ರೋಗಕ್ಕೂ ಮದ್ದಿಲ್ಲ ; ನಷ್ಟಕ್ಕೂ ಪರಿಹಾರವಿಲ್ಲದೆ ಕೃಷಿಕ ಹೈರಾಣು


Team Udayavani, Dec 11, 2018, 3:05 AM IST

roga-10-12.jpg

ಸುಳ್ಯ: ಅಡಿಕೆ ಕೃಷಿಗೆ ಕಾಣಿಸಿ ಕೊಂಡ ಹಳದಿ ರೋಗ ಹತ್ತಕ್ಕೂ ಅಧಿಕ ಗ್ರಾಮಗಳ ಅಡಿಕೆ ತೋಟವನ್ನು ಸರ್ವನಾಶ ಮಾಡಿದೆ. ರೋಗಕ್ಕೆ ಔಷಧ ಇಲ್ಲದೆ, ಸರಕಾರಗಳಿಂದ ಸೂಕ್ತ ಪರಿಹಾರ ಸಿಗದೆ ಬೆಳೆಗಾರರು ತತ್ತರಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಮೊದಲಾದ ಗ್ರಾಮದಲ್ಲಿ ಅಡಿಕೆ ಕೃಷಿ ಶೇ. 90ರಷ್ಟು ನಾಶವಾಗಿದೆ. ವಾಣಿಜ್ಯ ಬೆಳೆ ರಬ್ಬರ್‌ ಕೂಡ ಧಾರಣೆ ಇಲ್ಲದೆ ನೆಲಕಚ್ಚಿದೆ. ಪರ್ಯಾಯ ಬೆಳೆಯಾಗಿ ತಾಳೆ ಕೃಷಿಯತ್ತ ದೃಷ್ಟಿ ಹಾಯಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಅಡಿಕೆ, ರಬ್ಬರ್‌ ಬೆಳೆಯನ್ನು ಜೀವನ ನಿರ್ವಹಣೆಗೆ ನಂಬಿದ ಕೃಷಿಕರು ಅವೆರಡೂ ಕೈ ಕೊಟ್ಟ ಕಾರಣ ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸಂಶೋಧನೆ ಫೇಲ್‌!
ಈ ಹಳದಿ ರೋಗ ಅಡಿಕೆಗೆ ಬಾಧಿಸಿದ ಅನಂತರ ಅದರ ಲಕ್ಷಣ ಕಾಣಿಸಿಕೊಳ್ಳುವುದು ನಾಶದ ಅಂಚಿನಲ್ಲಿ. ಆರಂಭಿಕ ರೋಗ ಲಕ್ಷಣ ಬಿಟ್ಟುಕೊಡದ ಕಾರಣ, ಇದಕ್ಕೆ ಪರಿಹಾರ ಏನು ಎನ್ನುವ ಬಗ್ಗೆ ಉತ್ತರ ಸಿಕ್ಕಿಲ್ಲ. ರೋಗ ಸಾಂಕ್ರಾಮಿಕವಾಗಿದ್ದು, ಒಂದು ಗಿಡಕ್ಕೆ ತಗಲಿತೆಂದರೆ ಉಳಿದೆಲ್ಲ ಗಿಡಗಳಿಗೂ ವ್ಯಾಪ್ತಿಸುತ್ತದೆ. ಒಟ್ಟು 5 ಸಾವಿರ ಎಕ್ರೆ ತೋಟ ನಾಶವಾಗಿದೆ. ವಿಟ್ಲದ ಸಿ.ಪಿ.ಸಿ.ಆರ್‌.ಐ. ಹಾಗೂ ಮೈಸೂರಿನ ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅವರಿಗೂ ರೋಗ ಅಥವಾ ನಿಯಂತ್ರಣಕ್ಕೆ ಬೇಕಾದ ಔಷಧ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಕಾಂಡದಲ್ಲಿ ಬೇರು ಹುಳ ರೋಗ ಕಾಣಿಸಿಕೊಂಡ ವೇಳೆ ಮೈಸೂರಿನಿಂದ ವಿಜ್ಞಾನಿಗಳು ಬಂದು ಪರಿಶೀಲಿಸಿದ್ದಾರೆ. ಅವರಿಂದಲೂ ಪರಿಹಾರ ಸಿಕ್ಕಿಲ್ಲ.

ಕೈ ಕೊಟ್ಟ ಫಸಲು, ಧಾರಣೆ
ಶೇ. 85 ಅರಣ್ಯ ಭಾಗ ಆವರಿಸಿರುವ ಸುಳ್ಯದಲ್ಲಿ ಪ್ರಧಾನ ಕೃಷಿ ಅಡಿಕೆಗೆ ಹಳದಿ ರೋಗ, ರಬ್ಬರ್‌ಗೆ ಧಾರಣೆ ಇಳಿಕೆ. ಈ ಎರಡು ಸಮಸ್ಯೆಗಳಿಂದ ಇಲ್ಲಿನ ಕೃಷಿಕ ಮುಕ್ತಿ ಪಡೆದಿಲ್ಲ. ಈ ಕ್ಷೇತ್ರದವರಾಗಿರುವ ಹಲವರು ವಿವಿಧ ಪಕ್ಷಗಳ ಮೂಲಕ ಜನಪ್ರತಿನಿಧಿಗಳಾಗಿ ಅಧಿಕಾರ ವ್ಯವಸ್ಥೆ ಉಚ್ಛ ಸ್ಥಾನ ಅಲಂಕರಿಸಿದ್ದರೂ, ತಾಲೂಕಿಗೆ ಅದರಿಂದ ಏನು ಲಾಭವಾಗಿಲ್ಲ. ಎರಡು ನದಿಗಳು ಇದ್ದರೂ, ಶಾಶ್ವತ ನೀರಾವರಿ ವ್ಯವಸ್ಥೆಯಿಲ್ಲ. ಉತ್ಪನ್ನಗಳಿಗೆ ಮಾರುಕಟ್ಟೆ ಕೊರತೆ, ಸಾಗಾಟಕ್ಕೆ ಸಂಚಾರ ಸೌಕರ್ಯ ಅವ್ಯವಸ್ಥೆ ಹೀಗೆ ಸಾಲು ಸಾಲು ಸಮಸ್ಯೆಗಳು ಇಲ್ಲಿ ಜೀವಂತವಾಗಿ ಉಳಿದುಕೊಂಡಿದೆ.

ಸುಳ್ಯದ ರೈತರ ಬೇಡಿಕೆಗಳೇನು?
– ಡಾ| ಎಂ.ಎಸ್‌. ಸ್ವಾಮಿನಾಥನ್‌ ನೇತೃತ್ವದ ಆಯೋಗದ ಶಿಫಾರಸ್ಸಿನಂತೆ ಕೃಷಿ ಉತ್ಪನ್ನಗಳಿಗೆ ಉತ್ಪಾದನ ವೆಚ್ಚ ನಿಗದಿಪಡಿಸುವುದು.
– ರೈತರ ಸಂಪೂರ್ಣ ಸಾಲಮನ್ನಾ ಮಾಡುವುದು.
– ಗ್ರಾಮೀಣ ಪ್ರದೇಶದವರ ಎಲ್ಲಾ ಸಾಲ ರದ್ದು ಮಾಡುವುದು.
– ಶೇ.65ಕೇಂದ್ರ, ಶೇ. 35 ರಾಜ್ಯ ಅನುಪಾತದಲ್ಲಿ 2016ರಲ್ಲಿ ಮಂಡಿಸಿದ ಖಾಸಗಿ ಬಿಲ್‌ ಅಂಶ ಪರಿಗಣಿಸುವುದು.
– ಕೊಳೆರೋಗಕ್ಕೆ ತುತ್ತಾದ ರೈತರಿಗೆ ಬೆಳೆ ಪರಿಹಾರ.
– ಕೃಷಿ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡುವುದು. 
– ಮಂಗಗಳ ಉಪಟಳ ತಡೆಯಲು ಮಂಕಿ ಪಾರ್ಕ್‌ ನಿರ್ಮಾಣ.
– ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಖರೀದಿಗಾಗಿ ಖರೀದಿ ಕೇಂದ್ರ ಸ್ಥಾಪನೆ.
– ಎನ್‌.ಆರ್‌.ಜಿ. ಉದ್ಯೋಗ ಭರವಸೆ ಖಾತ್ರಿ ಯೋಜನೆ ಕೃಷಿ ಕುಟುಂಬಕ್ಕೆ ವಿಸ್ತರಣೆ.
– ಕೃಷಿ ಚಟುವಟಿಕೆಗೆ ಸರಳ ಸಾಲ ನೀತಿ.
– ಹಳದಿ ರೋಗ ನಷ್ಟಕ್ಕೆ ಎಕ್ರೆಗೆ 10 ಲಕ್ಷ ರೂ. ಪರಿಹಾರ ನೀಡುವುದು.
– ಕಾಡಾನೆ ತಡೆಗೆ ಆನೆ ತಡೆಬೇಲಿ,
– ಅಡಿಕೆ, ರಬ್ಬರ್‌ಗೆ ಸ್ಥಿರ ಧಾರಣೆ

— ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.