AM IST

12-sepctember-6.jpg

ನೆಲ್ಯಾಡಿ: ಇಪ್ಪತ್ತು ವರ್ಷಗಳಿಂದ ಈ ಕುಟುಂಬ ಗುಡಿಸಲಿನಲ್ಲಿ ವಾಸಿಸುತ್ತಿದೆ. ಮರದ ತೋಳಿಗೆ ಹೊದೆಸಿದ ಟಾರ್ಪಲ್‌ ನ ಅಡಿಯಲ್ಲಿ ಐವರು ಮಕ್ಕಳೊಂದಿಗೆ ನರಕಸದೃಶವಾಗಿ ಜೀವನ ನಡೆಸುತ್ತಿದೆ. ಮನೆ ಕೊಡಿಸುವುದಾಗಿ ಜನಪ್ರತಿನಿಧಿಗಳು ನೀಡುತ್ತಿರುವ ಭರವಸೆ ನಂಬಿ ಚಾತಕ ಪಕ್ಷಿಯಂತೆ ಕಾಯುತ್ತಿದೆ.

ಕೊಕ್ರಾಡಿ ಗ್ರಾಮದ ಬಡ ಕುಟುಂಬವೊಂದರ ಕಣ್ಣೀರ ಕಥೆ ಇದು. ಮೂಡುಬೈಲು ಎಂಬಲ್ಲಿ ಡಾಮರು ರಸ್ತೆಯಿಂದ ಅನತಿ ದೂರದಲ್ಲಿ ಮುದರ ಎಂಬವರು ತಮ್ಮ ಪತ್ನಿ ಗೀತಾ ಹಾಗೂ ಐವರು ಮಕ್ಕಳೊಂದಿಗೆ ಟಾರ್ಪಲ್‌ ಅಳವಡಿಸಿದ ಗುಡಿಸಲಿನಲ್ಲಿ ಇಪ್ಪತ್ತು ವರ್ಷಗಳಿಗಿಂತಲೂ ಹೆಚ್ಚು ಅವಧಿಯಿಂದ ಆಶ್ರಯ ಪಡೆದಿದ್ದಾರೆ. ಐವರು ಮಕ್ಕಳು ಕ್ರಮವಾಗಿ 6, 4, 2ನೇ ತರಗತಿ ಕಲಿಯುತ್ತಿದ್ದರೆ, ಉಳಿದಿಬ್ಬರು ಅಂಗನವಾಡಿಗೆ ತೆರಳುತ್ತಿದ್ದಾರೆ. ಹೆಸರಿಗೆ ಒಂದಿಷ್ಟು ಜಮೀನಿದ್ದರೂ ಮನೆ ಕಟ್ಟುವ ಶಕ್ತಿ ಇವರಿಗಿಲ್ಲ. ಕೂಲಿ-ನಾಲಿ ಮಾಡಿ ಬರುವ ಹಣ ಸಂಸಾರ ನಿರ್ವಹಣೆಗೂ ಸಾಲುತ್ತಿಲ್ಲ. ವಿದ್ಯಾಭ್ಯಾಸವಿಲ್ಲದ ಕಾರಣಕ್ಕೆ ಸರಕಾರದ ಅನುದಾನಗಳ ಮಾಹಿತಿಯೂ ಇಲ್ಲ. ಗ್ರಾ.ಪಂ.ಗೆ ಹಲವು ಸಲ ಭೇಟಿ ನೀಡಿದ್ದರೂ ಮನೆ ನಿರ್ಮಾಣದ ಭರವಸೆ ಮಾತ್ರ ಸಿಕ್ಕಿದೆ. ಈ ಬಾರಿ ಕೌಕ್ರಾಡಿ ಚರ್ಚ್‌ ಒಂದರ ಶಿಕ್ಷಕಿ ನೀಡಿರುವ ಟಾರ್ಪಲ್‌, ಅವರನ್ನು ಮಳೆ ಹಾಗೂ ಬಿಸಿಲಿನಿಂದ ರಕ್ಷಿಸುತ್ತಿದೆ.

ಪಕ್ಕದ ಮನೆಯಲ್ಲಿ ಆಶ್ರಯ
ಗಾಳಿ, ಮಳೆ ಬಂದರೆ ನಿಲ್ಲಲೂ ಸಾಧ್ಯವಿಲ್ಲದ ಈ ಬಡ ಕುಟುಂಬ ಅಂತಹ ಸಂದರ್ಭಗಳಲ್ಲಿ ಮಕ್ಕಳನ್ನು ಕರೆದುಕೊಂಡು ಪಕ್ಕದ ಮನೆಗೆ ಹೋಗಿ ಆಶ್ರಯ ಪಡೆಯುತ್ತಿದೆ. ಸರಕಾರದ ಅನುದಾನಗಳನ್ನು ಕೊಡಿಸುವವರು ನಮಗೆ ಯಾರೂ ಇಲ್ಲ ಎಂದು ಮುದರ ನೊಂದು ನುಡಿಯುತ್ತಾರೆ. ಮೂಡುಬೈಲು ಪರಿಸರದಲ್ಲಿ ಇನ್ನೂ ಕೆಲವು ಕುಟುಂಬಗಳು ಜೋಪಡಿಗಳಲ್ಲೇ ವಾಸಿಸುತ್ತಿವೆ. ತಿಮ್ಮಪ್ಪ, ಪುಷ್ಪಾ ಹಾಗೂ ಮೀಯಾಳ ಸಮೀಪ ಚೀಂಕ್ರ ಎಂಬವರ ಕುಟುಂಬಗಳೂ ಜೋಪಡಿಗಳಲ್ಲೇ ಇದ್ದು, ಕೌಕ್ರಾಡಿ ಗ್ರಾ.ಪಂ. ಆಡಳಿತ ಇನ್ನಾದರೂ ಇವರಿಗೆ ಸೌಲಭ್ಯ ತಲುಪಿಸಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಾರೆ.

ನಾನೇ ನಿಂತು ಮಾಡಿಸುವೆ
ಕಳೆದ ವರ್ಷ ಈ ಬಗ್ಗೆ ಮಾಹಿತಿ ತಿಳಿದು ಪಿಡಿಒ ಅವರೊಂದಿಗೆ ನಾನೇ ಖುದ್ದಾಗಿ ಅಲ್ಲಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದ್ದು, ಈ ಕುಟುಂಬಗಳ ಮುಖ್ಯಸ್ಥರನ್ನು ಗ್ರಾ.ಪಂ.ಗೆ ಬರುವಂತೆ ಹೇಳಿದ್ದೆ. ಆದರೆ ಯಾರೂ ಬಾರದೇ ಇದ್ದ ಕಾರಣ ಸಮಸ್ಯೆ ಹಾಗೆಯೇ ಉಳಿದಿದೆ. ಈ ಬಾರಿ ಗ್ರಾ.ಪಂ. ವತಿಯಿಂದ ಮನೆ ನಿರ್ಮಿಸಿಕೊಡುವ ಕುರಿತು ನಾನೇ ಸ್ವತಃ ಮುತುವರ್ಜಿ ವಹಿಸಿ, ಕ್ರಮ ಕೈಗೊಳ್ಳುತ್ತೇನೆ.
 - ಎಂ.ಕೆ. ಇಬ್ರಾಹಿಂ, ಅಧ್ಯಕ್ಷರು, ಕೌಕ್ರಾಡಿ ಗ್ರಾ.ಪಂ.

ಗುರುಮೂರ್ತಿ ಎಸ್‌. ಕೊಕ್ಕಡ

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.