ಕಾಡು ಪ್ರಾಣಿಗಳ ಹಾವಳಿ: ಬೆಳೆಗಳು ನಾಶ


Team Udayavani, Sep 12, 2018, 11:44 AM IST

12-sepctember-7.jpg

ಈಶ್ವರಮಂಗಲ: ಈ ವರ್ಷ ಕೊಳೆರೋಗದಿಂದ ಅಡಿಕೆ ಬೆಳೆ ನಷ್ಟ ಒಂದೆಡೆಯಾದರೆ, ಇನ್ನೊಂದೆಡೆ ಮಿಶ್ರ ಬೆಳೆಗಳಾದ ಬಾಳೆ, ಕಾಳುಮೆಣಸು, ತೆಂಗು, ತರಕಾರಿಗಳು ಕಾಡು ಪ್ರಾಣಿಗಳ ದಾಳಿಯಿಂದಾಗಿ ನಾಶವಾಗುತ್ತಿವೆ. ಇದರಿಂದ ರೈತರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗುತ್ತಿದೆ. ಭಾರೀ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗ ಬಂದಿರುವುದರಿಂದ ಶೇ. 50ಕ್ಕೂ ಹೆಚ್ಚು ಪ್ರಮಾಣದ ಬೆಳೆ ನಾಶವಾಗಿದೆ. ಇಷ್ಟೊಂದು ಮಳೆ ಬಂದಿದ್ದರೂ ಬಳಿಕ ಬಿಸಿಲು ಬಿದ್ದ ಕಾರಣ ಹಳ್ಳ, ಕೆರೆ, ಬಾವಿ ಮುಂತಾದ ಜಲಮೂಲಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಮಳೆ ಅವಲಂಬಿತ ತರಕಾರಿಗಳಿಗೆ ಈಗ ಜಲಮೂಲಗಳಿಂದ ನೀರು ಪೂರೈಕೆ ಮಾಡಬೇಕಾಗಿದೆ.

ಕೋತಿ, ಕಾಡುಕೋಣ ದಾಳಿ
ಮಳೆ ತುಸು ಕಡಿಮೆಯಾಗುತ್ತಿದ್ದಂತೆ ತೋಟಗಳಿಗೆ ಕಾಡುಪ್ರಾಣಿಗಳು ದಾಳಿ ನಡೆಸಲಾರಂಭಿಸಿದೆ. ಬಿಸಿಲಿನ ವಾತಾವರಣದಲ್ಲಿ ಕೋತಿಗಳು ತೆಂಗು ಕೃಷಿಯ ಕಡೆಗೆ ಲಗ್ಗೆಯಿಟ್ಟರೆ, ಕಾಡು ಕೋಣಗಳು ತೋಟಕ್ಕೆ ನುಗ್ಗಿ ಅಡಿಕೆ ಗಿಡಗಳನ್ನು ನಾಶಪಡಿಸುತ್ತಿವೆ. ಕೋತಿಗಳು ಒಮ್ಮೆ ತೋಟಕ್ಕೆ ದಾಳಿ ಮಾಡಿದರೆ ಎಳನೀರು ಹಾಗೂ ತೆಂಗಿನಕಾಯಿಗಳನ್ನು ಎಳೆದು ಕೆಡವುತ್ತವೆ ಅಥವಾ ತಿಂದು ಎಸೆಯುತ್ತವೆ. ಬಾಳೆಕಾಯಿ, ಪಪ್ಪಾಯಿ, ಕೊಕ್ಕೋ – ಯಾವುದನ್ನೂ ಬಿಡುವುದಿಲ್ಲ. ಮಳೆಗಾಲದಲ್ಲಿ ನೆಟ್ಟು ಬೆಳೆಸಿದ ಅಡಿಕೆ, ಬಾಳೆ ಗಿಡಗಳು ಹಾಗೂ ಕಾಳು ಮೆಣಸಿನ ಬಳ್ಳಿಗಳು ಕಾಡುಕೋಣ, ಕಾಡು ಹಂದಿಗಳ ಪಾಲಾಗುತ್ತಿವೆ.

ನಷ್ಟಕ್ಕೆ ಪರಿಹಾರವೇ ಇಲ್ಲ!
ಕಾಡುಪ್ರಾಣಿಗಳು ಯಾವಾಗ ಬೇಕಾದರೂ ದಾಳಿ ಮಾಡಿ ರೈತನ ಬೆಳೆಗಳನ್ನು ನಾಶ ಮಾಡಬಹುದು. ಈ ನಷ್ಟಕ್ಕೆ ಯಾವುದೇ ರೀತಿಯ ಪರಿಹಾರ ಇಲಾಖೆಗಳಿಂದ ಸಿಗುತ್ತಿಲ್ಲ. ರೈತರು ಕೃಷಿಗೆ ಬಳಸುವ ಉಪಕರಣಗಳು, ಗೊಬ್ಬರ, ಔಷಧಗಳನ್ನು ಖರೀದಿಸಿದಾಗ ರಾಜ್ಯ, ಕೇಂದ್ರ ಸರಕಾರಗಳು ತೆರಿಗೆ ವಿಧಿಸುತ್ತಿವೆ. ಇಷ್ಟಿದ್ದರೂ ನಷ್ಟ ಪರಿಹಾರದ ವಿಷಯದಲ್ಲಿ ಮಾತ್ರ ಸರಕಾರಗಳು ವಂಚಿಸುತ್ತಿದೆ. 

ಕೌಟುಂಬಿಕ ಆಸ್ತಿಗೂ ಪರಿಹಾರವಿಲ್ಲ!
ಸರಕಾರದ ಪರಿಹಾರ ಕೌಟುಂಬಿಕ ಆಸ್ತಿಗೆ ಸಿಗದೆ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಜಂಟಿ ಖಾತೆ ಇದ್ದವರು ಒಪ್ಪಿಗೆ ಪತ್ರ ಸಲ್ಲಿಸಿ ಪರಿಹಾರ ಪಡೆಯುತ್ತಾರೆ. ಆದರೆ ಕೌಟುಂಬಿಕ ಆಸ್ತಿ ಹೊಂದಿದವರು ಸಮಯಕ್ಕೆ ಸರಿಯಾಗಿ ಒಪ್ಪಿಗೆ ಪತ್ರ ಇಲ್ಲದಿದ್ದರೂ ಭೂ ಕಂದಾಯ ಪಾವತಿಸುತ್ತಾರೆ. ಆದರೆ ಕೌಟುಂಬಿಕ ಆಸ್ತಿಯಲ್ಲಿ ವಿಭಾಗ ಪತ್ರ ಆಗದೇ ಇದ್ದು, ಕೃಷಿ ಮಾಡಿದ ರೈತರಿಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. 

ಪರಿಹಾರ ನೀಡಿ
ಪ್ರತಿದಿನವೂ ಕಾಡುಕೋಣಗಳು ತೋಟಕ್ಕೆ ಲಗ್ಗೆ ಇಟ್ಟು ಕೃಷಿಯನ್ನು ಹಾಳು ಮಾಡುತ್ತಿವೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಅಡಿಕೆ ಸಸಿಯನ್ನು ತೋಟದಲ್ಲಿ ನೆಡಲಾಗಿದೆ. ಕಾಡುಕೋಣ, ಕಾಡು ಹಂದಿಯ ಉಪಟಳದಿಂದ ಎಲ್ಲವೂ ನಾಶವಾಗಿದೆ. ಸರಕಾರ ಮತ್ತು ಅರಣ್ಯ ಇಲಾಖೆ ಸ್ಪಂದಿಸಿ ಪರಿಹಾರ ನೀಡಬೇಕು. 
– ಗೋವಿಂದ ಭಟ್‌ ಪೈರುಪುಣಿ,
ಅಧ್ಯಕ್ಷರು, ವಿಆರ್‌ಡಿಎಫ್‌, ಸುಳ್ಯಪದವು

ಉಪಟಳ ಹೆಚ್ಚಾಗಿದೆ
ಅಡಿಕೆ ಮತ್ತು ತೆಂಗು, ಮಿಶ್ರ ಬೆಳೆಗಳಾದ ಬಾಳೆ, ಕರಿಮೆಣಸು ತರಕಾರಿಯನ್ನು ಬೆಳೆಸುತ್ತೇನೆ. ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಕೋತಿಗಳ ದಾಳಿಯಿಂದಾಗಿ ಸೀಯಾಳ, ತರಕಾರಿಗಳು ನಾಶವಾಗಿದೆ. ಕಾಡು ಪ್ರಾಣಿಗಳ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು.
– ನಾರಾಯಣ ನಾಯ್ಕ, ರೈತ

 ಮಾಧವ ನಾಯಕ್‌

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.