ಚಾರ್ಮಾಡಿ ಘಾಟಿ: ಭೂರಮೆಯ ಸ್ವರ್ಗದಲ್ಲಿ ಸಂಚಾರ ಸಂಕಷ್ಟ


Team Udayavani, Sep 12, 2018, 12:15 PM IST

12-sepctember-9.jpg

ಬೆಳ್ತಂಗಡಿ: ಚುಮು ಚುಮು ಚಳಿಯ ನಡುವೆ ಪ್ರಯಾಣಿಕರ ಮನಕ್ಕೆ ಮುದ ನೀಡುವ ಹಚ್ಚ ಹಸುರಿನ ಕಾನನದ ಮಧ್ಯೆ ಹಾದು ಹೋಗುವ ಚಾರ್ಮಾಡಿ ಘಾಟಿ ಕಣಿವೆ ರಸ್ತೆಯಲ್ಲಿನ ಪ್ರಯಾಣ ಈಗ ಬಹಳ ತ್ರಾಸದಾಯಕವಾಗಿದೆ. ಘಾಟಿ ರಸ್ತೆಯಲ್ಲಿ ತಾಸುಗಟ್ಟಲೆ ಸಂಚಾರ ಸ್ಥಗಿತ, ಹೊಂಡ-ಗುಂಡಿಗಳಿಂದ ಕೂಡಿದ ಕಡಿದಾದ ತಿರುವಿನ ಸಂಚಾರದಿಂದಾಗಿ ಪ್ರಯಾಣಿಕರ ಕಷ್ಟ ಹೇಳತೀರದಂತಾಗಿದೆ.

ಸಂಚಾರ ಅಸ್ತವ್ಯಸ್ತ
ಸಂಪಾಜೆ ಘಾಟಿ ರಸ್ತೆಯಲ್ಲಿ ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿ ದಿನಂಪ್ರತಿ ತಾಸುಗಟ್ಟಲೆ ಬ್ಲಾಕ್‌ ಆಗುತ್ತಿದ್ದು, ಪ್ರಯಾಣಿಕರು ಅರಣ್ಯದ ಮಧ್ಯೆಯೇ ಪರದಾಡುವಂತಾಗಿದೆ. ರಾತ್ರಿ ಸಂಚಾರ ಸ್ಥಗಿತವಾದರೆ ಬೆಳಗಿನ ಜಾವದ ವರೆಗೂ ಘಾಟಿ ಪ್ರದೇಶದಲ್ಲಿಯೇ ಹಸಿವು, ನಿದ್ದೆ ಬಿಟ್ಟು ಪರಿತಪಿಸುವ ಸ್ಥಿತಿ ಪ್ರಯಾಣಿಕರದ್ದು. ಇದರಿಂದಾಗಿ ಚಿಕ್ಕ ಮಕ್ಕಳು, ಮಹಿಳೆಯರು, ವೃದ್ಧರು ಕಷ್ಟ ಅನುಭವಿಸುವಂತಾಗಿದೆ.

ಕಿರಿದಾದ ಹದಗೆಟ್ಟ ರಸ್ತೆ
ಘಾಟಿ ರಸ್ತೆಯ ಅಂಚಿನಲ್ಲಿ ಹೊಂಡಗಳಿದ್ದು, ಡಾಮರು ರಸ್ತೆಯಿಂದ ಕೆಳಗೆ ವಾಹನಗಳನ್ನು ಇಳಿಸಲು ಸಾಧ್ಯವಾಗುತ್ತಿಲ್ಲ. ರಾತ್ರಿಯ ವೇಳೆ ಚಾಲಕ ರಸ್ತೆಯ ಅಂಚಿಗೆ ಇಳಿಸಿದ್ದಲ್ಲಿ ಪ್ರಪಾತಕ್ಕೆ ಜಾರುವ ಸಾಧ್ಯತೆ ಅಧಿಕ. ಕಿರಿದಾಗಿರುವ ಪ್ರದೇಶಗಳಲ್ಲಿ ಬಸ್‌ ಗಳು ಹಾಗೂ ಸರಕು ತುಂಬಿದ ಲಾರಿಗಳು ಮುಖಾಮುಖೀಯಾದರೆ ಕಷ್ಟಪಟ್ಟು ಹಾದು ಹೋಗಬೇಕಾಗುತ್ತದೆ. ಇಂತಹ ಪ್ರದೇಶಗಳಲ್ಲಿ ಆಗಾಗ ಸಂಚಾರದಲ್ಲಿ ಅಡಚಣೆ ಉಂಟಾಗುತ್ತಿದೆ. ಈಗಾಗಲೇ ರಸ್ತೆ ಕುಸಿಯುವ ಭೀತಿ ಎದುರಾಗಿರುವ ಕೆಲವು ಸ್ಥಳಗಳಲ್ಲಿ ಮರಳನ್ನು ತುಂಬಿದ ಚೀಲಗಳನ್ನು ಇಡುವ ಮೂಲಕ ತಾತ್ಕಾಲಿಕ ರಕ್ಷಣೆ ಮಾಡಲಾಗಿದೆ.

ಸಂಪರ್ಕ ಕೊಂಡಿ
ಈಗ ಜಿಲ್ಲೆಗಿರುವ ಏಕೈಕ ಹತ್ತಿರದ ಸಂಪರ್ಕ ರಸ್ತೆ ಚಾರ್ಮಾಡಿ. ಮಂಗಳೂರು ಹಾಗೂ ಧರ್ಮಸ್ಥಳ ಸಹಿತ ಇತರ ಯಾತ್ರಾಸ್ಥಳಗಳಿಗೆ ಬರುವ ವಾಹನಗಳು ಇದೇ ಮಾರ್ಗವಾಗಿ ಸಂಚರಿಸುತ್ತಿವೆ. ಘಾಟಿಯಲ್ಲಿ ಸಣ್ಣ ಅವಘಡಗಳಾದರೂ ತಾಸುಗಟ್ಟಲೆ ವಾಹನ ಸಂಚಾರ ಸ್ಥಗಿತಗೊಳ್ಳುವುದು ಸಾಮಾನ್ಯವಾಗಿದೆ. ವಾಹನ ದಟ್ಟಣೆಯನ್ನು ನಿಯಂತ್ರಿಸಲು ಇಲ್ಲಿ ಯಾವುದೇ ವ್ಯವಸ್ಥೆಗಳಿಲ್ಲ. ಯಾವುದೇ ಅಗತ್ಯ ಬಂದರೂ 30 ಕಿ. ಮೀ. ದೂರದ ಬೆಳ್ತಂಗಡಿಯಿಂದ ಪೊಲೀಸರು ಇಲ್ಲಿಗೆ ಬರಬೇಕಾಗಿದೆ. ಮಾರ್ಗ ಮಧ್ಯೆ ವಾಹನಗಳು ಕೆಟ್ಟು ನಿಂತು ಸಂಚಾರದಲ್ಲಿ ವ್ಯತ್ಯಯವಾಗುತ್ತಿದ್ದು, ವಾಹನಗಳ ತೆರವಿಗೆ ಕ್ರೇನ್‌ನ ವ್ಯವಸ್ಥೆಯನ್ನು ಕಲ್ಪಿಸಿದರೆ ಅನುಕೂಲವಾಗುತ್ತದೆ.

ಮೂಲ ಸೌಕರ್ಯವಿಲ್ಲ
ಚಾರ್ಮಾಡಿಯಿಂದ ಕೊಟ್ಟಿಗೆಹಾರದವರೆಗೆ ಸುಮಾರು 20 ಕಿ. ಮೀ. ರಸ್ತೆ ದಟ್ಟವಾದ ಅರಣ್ಯದಲ್ಲಿ ಹಾದು ಹೋಗುತ್ತದೆ. ವಾಹನ ಸಂಚಾರದಲ್ಲಿ ಅಡಚಣೆಯಾದರೆ ಅರಣ್ಯದ ನಡುವೆಯೇ ಜನರು ರಾತ್ರಿ ಕಳೆಯಬೇಕಾಗಿದೆ. ಯಾವುದೇ ಕನಿಷ್ಠ ಮೂಲ ಸೌಲಭ್ಯಗಳು ಇಲ್ಲಿ ಲಭ್ಯವಿಲ್ಲ.

ನೀರು, ತಿಂಡಿ ಜತೆಗಿರಲಿ
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎಷ್ಟು ಗಂಟೆಗಳ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗುತ್ತದೆ ಎಂಬ ಅರಿವು ಹೆಚ್ಚಿನವರಿಗೆ ಇರುವುದಿಲ್ಲ. ಪ್ರಯಾಣದ ವೇಳೆ ತಿಂಡಿ, ನೀರು ಮೊದಲಾದ ಅಗತ್ಯ ವಸ್ತುಗಳನ್ನು ಜತೆಯಲ್ಲಿ ತೆಗೆದುಕೊಂಡು ತೆರಳುವುದು ಉತ್ತಮ. ಇಲ್ಲವಾದರೆ ಅರಣ್ಯದ ಮಧ್ಯೆ ನೀರಿಗೂ ಕಷ್ಟವಾದೀತು.

ಅನುದಾನ ಬರಬೇಕಿದೆ
ಈಗಾಗಲೇ ತಾತ್ಕಾಲಿಕ ಕಾಮಗಾರಿಗಳು ಮುಗಿದಿವೆ. ಮುಂದಿನ ದಿನಗಳಲ್ಲಿ ಕಾಯಂ ಪರಿಹಾರಕ್ಕಾಗಿ ಅನುದಾನ ಬರಬೇಕಿದೆ. ಈಗಾಗಲೇ ಪ್ರಸ್ತಾವನೆ ಕಳುಹಿಸಲಾಗಿದೆ. ಹೀಗಾಗಿ ಅದಕ್ಕೆ ಅನುಮೋದನೆ ಸಿಕ್ಕ ಬಳಿಕವೇ ತೀರ್ಮಾನವಾಗಬೇಕಿದೆ.
-ಸುಬ್ಬರಾಮ ಹೊಳ್ಳ 
ಕಾರ್ಯಪಾಲಕ ಎಂಜಿನಿಯರ್‌, ರಾ.ಹೆ.ಮಂಗಳೂರು

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.