ಗುರುವಾಯನಕೆರೆ ಜಂಕ್ಷನ್‌ನಲ್ಲಿ ಧೂಳು 


Team Udayavani, Sep 12, 2018, 12:02 PM IST

12-sepctember-8.jpg

ಬೆಳ್ತಂಗಡಿ: ಹೆದ್ದಾರಿಯ ಹೊಂಡಗಳಿಗೆ ಮುಕ್ತಿ ನೀಡುವ ಹಿನ್ನೆಲೆಯಲ್ಲಿ ಇಲಾಖೆಯು ಜಲ್ಲಿ ಹುಡಿ ಹಾಕಿ ತಾತ್ಕಾಲಿಕ ಪರಿಹಾರ ನೀಡಿತ್ತು. ಆದರೆ ಇದೀಗ ಇದೇ ಹುಡಿಯಿಂದ ಧೂಳು ಸೃಷ್ಟಿಯಾಗಿ ಸ್ಥಳೀಯರು ತೊಂದರೆ ಅನುಭವಿಸುವಂತಾಗಿದ್ದು, ಗುರುವಾಯನಕೆರೆ ಜಂಕ್ಷನ್‌ಗೆ ಇದು ದೊಡ್ಡ ಹೊಡೆತ ನೀಡಿದೆ.

ಸಂಬಂಧಪಟ್ಟವರ ಬಳಿ ದೂರಿ ನೀಡಿ ಪರಿಹಾರ ಕಾಣದೆ ಧೂಳು ತಿಂದು ಸೋತಿರುವ ವರ್ತಕರು ಸೇರಿ ಮಂಗಳವಾರದಿಂದ ಪಿಕ್‌ಅಪ್‌ ಮೂಲಕ ಪ್ರತಿ ದಿನ ನೀರು ಹಾಕುವ ಕಾರ್ಯ ಆರಂಭಿಸಿದ್ದು. ಧೂಳಿನ ತೀವ್ರತೆಯನ್ನು ಕಂಡು 1 ಅಥವಾ 2 ಬಾರಿ ನೀರು ಹಾಕುವ ತೀರ್ಮಾನಕ್ಕೆ ಬಂದಿದ್ದಾರೆ.

ಗುರುವಾಯನಕೆರೆ ಜಂಕ್ಷನ್‌ನಲ್ಲಿ ಹೆದ್ದಾರಿ ಪೂರ್ತಿ ಹದಗೆಟ್ಟಿರುವ ಕಾರಣ ಇಲಾಖೆಯು ಇಡೀ ಪೇಟೆಯಲ್ಲಿ ಡಸ್ಟ್‌ ಹಾಕಿದೆ. ಆದರೆ ಕಳೆದ 2 ವಾರಗಳಿಂದ ಮಳೆ ದೂರವಾಗಿರುವ ಕಾರಣ ಸುಮಾರು 50ಕ್ಕೂ ಅಧಿಕ ಅಂಗಡಿಗಳಿಗೆ ಧೂಳು ತಿನ್ನುವ ದೌರ್ಭಾಗ್ಯ ಲಭಿಸಿದೆ. ವರ್ತಕರು ಈಗಾಗಲೇ ಹಲವು ಬಾರಿ ಗುತ್ತಿಗೆದಾರರಿಗೆ ಮನವಿ ಮಾಡಿ ನೀರು ಹಾಕಿಸುವ ಕೆಲಸ ಮಾಡಿದ್ದಾರೆ.

ಧೂಳು ಹಿಡಿಯುತ್ತಿದೆ
ಗುರುವಾಯನಕೆರೆ ಜಂಕ್ಷನ್‌ನಲ್ಲಿ ದಿನಸಿ, ತರಕಾರಿ, ಬೇಕರಿ, ಎಲೆಕ್ಟ್ರಾನಿಕ್ಸ್‌, ಹೊಟೇಲ್‌, ಹಾರ್ಡ್‌ವೇರ್‌ ಹೀಗೆ ಎಲ್ಲ ಬಗೆಯ ಅಂಗಡಿಗಳಿವೆ. ಆದರೆ ಧೂಳಿನಿಂದ ವರ್ತಕರಿಗೆ ವ್ಯಾಪಾರವೇ ಇಲ್ಲದಂತಾಗಿದೆ. ಹೊಸ ವಸ್ತು ಕೂಡ ಒಂದೇ ದಿನದಲ್ಲಿ ಧೂಳು ಹಿಡಿದು ಹಳತಾಗುತ್ತಿದೆ. ಯಾರೋ ಮಾಡಿದ ತಪ್ಪಿನಿಂದಾಗಿ ಪ್ರಸ್ತುತ ವರ್ತಕರು ಧೂಳು ತಿನ್ನಬೇಕಾದ ಸ್ಥಿತಿ ಇದೆ ಎಂದು ಆರೋಪಿಸುತ್ತಾರೆ.

ನಾವು ಸಣ್ಣ ತಪ್ಪು ಮಾಡಿದರೂ ಗ್ರಾ.ಪಂ. ನವರು ಓಡಿಕೊಂಡು ಬರುತ್ತಾರೆ. ಎಲ್ಲಿಯಾದರೂ ಕಸ ಹಾಕಿದರೆ ನೋಟಿಸ್‌ ನೀಡುತ್ತಾರೆ. ಆದರೆ ಈಗ ಧೂಳಿನಿಂದ ನಮಗೆ ಆರೋಗ್ಯ ತೊಂದರೆ ಎದುರಾದರೂ ಯಾರೂ ಮಾತನಾಡುತ್ತಿಲ್ಲ ಎಂದು ಸ್ಥಳೀಯ ವರ್ತಕರೊಬ್ಬರು ತಿಳಿಸಿದ್ದಾರೆ.

30 ರೂ.ನಂತೆ ಸಂಗ್ರಹ
ಮಂಗಳವಾರದಿಂದ ಸ್ಥಳೀಯ ನವಶಕ್ತಿ ಹಾರ್ಡ್‌ವೇರ್‌ ಸಂಸ್ಥೆಯ ಕೊಳವೆಬಾವಿ ಹಾಗೂ ಟ್ಯಾಂಕ್‌ನ ಮೂಲಕ ಪಿಕ್‌ ಅಪ್‌ ವಾಹನದಲ್ಲಿ ಹೆದ್ದಾರಿಗೆ ನೀರು ಹಾಕಲಾಗುತ್ತಿದೆ. ಇಡೀ ಪೇಟೆಗೆ ನೀರು ಹಾಕಬೇಕಾದರೆ ಸುಮಾರು 3-4 ಟ್ರಿಪ್‌ ನೀರು ಬೇಕಾಗುತ್ತದೆ. ಹೀಗಾಗಿ ಪಿಕ್‌ಅಪ್‌ಗೆ ಬಾಡಿಗೆ ನೀಡುವುದಕ್ಕಾಗಿ ಪ್ರತಿಯೊಬ್ಬರೂ ದಿನಕ್ಕೆ 30 ರೂ. ನೀಡುವ ನಿರ್ಧಾರಕ್ಕೆ ಬಂದಿದ್ದಾರೆ. 750 ಲೀ.ನ ಎರಡು ಟ್ಯಾಂಕ್‌ಗಳನ್ನು ಪಿಕ್‌ಅಪ್‌ನಲ್ಲಿಟ್ಟು ನೀರು ಹಾಕಲಾಗುತ್ತಿದೆ.

ಇಲಾಖೆಗೆ ಬರೆಯುತ್ತೇವೆ
ಗ್ರಾ.ಪಂ.ನಿಂದ ಹೆದ್ದಾರಿ ಇಲಾಖೆಗೆ ಬರೆಯುವ ನಿರ್ಣಯ ತೆಗೆದುಕೊಳ್ಳಲಾಗಿದೆ. ಜತೆಗೆ ತಾ.ಪಂ. ಗೂ ರಸ್ತೆಗೆ ನೀರು ಹಾಕುವುದಕ್ಕೆ ಮನವಿ ಮಾಡಲಾಗುವುದು. ಧೂಳಿನ ಸಮಸ್ಯೆಗೆ ಗಾ.ಪಂ.ನಿಂದ ಸಾಧ್ಯವಾದಷ್ಟು ಕ್ರಮ ಕೈಗೊಳ್ಳುವ ಪ್ರಯತ್ನ ಮಾಡಲಾಗುತ್ತದೆ. ಜತೆಗೆ ಡಾಮರು ಆಗುತ್ತದೆ ಎಂಬ ಮಾತುಗಳೂ ಕೇಳಿಬರುತ್ತಿವೆ.
– ಅಶೋಕ್‌ ಕೋಟ್ಯಾನ್‌
ಅಧ್ಯಕ್ಷರು, ಕುವೆಟ್ಟು ಗ್ರಾ.ಪಂ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.