ಸಹಾಯಕಿ ನೇಮಕ ಕ್ರಮ ಖಂಡಿಸಿ ಪ್ರತಿಭಟನೆ


Team Udayavani, Sep 15, 2018, 12:39 PM IST

15-seoctember-8.jpg

ವಿಟ್ಲ : ಉಚಿತವಾಗಿ ಆರು ತಿಂಗಳ ಕಾಲ ಸೇವೆ ಸಲ್ಲಿಸಿದ ಪ. ಜಾತಿಗೆ ಸೇರಿದ ಅಂಗನವಾಡಿ ಸಹಾಯಕಿಯನ್ನು ಬಿಟ್ಟು 5 ಕಿ.ಮೀ. ದೂರದವರನ್ನು ಅನಿಲ ಕಟ್ಟೆ ಅಂಗನವಾಡಿ ಕೇಂದ್ರಕ್ಕೆ ನೇಮಕ ಮಾಡಿದ ಕ್ರಮವನ್ನು ಖಂಡಿಸಿ ಸ್ಥಳೀಯರು ಅಂಗನವಾಡಿ ತೆರೆಯಲು ಬಿಡದೆ ಪ್ರತಿಭಟಿಸಿದ ಘಟನೆ ಶುಕ್ರವಾರ ಸಂಭವಿಸಿತು.

ಹೊರಗಿನ ಅಭ್ಯರ್ಥಿಗೆ ಬೇಕಾದ ದಾಖಲೆಯನ್ನು ಖುದ್ದು ಇಲಾಖೆಯ ಅಧಿಕಾರಿಗಳೇ ತೆರಳಿ ಮಾಡುವ ಆವಶ್ಯಕತೆ ಏನು ? ಒಬ್ಬರಿಗೆ ಮಾತ್ರ ದಾಖಲೆ ಮಾಡಿಕೊಟ್ಟು ಸಮಜಾಯಿಷಿ ಕೊಡುವ ಆವಶ್ಯಕತೆ ಏನಿದೆ ? ಉಚಿತವಾಗಿ ಸೇವೆ ನೀಡಿದ ಮಮತಾ ಅವರನ್ನೇ ಇಲ್ಲಿ ಖಾಯಂಗೊಳಿಸಬೇಕು. ಇಲ್ಲದಿದ್ದಲ್ಲಿ ಸ್ಥಳೀಯ ಮಕ್ಕಳನ್ನು ಅಲ್ಲಿಗೆ ಕಳುಹಿಸುವುದಿಲ್ಲ ಎಂದು ಪ್ರತಿಭಟನಕಾರರು ಎಚ್ಚರಿಸಿದರು.

ಮೇಲ್ವಿಚಾರಕಿ ರೋಹಿಣಿ ಅವರು ಪ್ರತಿಭಟನಕಾರರ ಮನವೊಲಿಸಲು ಯತ್ನಿಸಿದರೂ ಇದಕ್ಕೆ ಒಪ್ಪದಿದ್ದಾಗ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಸಿಡಿಪಿಒ ಸುಧಾ ಜೋಷಿ ಸ್ಥಳಕ್ಕಾಗಮಿಸಿ, ಹುದ್ದೆಗೆ ಮೂರು ಅರ್ಜಿಗಳು ಬಂದಿದ್ದು, ವಯಸ್ಸಿನ ಆಧಾರದಲ್ಲಿ 2 ಅರ್ಜಿಗಳು ಉಳಿದುಕೊಂಡಿವೆ. ವಾಸ್ತವ್ಯ ದೃಢೀಕರಣ ಪತ್ರವನ್ನು ಪ.ಪಂ. ಮುಖ್ಯಾಧಿಕಾರಿಗಳಿಂದ ಪಡೆದಾಗ ಇಬ್ಬರೂ ಒಂದೇ ವಾರ್ಡ್‌ ನವರೆಂಬ ಮಾಹಿತಿ ಸಿಕ್ಕಿದೆ. ಹೆಚ್ಚಿನ ವಿದ್ಯಾರ್ಹತೆ, ವಿಧವೆ ಎಂಬ ಕಾರಣಕ್ಕೆ ಅಪರ ಜಿಲ್ಲಾಧಿಕಾರಿ ಸಭೆಯಲ್ಲಿ ಆಯ್ಕೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿ ಸಹಾಯಕಿ ಆಯ್ಕೆ ನಡೆಸಲಾಗುವುದಿಲ್ಲ, ಆದೇಶದ ಪಾಲನೆಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಆದೇಶ ಬದಲಾಯಿಸಿ ಹತ್ತಿರದ ನಿವಾಸಿಗೆ ಮಹತ್ವ ನೀಡದಿದ್ದಲ್ಲಿ, ಸೋಮವಾರ ಬಳಿಕ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆಯಲಾಯಿತು. ಪ.ಪಂ. ಸದಸ್ಯೆ ಸಂಧ್ಯಾ ಮೋಹನ್‌, ಅಬೂಬಕ್ಕರ್‌ ಅನಿಲಕಟ್ಟೆ, ಈಶ್ವರ ಭಟ್‌ ಪೂರ್ಲುಪ್ಪಾಡಿ, ಮೋಹನ್‌ ಸೇರಾಜೆ, ಸ್ತ್ರೀಶಕ್ತಿ ಸದಸ್ಯೆ ಬೇಬಿ, ಹೇಮಾವತಿ, ನಾರಾಯಣ, ವಿವೇಕಾನಂದ ಗೌಡ, ಹರೀಶ್‌ ನಾಯ್ಕ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.