ರೋಗಕ್ಕೂ ಮದ್ದಿಲ್ಲ ; ನಷ್ಟಕ್ಕೂ ಪರಿಹಾರವಿಲ್ಲದೆ ಕೃಷಿಕ ಹೈರಾಣು


Team Udayavani, Dec 11, 2018, 3:05 AM IST

roga-10-12.jpg

ಸುಳ್ಯ: ಅಡಿಕೆ ಕೃಷಿಗೆ ಕಾಣಿಸಿ ಕೊಂಡ ಹಳದಿ ರೋಗ ಹತ್ತಕ್ಕೂ ಅಧಿಕ ಗ್ರಾಮಗಳ ಅಡಿಕೆ ತೋಟವನ್ನು ಸರ್ವನಾಶ ಮಾಡಿದೆ. ರೋಗಕ್ಕೆ ಔಷಧ ಇಲ್ಲದೆ, ಸರಕಾರಗಳಿಂದ ಸೂಕ್ತ ಪರಿಹಾರ ಸಿಗದೆ ಬೆಳೆಗಾರರು ತತ್ತರಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಮೊದಲಾದ ಗ್ರಾಮದಲ್ಲಿ ಅಡಿಕೆ ಕೃಷಿ ಶೇ. 90ರಷ್ಟು ನಾಶವಾಗಿದೆ. ವಾಣಿಜ್ಯ ಬೆಳೆ ರಬ್ಬರ್‌ ಕೂಡ ಧಾರಣೆ ಇಲ್ಲದೆ ನೆಲಕಚ್ಚಿದೆ. ಪರ್ಯಾಯ ಬೆಳೆಯಾಗಿ ತಾಳೆ ಕೃಷಿಯತ್ತ ದೃಷ್ಟಿ ಹಾಯಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಅಡಿಕೆ, ರಬ್ಬರ್‌ ಬೆಳೆಯನ್ನು ಜೀವನ ನಿರ್ವಹಣೆಗೆ ನಂಬಿದ ಕೃಷಿಕರು ಅವೆರಡೂ ಕೈ ಕೊಟ್ಟ ಕಾರಣ ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸಂಶೋಧನೆ ಫೇಲ್‌!
ಈ ಹಳದಿ ರೋಗ ಅಡಿಕೆಗೆ ಬಾಧಿಸಿದ ಅನಂತರ ಅದರ ಲಕ್ಷಣ ಕಾಣಿಸಿಕೊಳ್ಳುವುದು ನಾಶದ ಅಂಚಿನಲ್ಲಿ. ಆರಂಭಿಕ ರೋಗ ಲಕ್ಷಣ ಬಿಟ್ಟುಕೊಡದ ಕಾರಣ, ಇದಕ್ಕೆ ಪರಿಹಾರ ಏನು ಎನ್ನುವ ಬಗ್ಗೆ ಉತ್ತರ ಸಿಕ್ಕಿಲ್ಲ. ರೋಗ ಸಾಂಕ್ರಾಮಿಕವಾಗಿದ್ದು, ಒಂದು ಗಿಡಕ್ಕೆ ತಗಲಿತೆಂದರೆ ಉಳಿದೆಲ್ಲ ಗಿಡಗಳಿಗೂ ವ್ಯಾಪ್ತಿಸುತ್ತದೆ. ಒಟ್ಟು 5 ಸಾವಿರ ಎಕ್ರೆ ತೋಟ ನಾಶವಾಗಿದೆ. ವಿಟ್ಲದ ಸಿ.ಪಿ.ಸಿ.ಆರ್‌.ಐ. ಹಾಗೂ ಮೈಸೂರಿನ ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅವರಿಗೂ ರೋಗ ಅಥವಾ ನಿಯಂತ್ರಣಕ್ಕೆ ಬೇಕಾದ ಔಷಧ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಕಾಂಡದಲ್ಲಿ ಬೇರು ಹುಳ ರೋಗ ಕಾಣಿಸಿಕೊಂಡ ವೇಳೆ ಮೈಸೂರಿನಿಂದ ವಿಜ್ಞಾನಿಗಳು ಬಂದು ಪರಿಶೀಲಿಸಿದ್ದಾರೆ. ಅವರಿಂದಲೂ ಪರಿಹಾರ ಸಿಕ್ಕಿಲ್ಲ.

ಕೈ ಕೊಟ್ಟ ಫಸಲು, ಧಾರಣೆ
ಶೇ. 85 ಅರಣ್ಯ ಭಾಗ ಆವರಿಸಿರುವ ಸುಳ್ಯದಲ್ಲಿ ಪ್ರಧಾನ ಕೃಷಿ ಅಡಿಕೆಗೆ ಹಳದಿ ರೋಗ, ರಬ್ಬರ್‌ಗೆ ಧಾರಣೆ ಇಳಿಕೆ. ಈ ಎರಡು ಸಮಸ್ಯೆಗಳಿಂದ ಇಲ್ಲಿನ ಕೃಷಿಕ ಮುಕ್ತಿ ಪಡೆದಿಲ್ಲ. ಈ ಕ್ಷೇತ್ರದವರಾಗಿರುವ ಹಲವರು ವಿವಿಧ ಪಕ್ಷಗಳ ಮೂಲಕ ಜನಪ್ರತಿನಿಧಿಗಳಾಗಿ ಅಧಿಕಾರ ವ್ಯವಸ್ಥೆ ಉಚ್ಛ ಸ್ಥಾನ ಅಲಂಕರಿಸಿದ್ದರೂ, ತಾಲೂಕಿಗೆ ಅದರಿಂದ ಏನು ಲಾಭವಾಗಿಲ್ಲ. ಎರಡು ನದಿಗಳು ಇದ್ದರೂ, ಶಾಶ್ವತ ನೀರಾವರಿ ವ್ಯವಸ್ಥೆಯಿಲ್ಲ. ಉತ್ಪನ್ನಗಳಿಗೆ ಮಾರುಕಟ್ಟೆ ಕೊರತೆ, ಸಾಗಾಟಕ್ಕೆ ಸಂಚಾರ ಸೌಕರ್ಯ ಅವ್ಯವಸ್ಥೆ ಹೀಗೆ ಸಾಲು ಸಾಲು ಸಮಸ್ಯೆಗಳು ಇಲ್ಲಿ ಜೀವಂತವಾಗಿ ಉಳಿದುಕೊಂಡಿದೆ.

ಸುಳ್ಯದ ರೈತರ ಬೇಡಿಕೆಗಳೇನು?
– ಡಾ| ಎಂ.ಎಸ್‌. ಸ್ವಾಮಿನಾಥನ್‌ ನೇತೃತ್ವದ ಆಯೋಗದ ಶಿಫಾರಸ್ಸಿನಂತೆ ಕೃಷಿ ಉತ್ಪನ್ನಗಳಿಗೆ ಉತ್ಪಾದನ ವೆಚ್ಚ ನಿಗದಿಪಡಿಸುವುದು.
– ರೈತರ ಸಂಪೂರ್ಣ ಸಾಲಮನ್ನಾ ಮಾಡುವುದು.
– ಗ್ರಾಮೀಣ ಪ್ರದೇಶದವರ ಎಲ್ಲಾ ಸಾಲ ರದ್ದು ಮಾಡುವುದು.
– ಶೇ.65ಕೇಂದ್ರ, ಶೇ. 35 ರಾಜ್ಯ ಅನುಪಾತದಲ್ಲಿ 2016ರಲ್ಲಿ ಮಂಡಿಸಿದ ಖಾಸಗಿ ಬಿಲ್‌ ಅಂಶ ಪರಿಗಣಿಸುವುದು.
– ಕೊಳೆರೋಗಕ್ಕೆ ತುತ್ತಾದ ರೈತರಿಗೆ ಬೆಳೆ ಪರಿಹಾರ.
– ಕೃಷಿ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡುವುದು. 
– ಮಂಗಗಳ ಉಪಟಳ ತಡೆಯಲು ಮಂಕಿ ಪಾರ್ಕ್‌ ನಿರ್ಮಾಣ.
– ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಖರೀದಿಗಾಗಿ ಖರೀದಿ ಕೇಂದ್ರ ಸ್ಥಾಪನೆ.
– ಎನ್‌.ಆರ್‌.ಜಿ. ಉದ್ಯೋಗ ಭರವಸೆ ಖಾತ್ರಿ ಯೋಜನೆ ಕೃಷಿ ಕುಟುಂಬಕ್ಕೆ ವಿಸ್ತರಣೆ.
– ಕೃಷಿ ಚಟುವಟಿಕೆಗೆ ಸರಳ ಸಾಲ ನೀತಿ.
– ಹಳದಿ ರೋಗ ನಷ್ಟಕ್ಕೆ ಎಕ್ರೆಗೆ 10 ಲಕ್ಷ ರೂ. ಪರಿಹಾರ ನೀಡುವುದು.
– ಕಾಡಾನೆ ತಡೆಗೆ ಆನೆ ತಡೆಬೇಲಿ,
– ಅಡಿಕೆ, ರಬ್ಬರ್‌ಗೆ ಸ್ಥಿರ ಧಾರಣೆ

— ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.