ಕನ್ನಡದ ಕಂಪಿಗೆ ಕಾಯುತ್ತಿದೆ ಮುತ್ತಿನೂರು


Team Udayavani, Sep 19, 2018, 9:59 AM IST

19-sepctember-1.jpg

ಪುತ್ತೂರು: ನೆಲ, ಜಲ, ಗಾಳಿ, ಭಾಷೆಯಲ್ಲಿ ಅಡಕ ಆಗಿರುವ ಕನ್ನಡದ ಕಂಪನ್ನು ಸಂಭ್ರಮದಿಂದ ಆಘ್ರಾಣಿಸಲು ಪುತ್ತೂರು ಕಾತರದಿಂದ ಕಾಯುತ್ತಿದೆ. ಇನ್ನೊಂದೆಡೆ ಕನ್ನಡದ ಸೊಗಡನ್ನು ಬಿಚ್ಚಿಡಲು ಕನ್ನಡ ಸಾಹಿತ್ಯ ಪರಿಷತ್‌ ಉತ್ಸುಕವಾಗಿದೆ.

ಒಂದು ಕಾರ್ಯಕ್ರಮ ಯಶಸ್ವಿ ಎನಿಸಿಕೊಳ್ಳುವುದು ವೇದಿಕೆ ವೈಭವದಿಂದ ಮಾತ್ರವಲ್ಲ; ಅಲ್ಲಿ ಪ್ರೇಕ್ಷಕರೂ ಅಷ್ಟೇ ಮುಖ್ಯ. ಈ ಎರಡೂ ವರ್ಗದ ಜನರು ಒಂದೆಡೆ ಬೆರೆತು, ಕನ್ನಡದ ಬಗೆಗಿನ ಆನಂದವನ್ನು ಮನದಣಿಯೆ ಆಸ್ವಾದಿಸಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯ ಜಿ.ಎಲ್‌. ಆಚಾರ್ಯ ಸಭಾಂಗಣ, ಎನ್‌.ವಿ. ಮೂರ್ತಿ ವೇದಿಕೆ ಸಿದ್ಧವಾಗಿದೆ.

ಪುತ್ತೂರು ಸಾಹಿತ್ಯ ಸಮ್ಮೇಳನ ಹಲವು ವೈಶಿಷ್ಟ್ಯಗಳಿಂದ ಕೂಡಿದೆ. ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಆಡಂಬರಕ್ಕೆ ಇಲ್ಲಿ ಮಣೆಯಿಲ್ಲ. ಸರಳ ಕಾರ್ಯಕ್ರಮ. ಊಟದಿಂದ ಹಿಡಿದು ಕಾರ್ಯಕ್ರಮದವರೆಗೆ ಎಲ್ಲಿಯೂ ದುಂದು ವೆಚ್ಚಕ್ಕೆ ಅವಕಾಶವೇ ಇಲ್ಲ. ಇದುವರೆಗೆ ಎಲ್ಲ ಕಡೆಯಂತೆ ಒಂದು ದಿನ ನಡೆಯುತ್ತಿದ್ದ ತಾಲೂಕು ಸಾಹಿತ್ಯ ಜಾತ್ರೆ, ಪುತ್ತೂರಿನಲ್ಲಿ ಎರಡು ದಿನಗಳ ಕಾಲ ನಡೆಯುವುದು ಇನ್ನೊಂದು ವಿಶೇಷ.

ಯುವ ಸಬಲೀಕರಣ
ಕನ್ನಡ ಭಾಷೆ- ಸಂಸ್ಕೃತಿಯ ಅರಿವು ಈ ವರ್ಷದ ಸಾಹಿತ್ಯ ಸಮ್ಮೇಳನದ ಧ್ಯೇಯವಾಕ್ಯ. ಯುವ ಸಬಲೀಕರಣ ಕಾರ್ಯಕ್ರಮದ ಜೀವಾಳ. ಸಾಹಿತ್ಯ ಸಮ್ಮೇಳನಗಳು ಹಿರಿಯ ನಾಗರಿಕರ ಸ್ವತ್ತು ಎಂಬ ಅಭಿಪ್ರಾಯ ದೂರ ಮಾಡಲು, ಯುವ ಜನತೆಯನ್ನು ಹೆಚ್ಚಾಗಿ ತೊಡಗಿಸಿಕೊಳ್ಳಲಾಗಿದೆ. 500ಕ್ಕೂ ಅಧಿಕ ಸ್ವಯಂ ಸೇವಕರು, 18 ಆಯ್ದ ಯುವ ಕವಿಗಳ ವಿದ್ಯಾರ್ಥಿ ಕವಿಗೋಷ್ಠಿ, ವಿದ್ಯಾರ್ಥಿಗಳೇ ನಿರ್ವಹಿಸುವ ಸಾಂಸ್ಕೃತಿಕ ಕಾರ್ಯಕ್ರಮ ಹೀಗೆ ಸಾಗುತ್ತದೆ ಯುವ ಸಬಲೀಕರಣದ ಹೆಜ್ಜೆ.

ಸರಳ ಕಾರ್ಯಕ್ರಮ
ಎಲ್ಲ ತಯಾರಿಗಳು ಪೂರ್ಣಗೊಂಡಿವೆ. ಆಡಂಬರ ಇಲ್ಲದೆ, ಸರಳವಾಗಿ ಕಾರ್ಯಕ್ರಮ ನಡೆಯಲಿದೆ. ಊಟದಲ್ಲೂ ಪಾಯಸವಷ್ಟೇ ವಿಶೇಷ. ಗಂಜಿ ಊಟವೂ ಇರಲಿದೆ. ಹೆಚ್ಚು ಕಾರ್ಯಕ್ರಮ ಹಮ್ಮಿಕೊ ಳ್ಳುವ ದೃಷ್ಟಿಯಿಂದ 2 ದಿನ ಮೀಸಲಿಟ್ಟಿದ್ದೇವೆ. ಯುವ ಸಬಲೀಕರಣವೇ ಕಾರ್ಯಕ್ರಮದ ಒಟ್ಟು ಆಶಯ.
-ಬಿ. ಐತ್ತಪ್ಪ ನಾಯ್ಕ
ತಾಲೂಕು ಅಧ್ಯಕ್ಷ, ಕಸಾಪ

ಗಣೇಶ್‌ ಎನ್‌. ಕಲ್ಲರ್ಪೆ 

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.