ಸೇತುವೆ ಮನವಿಗೆ ಸ್ಪಂದಿಸಿದ ಸಚಿವ ರೇವಣ್ಣ
Team Udayavani, Sep 12, 2018, 12:25 PM IST
ಕಡಬ: ಪಿಜಕಳದ ಪಾಲೋಳಿಯಿಂದ ಎಡಮಂಗಲವನ್ನು ಸಂಪರ್ಕಿಸಲು ಕುಮಾರಧಾರಾ ಹೊಳೆಗೆ ಸೇತುವೆ ನಿರ್ಮಿಸಬೇಕೆಂಬ ಗ್ರಾಮಸ್ಥರ ಮನವಿಗೆ ಸ್ಪಂದಿಸಿರುವ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಸೇತುವೆ ನಿರ್ಮಾಣಕ್ಕೆ ತಗಲಬಹುದಾದ ವೆಚ್ಚದ ಅಂದಾಜು ಪಟ್ಟಿ ತಯಾರಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಾಲೋಳಿಯಲ್ಲಿ ಸೇತುವೆ ನಿರ್ಮಿಸಬೇಕೆಂದು ಸ್ಥಳೀಯರು ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಲೇ ಇದ್ದರು. ಕಳೆದ ತಿಂಗಳು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ಮೀರಾ ಸಾಹೇಬ್ ಅವರು ಗ್ರಾಮಸ್ಥರ ಮನವಿಯೊಂದಿಗೆ ಸಚಿವ ಎಚ್.ಡಿ. ರೇವಣ್ಣ ಅವರನ್ನು ಭೇಟಿಯಾಗಿ ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿದ್ದರು.
ಅಧಿಕಾರಿಗಳ ಭೇಟಿ
ಸೆ. 11ರಂದು ಪಾಲೋಳಿಗೆ ಭೇಟಿ ನೀಡಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಅಂದಾಜು ಪಟ್ಟಿ ತಯಾರಿಸುವ ಸಲುವಾಗಿ ಸ್ಥಳ ಪರಿಶೀಲಿಸಿದ್ದೇವೆ. ಸೇತುವೆ, ಸಂಪರ್ಕ ರಸ್ತೆ ನಿರ್ಮಾಣಕ್ಕೆ 18 ಕೋಟಿ ರೂ. ಬೇಕಾಗಬಹುದು. ಅಂದಾಜುಪಟ್ಟಿ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜಾರಾಮ್ ತಿಳಿಸಿದ್ದಾರೆ.
ಸಹಾಯಕ ಎಂಜಿನಿಯರ್ ಪ್ರಮೋದ್ ಕುಮಾರ್, ಜಿ.ಪಂ. ಎಂಜಿನಿಯರ್ ಭರತ್, ಪ್ರಮುಖರಾದ ಸಯ್ಯದ್ ಮೀರಾ ಸಾಹೇಬ್, ರೋಯ್ ಅಬ್ರಹಾಂ, ಕಡಬ ಗ್ರಾ.ಪಂ. ಸದಸ್ಯರಾದ ಕೃಷ್ಣಪ್ಪ ಬೈಲಂಗಡಿ, ಸರೋಜಿನಿ ಎಸ್. ಆಚಾರ್, ಸೇತುವೆ ಹೋರಾಟ ಸಮಿತಿ ಅಧ್ಯಕ್ಷ ಸಾಂತಪ್ಪ ಗೌಡ ಪಿಜಕ್ಕಳ, ಕಾರ್ಯದರ್ಶಿ ಶ್ಯಾಮ್ ಥಾಮಸ್, ಉಪಾಧ್ಯಕ್ಷ ಜೋಸ್ ಕೇಂಜೂರು, ಖಜಾಂಚಿ ರವೀಂದ್ರ ಎಡಮಂಗಲ, ಸ್ಥಳೀಯರಾದ ಅರುಣ್ ಕುಮಾರ್, ಯತೀಂದ್ರ, ಸುಂದರ, ರಂಜೀವ್ ಪಿ.ಆರ್., ಸತೀಶ್, ನಾರಾಯಣ, ಮುರಳೀಧರ, ಹರೀಶ್, ಪುರುಷೋತ್ತಮ, ರಫೀಕ್, ಉಸ್ಮಾನ್, ಶ್ರೀನಿವಾಸ, ದಯಾನಂದ, ಮಧುಸೂದನ, ಪೂವಪ್ಪ ಉಪಸ್ಥಿತರಿದ್ದರು.
ರಸ್ತೆ ಅಭಿವೃದ್ಧಿ: ಸ್ಥಳ ಪರಿಶೀಲನೆ
ಅಧಿಕಾರಿಗಳು ನೂಜಿಬಾಳ್ತಿಲ ಗ್ರಾಮವನ್ನು ಸಂಪರ್ಕಿಸುವ ಕಾಯರಡ್ಕ-ಪೇರಡ್ಕ ಹಾಗೂ ಕಲ್ಲುಗುಡ್ಡೆ-ಎಂಜಿರ ರಸ್ತೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಅಂದಾಜು ಪಟ್ಟಿ ಸಲ್ಲಿಸಲು ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ಪರಿಶೀಲಿಸಿದರು. ಸೈಯದ್ ಮೀರಾ ಸಾಹೇಬ್, ಜೆಡಿಎಸ್ ಮುಖಂಡರಾದ ಸುಂದರ ಗೌಡ ಬಳ್ಳೇರಿ, ಇ.ಜಿ. ಜೋಸೆಫ್, ದಿಲ್ಫರ್ ಫಾರೂಕ್, ಹರಿಪ್ರಸಾದ್ ಎನ್ಕಾಜೆ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್