ಮಹಾಮಸ್ತಕಾಭಿಷೇಕ ಯಶಸ್ಸಿಗೆ ರಾಜ್ಯ ಮಟ್ಟದ ಸಮಿತಿ: ಹೆಗ್ಗಡೆ


Team Udayavani, Sep 13, 2018, 1:17 PM IST

13-sepctember-19.jpg

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್‌ ಬಾಹುಬಲಿ ಸ್ವಾಮಿಗೆ 2019ರ ಫೆಬ್ರವರಿಯಲ್ಲಿ ನಾಲ್ಕನೇ ಮಹಾಮಸ್ತಕಾಭಿಷೇಕ ನಡೆಯಲಿದ್ದು, ತಯಾರಿಗಾಗಿ ರಾಜ್ಯ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಹಾಮಸ್ತಾಕಾಭಿಷೇಕದ ಪೂರ್ವ ಸಿದ್ಧತೆಗೆ ರಾಜ್ಯದ ವಿವಿಧ ಭಾಗಗಳ ಶ್ರಾವಕರು ಹಾಗೂ ಸಂಘ- ಸಂಸ್ಥೆಗಳ ಪ್ರಮುಖರ ಸಭೆಯನ್ನು ಸೋಮವಾರ ಕ್ಷೇತ್ರದಲ್ಲಿ ಕರೆಯಲಾಗಿದ್ದು, ಎಲ್ಲರೂ ಬೆಂಬಲ ವ್ಯಕ್ತಪಡಿಸಿದ್ದಾರೆ. ನಾಡಿನ ಶ್ರೇಷ್ಠ ಸಂತರಾದ ದಿಗಂಬರ ಆಚಾರ್ಯ ವರ್ಧಮಾನ ಸಾಗರ್‌ಜಿ ಮಹಾರಾಜರು, ಪುಷ್ಪದಂತ ಸಾಗರಜಿ ಮಹಾರಾಜರ ಸಹಿತ ಕನಿಷ್ಠ 15 ಮಂದಿ ದಿಗಂಬರ ಮುನಿಗಳು ಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಸ್ತಕಾಭಿಷೇಕದ ಪ್ರಧಾನ ಸಂಚಾಲಕರಾಗಿ ಡಿ. ಸುರೇಂದ್ರ ಕುಮಾರ್‌, ಸಂಚಾಲಕರಾಗಿ ಡಿ. ಹರ್ಷೇನ್ದ್ರ ಕುಮಾರ್‌, ಜತೆಗೆ ಉಸ್ತುವಾರಿ ನೋಡಲು ಕೆ. ಮಹಾವೀರ ಅಜ್ರಿ ಹಾಗೂ ಎ.ವಿ. ಶೆಟ್ಟಿ ಅವರು ಸಮಿತಿಯಲ್ಲಿರುತ್ತಾರೆ ಎಂದರು.

ಮಸ್ತಕಾಭಿಷೇಕದ ದಿನಾಂಕದ ಕುರಿತು ಗುರುಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಆರಂಭದಲ್ಲಿ 5 ದಿನಗಳ ಕಲ್ಯಾಣ ಕಾರ್ಯಕ್ರಮ, 3 ದಿನ ಸತತ ಮಸ್ತಕಾಭಿಷೇಕ ನಡೆಯಲಿದ್ದು, ಬಳಿಕ ಪ್ರತಿವಾರ ಭಕ್ತರ ಅಪೇಕ್ಷೆಯ ಮೇರೆಗೆ ಶನಿವಾರ ಹಾಗೂ ರವಿವಾರ ಮಸ್ತಕಾಭಿಷೇಕ ಮುಂದುವರಿಸಲಾಗುತ್ತದೆ ಎಂದರು.

ರಿಂಗ್‌ ರೋಡ್‌ ಭರವಸೆ
ರಾಜ್ಯ ಸರಕಾರವು ಕ್ಷೇತ್ರಕ್ಕೆ ಈಗಾಗಲೇ ಎಲ್ಲ ರೀತಿಯ ಬೆಂಬಲ ನೀಡಿದ್ದು, ಮುಖ್ಯಮಂತ್ರಿ ಕುಮಾರ ಸ್ವಾಮಿ ಹಾಗೂ ಸಚಿವ ಎಚ್‌.ಡಿ. ರೇವಣ್ಣ ಸಹಕಾರದ ಭರವಸೆ ನೀಡಿದ್ದಾರೆ. ಕ್ಷೇತ್ರದ ಮುಖ್ಯರಸ್ತೆಗಳಲ್ಲಿನ ವಾಹನ ಒತ್ತಡಕ್ಕೆ ಶಾಶ್ವತ ಪರಿಹಾರ ನೀಡಲು ರೇವಣ್ಣ ಅವರು ಕ್ಷೇತ್ರಕ್ಕೆ ರಿಂಗ್‌ರೋಡ್‌ನ‌ ಕುರಿತು ಭರವಸೆ ನೀಡಿದ್ದಾರೆ ಎಂದು ಹೆಗ್ಗಡೆ ತಿಳಿಸಿದರು.

ಜನಕಲ್ಯಾಣ ಕಾರ್ಯ
ಕ್ಷೇತ್ರದಲ್ಲಿ ಬಾಹುಬಲಿಯ ಪ್ರತಿಷ್ಠೆಯ ವರ್ಷ ಜನಕಲ್ಯಾಣ ಕಾರ್ಯವಾಗಿ ಗ್ರಾಮಾಭಿವೃದ್ಧಿ ಯೋಜನೆ, ರುಡ್‌ಸೆಡ್‌ ಪ್ರಾರಂಭವಾಯಿತು. ಈ ಬಾರಿ ರಾಜ್ಯದಲ್ಲಿ 200 ಕೆರೆಗಳ ಹೂಳೆತ್ತುವ ಕಾರ್ಯವನ್ನು ಕೈಗೊಂಡಿದ್ದೇವೆ. ಇದಕ್ಕೆ ರಾಜ್ಯ ಸರಕಾರ ಕೂಡ ನಮಗೆ ಸಹಕಾರ ನೀಡಿದ್ದು, ಕಿರು ನೀರಾವರಿ ಯೋಜನೆಯ ಪುಟ್ಟರಾಜು ಅವರ ಸಭೆಯನ್ನೂ ಕರೆದಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಿಂದಲೂ ಈ ಕಾರ್ಯ ನಡೆಯಲಿದೆ ಎಂದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.