ಐದು ಮಕ್ಕಳ ಸಂಸಾರಕ್ಕೆ ಟಾರ್ಪಲ್‌ ಜೋಪಡಿಯೇ ಆಸರೆ


Team Udayavani, Sep 13, 2018, 1:50 AM IST

kutumba-12-9.jpg

ಕೊಕ್ಕಡ: ಇಪ್ಪತ್ತು ವರ್ಷಗಳಿಂದ ಈ ಕುಟುಂಬ ಗುಡಿಸಲಿನಲ್ಲಿ ವಾಸಿಸುತ್ತಿದೆ. ಮರದ ತೋಳಿಗೆ ಹೊದೆಸಿದ ಟಾರ್ಪಲ್‌ನ ಅಡಿಯಲ್ಲಿ ಐವರು ಮಕ್ಕಳೊಂದಿಗೆ ನರಕಸದೃಶವಾಗಿ ಜೀವನ ನಡೆಸುತ್ತಿದೆ. ಮನೆ ಕೊಡಿಸುವುದಾಗಿ ಜನಪ್ರತಿನಿಧಿಗಳು ನೀಡುತ್ತಿರುವ ಭರವಸೆ ನಂಬಿ ಚಾತಕ ಪಕ್ಷಿಯಂತೆ ಕಾಯುತ್ತಿದೆ. ಕೌಕ್ರಾಡಿ ಗ್ರಾಮದ ಬಡ ಕುಟುಂಬವೊಂದರ ಕಣ್ಣೀರ ಕಥೆ ಇದು. ಮೂಡುಬೈಲು ಎಂಬಲ್ಲಿ ಡಾಮರು ರಸ್ತೆಯಿಂದ ಅನತಿ ದೂರದಲ್ಲಿ ಮುದರ ಎಂಬವರು ತಮ್ಮ ಪತ್ನಿ ಗೀತಾ ಹಾಗೂ ಐವರು ಮಕ್ಕಳೊಂದಿಗೆ ಟಾರ್ಪಲ್‌ ಅಳವಡಿಸಿದ ಗುಡಿಸಲಿನಲ್ಲಿ ಇಪ್ಪತ್ತು ವರ್ಷಗಳಿಗಿಂತಲೂ ಹೆಚ್ಚು ಅವಧಿಯಿಂದ ಆಶ್ರಯ ಪಡೆದಿದ್ದಾರೆ. ಐವರು ಮಕ್ಕಳು ಕ್ರಮವಾಗಿ 6, 4, 2ನೇ ತರಗತಿ ಕಲಿಯುತ್ತಿದ್ದರೆ, ಉಳಿದಿಬ್ಬರು ಅಂಗನವಾಡಿಗೆ ತೆರಳುತ್ತಿದ್ದಾರೆ. ಹೆಸರಿಗೆ ಒಂದಿಷ್ಟು ಜಮೀನಿದ್ದರೂ ಮನೆ ಕಟ್ಟುವ ಶಕ್ತಿ ಇವರಿಗಿಲ್ಲ. ಕೂಲಿ-ನಾಲಿ ಮಾಡಿ ಬರುವ ಹಣ ಸಂಸಾರ ನಿರ್ವಹಣೆಗೂ ಸಾಲುತ್ತಿಲ್ಲ. ವಿದ್ಯಾಭ್ಯಾಸವಿಲ್ಲದ ಕಾರಣಕ್ಕೆ ಸರಕಾರದ ಅನುದಾನಗಳ ಮಾಹಿತಿಯೂ ಇಲ್ಲ. ಗ್ರಾಮ ಪಂಚಾಯತ್‌ಗೆ ಹಲವು ಸಲ ಭೇಟಿ ನೀಡಿದ್ದರೂ ಮನೆ ನಿರ್ಮಾಣದ ಭರವಸೆ ಮಾತ್ರ ಸಿಕ್ಕಿದೆ. ಈ ಬಾರಿ ಕೌಕ್ರಾಡಿ ಚರ್ಚ್‌ ಒಂದರ ಶಿಕ್ಷಕಿ ನೀಡಿರುವ ಟಾರ್ಪಲ್‌, ಅವರನ್ನು ಮಳೆ ಹಾಗೂ ಬಿಸಿಲಿನಿಂದ ರಕ್ಷಿಸುತ್ತಿದೆ.

ಪಕ್ಕದ ಮನೆಯಲ್ಲಿ ಆಶ್ರಯ
ಗಾಳಿ, ಮಳೆ ಬಂದರೆ ನಿಲ್ಲಲೂ ಸಾಧ್ಯವಿಲ್ಲದ ಈ ಬಡಕುಟುಂಬ ಅಂತಹ ಸಂದರ್ಭಗಳಲ್ಲಿ ಮಕ್ಕಳನ್ನು ಕರೆದುಕೊಂಡು ಪಕ್ಕದ ಮನೆಗೆ ಹೋಗಿ ಆಶ್ರಯ ಪಡೆಯುತ್ತಿದೆ. ಸರಕಾರದ ಅನುದಾನಗಳನ್ನು ಕೊಡಿಸುವವರು ನಮಗೆ ಯಾರೂ ಇಲ್ಲ ಎಂದು ಮುದರ ನೊಂದು ನುಡಿಯುತ್ತಾರೆ. ಮೂಡುಬೈಲು ಪರಿಸರದಲ್ಲಿ ಇನ್ನೂ ಕೆಲವು ಕುಟುಂಬಗಳು ಜೋಪಡಿಗಳಲ್ಲೇ ವಾಸಿಸುತ್ತಿವೆ. ತಿಮ್ಮಪ್ಪ, ಪುಷ್ಪಾ ಹಾಗೂ ಮೀಯಾಳ ಸಮೀಪ ಚೀಂಕ್ರ ಎಂಬವರ ಕುಟುಂಬಗಳೂ ಜೋಪಡಿಗಳಲ್ಲೇ ಇದ್ದು, ಕೌಕ್ರಾಡಿ ಗ್ರಾಮ ಪಂಚಾಯತ್‌ ಆಡಳಿತ ಇನ್ನಾದರೂ ಇವರಿಗೆ ಸೌಲಭ್ಯ ತಲುಪಿಸಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಾರೆ.

ನಾನೇ ನಿಂತು ಮಾಡಿಸುವೆ
ಕಳೆದ ವರ್ಷ ಈ ಬಗ್ಗೆ ಮಾಹಿತಿ ತಿಳಿದು ಪಿಡಿಒ ಅವರೊಂದಿಗೆ ನಾನೇ ಖುದ್ದಾಗಿ ಅಲ್ಲಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದ್ದು, ಈ ಕುಟುಂಬಗಳ ಮುಖ್ಯಸ್ಥರನ್ನು ಗ್ರಾ.ಪಂ.ಗೆ ಬರುವಂತೆ ಹೇಳಿದ್ದೆ. ಆದರೆ ಯಾರೂ ಬಾರದೇ ಇದ್ದ ಕಾರಣ ಸಮಸ್ಯೆ ಹಾಗೆಯೇ ಉಳಿದಿದೆ. ಈ ಬಾರಿ ಗ್ರಾ.ಪಂ. ವತಿಯಿಂದ ಮನೆ ನಿರ್ಮಿಸಿಕೊಡುವ ಕುರಿತು ನಾನೇ ಸ್ವತಃ ಮುತುವರ್ಜಿ ವಹಿಸಿ, ಕ್ರಮ ಕೈಗೊಳ್ಳುತ್ತೇನೆ.
– ಎಂ.ಕೆ. ಇಬ್ರಾಹಿಂ, ಅಧ್ಯಕ್ಷರು, ಕೌಕ್ರಾಡಿ ಗ್ರಾ.ಪಂ.

— ಗುರುಮೂರ್ತಿ ಎಸ್‌. ಕೊಕ್ಕಡ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.