ರೋಗಕ್ಕೂ ಮದ್ದಿಲ್ಲ ; ನಷ್ಟಕ್ಕೂ ಪರಿಹಾರವಿಲ್ಲದೆ ಕೃಷಿಕ ಹೈರಾಣು
Team Udayavani, Dec 11, 2018, 3:05 AM IST
ಸುಳ್ಯ: ಅಡಿಕೆ ಕೃಷಿಗೆ ಕಾಣಿಸಿ ಕೊಂಡ ಹಳದಿ ರೋಗ ಹತ್ತಕ್ಕೂ ಅಧಿಕ ಗ್ರಾಮಗಳ ಅಡಿಕೆ ತೋಟವನ್ನು ಸರ್ವನಾಶ ಮಾಡಿದೆ. ರೋಗಕ್ಕೆ ಔಷಧ ಇಲ್ಲದೆ, ಸರಕಾರಗಳಿಂದ ಸೂಕ್ತ ಪರಿಹಾರ ಸಿಗದೆ ಬೆಳೆಗಾರರು ತತ್ತರಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಮೊದಲಾದ ಗ್ರಾಮದಲ್ಲಿ ಅಡಿಕೆ ಕೃಷಿ ಶೇ. 90ರಷ್ಟು ನಾಶವಾಗಿದೆ. ವಾಣಿಜ್ಯ ಬೆಳೆ ರಬ್ಬರ್ ಕೂಡ ಧಾರಣೆ ಇಲ್ಲದೆ ನೆಲಕಚ್ಚಿದೆ. ಪರ್ಯಾಯ ಬೆಳೆಯಾಗಿ ತಾಳೆ ಕೃಷಿಯತ್ತ ದೃಷ್ಟಿ ಹಾಯಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಅಡಿಕೆ, ರಬ್ಬರ್ ಬೆಳೆಯನ್ನು ಜೀವನ ನಿರ್ವಹಣೆಗೆ ನಂಬಿದ ಕೃಷಿಕರು ಅವೆರಡೂ ಕೈ ಕೊಟ್ಟ ಕಾರಣ ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಂಶೋಧನೆ ಫೇಲ್!
ಈ ಹಳದಿ ರೋಗ ಅಡಿಕೆಗೆ ಬಾಧಿಸಿದ ಅನಂತರ ಅದರ ಲಕ್ಷಣ ಕಾಣಿಸಿಕೊಳ್ಳುವುದು ನಾಶದ ಅಂಚಿನಲ್ಲಿ. ಆರಂಭಿಕ ರೋಗ ಲಕ್ಷಣ ಬಿಟ್ಟುಕೊಡದ ಕಾರಣ, ಇದಕ್ಕೆ ಪರಿಹಾರ ಏನು ಎನ್ನುವ ಬಗ್ಗೆ ಉತ್ತರ ಸಿಕ್ಕಿಲ್ಲ. ರೋಗ ಸಾಂಕ್ರಾಮಿಕವಾಗಿದ್ದು, ಒಂದು ಗಿಡಕ್ಕೆ ತಗಲಿತೆಂದರೆ ಉಳಿದೆಲ್ಲ ಗಿಡಗಳಿಗೂ ವ್ಯಾಪ್ತಿಸುತ್ತದೆ. ಒಟ್ಟು 5 ಸಾವಿರ ಎಕ್ರೆ ತೋಟ ನಾಶವಾಗಿದೆ. ವಿಟ್ಲದ ಸಿ.ಪಿ.ಸಿ.ಆರ್.ಐ. ಹಾಗೂ ಮೈಸೂರಿನ ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅವರಿಗೂ ರೋಗ ಅಥವಾ ನಿಯಂತ್ರಣಕ್ಕೆ ಬೇಕಾದ ಔಷಧ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಕಾಂಡದಲ್ಲಿ ಬೇರು ಹುಳ ರೋಗ ಕಾಣಿಸಿಕೊಂಡ ವೇಳೆ ಮೈಸೂರಿನಿಂದ ವಿಜ್ಞಾನಿಗಳು ಬಂದು ಪರಿಶೀಲಿಸಿದ್ದಾರೆ. ಅವರಿಂದಲೂ ಪರಿಹಾರ ಸಿಕ್ಕಿಲ್ಲ.
ಕೈ ಕೊಟ್ಟ ಫಸಲು, ಧಾರಣೆ
ಶೇ. 85 ಅರಣ್ಯ ಭಾಗ ಆವರಿಸಿರುವ ಸುಳ್ಯದಲ್ಲಿ ಪ್ರಧಾನ ಕೃಷಿ ಅಡಿಕೆಗೆ ಹಳದಿ ರೋಗ, ರಬ್ಬರ್ಗೆ ಧಾರಣೆ ಇಳಿಕೆ. ಈ ಎರಡು ಸಮಸ್ಯೆಗಳಿಂದ ಇಲ್ಲಿನ ಕೃಷಿಕ ಮುಕ್ತಿ ಪಡೆದಿಲ್ಲ. ಈ ಕ್ಷೇತ್ರದವರಾಗಿರುವ ಹಲವರು ವಿವಿಧ ಪಕ್ಷಗಳ ಮೂಲಕ ಜನಪ್ರತಿನಿಧಿಗಳಾಗಿ ಅಧಿಕಾರ ವ್ಯವಸ್ಥೆ ಉಚ್ಛ ಸ್ಥಾನ ಅಲಂಕರಿಸಿದ್ದರೂ, ತಾಲೂಕಿಗೆ ಅದರಿಂದ ಏನು ಲಾಭವಾಗಿಲ್ಲ. ಎರಡು ನದಿಗಳು ಇದ್ದರೂ, ಶಾಶ್ವತ ನೀರಾವರಿ ವ್ಯವಸ್ಥೆಯಿಲ್ಲ. ಉತ್ಪನ್ನಗಳಿಗೆ ಮಾರುಕಟ್ಟೆ ಕೊರತೆ, ಸಾಗಾಟಕ್ಕೆ ಸಂಚಾರ ಸೌಕರ್ಯ ಅವ್ಯವಸ್ಥೆ ಹೀಗೆ ಸಾಲು ಸಾಲು ಸಮಸ್ಯೆಗಳು ಇಲ್ಲಿ ಜೀವಂತವಾಗಿ ಉಳಿದುಕೊಂಡಿದೆ.
ಸುಳ್ಯದ ರೈತರ ಬೇಡಿಕೆಗಳೇನು?
– ಡಾ| ಎಂ.ಎಸ್. ಸ್ವಾಮಿನಾಥನ್ ನೇತೃತ್ವದ ಆಯೋಗದ ಶಿಫಾರಸ್ಸಿನಂತೆ ಕೃಷಿ ಉತ್ಪನ್ನಗಳಿಗೆ ಉತ್ಪಾದನ ವೆಚ್ಚ ನಿಗದಿಪಡಿಸುವುದು.
– ರೈತರ ಸಂಪೂರ್ಣ ಸಾಲಮನ್ನಾ ಮಾಡುವುದು.
– ಗ್ರಾಮೀಣ ಪ್ರದೇಶದವರ ಎಲ್ಲಾ ಸಾಲ ರದ್ದು ಮಾಡುವುದು.
– ಶೇ.65ಕೇಂದ್ರ, ಶೇ. 35 ರಾಜ್ಯ ಅನುಪಾತದಲ್ಲಿ 2016ರಲ್ಲಿ ಮಂಡಿಸಿದ ಖಾಸಗಿ ಬಿಲ್ ಅಂಶ ಪರಿಗಣಿಸುವುದು.
– ಕೊಳೆರೋಗಕ್ಕೆ ತುತ್ತಾದ ರೈತರಿಗೆ ಬೆಳೆ ಪರಿಹಾರ.
– ಕೃಷಿ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡುವುದು.
– ಮಂಗಗಳ ಉಪಟಳ ತಡೆಯಲು ಮಂಕಿ ಪಾರ್ಕ್ ನಿರ್ಮಾಣ.
– ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಖರೀದಿಗಾಗಿ ಖರೀದಿ ಕೇಂದ್ರ ಸ್ಥಾಪನೆ.
– ಎನ್.ಆರ್.ಜಿ. ಉದ್ಯೋಗ ಭರವಸೆ ಖಾತ್ರಿ ಯೋಜನೆ ಕೃಷಿ ಕುಟುಂಬಕ್ಕೆ ವಿಸ್ತರಣೆ.
– ಕೃಷಿ ಚಟುವಟಿಕೆಗೆ ಸರಳ ಸಾಲ ನೀತಿ.
– ಹಳದಿ ರೋಗ ನಷ್ಟಕ್ಕೆ ಎಕ್ರೆಗೆ 10 ಲಕ್ಷ ರೂ. ಪರಿಹಾರ ನೀಡುವುದು.
– ಕಾಡಾನೆ ತಡೆಗೆ ಆನೆ ತಡೆಬೇಲಿ,
– ಅಡಿಕೆ, ರಬ್ಬರ್ಗೆ ಸ್ಥಿರ ಧಾರಣೆ
— ಕಿರಣ್ ಪ್ರಸಾದ್ ಕುಂಡಡ್ಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ