ಡಿಸಿ ಮನ್ನಾ ಭೂಮಿ ಹಂಚಿಕೆ: ಪ್ರತಿಭಟನೆ


Team Udayavani, Sep 20, 2018, 12:12 PM IST

20-sepctember-7.jpg

ಪುತ್ತೂರು: ಆರ್ಯಾಪು ಗ್ರಾಮದ ಡಿಸಿ ಮನ್ನಾ ಭೂಮಿಯನ್ನು ಅದೇ ಗ್ರಾಮದ ಅರ್ಹ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳಿಗೆ ನೀಡಲು ಕಂದಾಯ ಇಲಾಖೆ ನಿರ್ಲಕ್ಷ್ಯವಹಿಸಿದೆ ಎಂದು ಆರೋಪಿಸಿ ದಲಿತ ಸೇವಾ ಸಮಿತಿ ಬುಧವಾರ ಪುತ್ತೂರು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿತು. ಮಿನಿವಿಧಾನಸೌಧಕ್ಕೆ ಮುತ್ತಿಗೆ ಹಾಕಲು, ವಿಫಲ ಯತ್ನ ನಡೆಸಿದ ಘಟನೆಯೂ ನಡೆಯಿತು.

ದಲಿತ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಆರ್ಯಾಪು ಗ್ರಾಮದ ಡಿಸಿ ಮನ್ನಾ ಭೂಮಿಯನ್ನು ಹಂಚಿಕೆ ಮಾಡುವಂತೆ ತಹಶೀಲ್ದಾರ್‌ ಮತ್ತು ಆರ್ಯಾಪು ಗ್ರಾ.ಪಂ.ಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಮನವಿಗೆ ಸ್ಪಂದನೆ ನೀಡಿಲ್ಲ ಎಂದು ಆರೋಪಿಸಿದರು.

ಅಂಬೇಡ್ಕರ್‌ ರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ದಲಿತರಿಗೆ ಅನ್ಯಾಯ ಮಾಡಲಾಗುತ್ತಿದೆ. ಆರ್ಯಾಪು ಗ್ರಾಮದ ಡಿಸಿ ಮನ್ನಾ ನಿವೇಶನದಲ್ಲಿ ಅರ್ಹ ಫಲಾನುಭವಿಗಳು ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಆದರೆ ಗಿರಿಧರ್‌ ನಾಯ್ಕ ಅವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಗುಡಿಸಲನ್ನು ನೆಲಸಮಗೊಳಿಸಿದ್ದಾರೆ. ಆ ನಿವೇಶನದಲ್ಲಿ ಅರ್ಹತೆ ಇಲ್ಲದವರಿಗೆ ಗುಡಿಸಲು ನಿರ್ಮಿಸಿಕೊಟ್ಟಿದ್ದಾರೆ. ಕಂದಾಯ ಇಲಾಖೆಯ ಅ ಧಿಕಾರಿಗಳ ಕುಮ್ಮಕ್ಕು ಇರುವ ಶಂಕೆಯಿದೆ. ಬಲ್ನಾಡು, ಕಡೇ ಶಿವಾಲಯ, ಕೊಡಿಪ್ಪಾಡಿಯಲ್ಲಿ ಅಕ್ರಮ ಗುಡಿಸಲು ನಿರ್ಮಿಸುವ ಮೂಲಕ ದಲಿತ ಸಮುದಾಯಕ್ಕೆ ದ್ರೋಹ ಎಸಗುತ್ತಿದ್ದಾರೆ. ಗಿರಿಧರ ನಾಯ್ಕ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಪುತ್ತೂರು ಮರಾಠಿ ಸಂಘದ ಅಧ್ಯಕ್ಷ ಸುಂದರ ನಾಯ್ಕ ಮಾತನಾಡಿ, ಡಿಸಿ ಮನ್ನಾ ನಿವೇಶನದ ಕುರಿತು ತಹಶೀಲ್ದಾರ್‌ಗೆ ಹಲವಾರು ಬಾರಿ ಮನವಿ ಮಾಡಿದ್ದೇವೆ. ಆದರೆ ಅವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಪರಿಶೀಲನೆ ಮಾಡದೆ ಅವ್ಯವಹಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ತತ್‌ಕ್ಷಣ ಸರ್ವೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪುತ್ತೂರು ದಲಿತ ಸೇವಾ ಸಮಿತಿಯ ಗೌರವಾಧ್ಯಕ್ಷ ಮೋಹನ್‌ ನಾಯ್ಕ, ದಲಿತ ಸೇವಾ ಸಮಿತಿ ಕಡಬ ಶಾಖೆಯ ಸಂಘಟನ ಕಾರ್ಯದರ್ಶಿ ಅಣ್ಣಿ ಯೆಳ್ತಿಮಾರ್‌, ಪ್ರಮುಖರಾದ ಐತ್ತಪ್ಪ ಕೋಡಿಂಬಾಡಿ, ಕೃಷ್ಣಪ್ಪ ನಾಯ್ಕ, ಸಂಕಪ್ಪ ನಿಡ್ಪಳ್ಳಿ, ಕೇಶವ ಪಡೀಲ್‌, ಸಾಂತಪ್ಪ ನರಿಮೊಗರು, ಲೀಲಾವತಿ ಕುಕ್ಕಾಡಿ, ರಾಮಚಂದ್ರ, ಮೋಹಿನಿ ನಾಯ್ಕ, ಸೋಮಪ್ಪ ನಾಯ್ಕ ಉಪಸ್ಥಿತರಿದ್ದರು. ದಲಿತ ಸೇವಾ ಸಮಿತಿ ತಾಲೂಕು ಅಧ್ಯಕ್ಷ  ರಾಜು ಸ್ವಾಗತಿಸಿ, ಉಪಾಧ್ಯಕ್ಷ ಮನೋಹರ್‌ ಕೋಡಿಜಾಲು ವಂದಿಸಿದರು.

ಮುತ್ತಿಗೆಗೆ ಯತ್ನ
ಮನವಿ ನೀಡಲು ತೆರಳಿದಾಗ ಅಧಿಕಾರಿಗಳು ಇಲ್ಲದಿರುವುದರಿಂದ ರೋಸಿಹೋದ ಪ್ರತಿಭಟನಕಾರರು, ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ತಡೆದರು. ಆಕ್ರೋಶಿತರಾದ ಪ್ರತಿಭಟನಕಾರರು ಮೆಟ್ಟಿಲಲ್ಲೇ ಕುಳಿತು ಧಿಕ್ಕಾರ ಕೂಗಿದರು. ಸ್ವಲ್ಪ ಸಮಯದ ಬಳಿಕ ತಹಶೀಲ್ದಾರ್‌ ಅನಂತಶಂಕರ ಆಗಮಿಸಿ, ಮನವಿ ಸ್ವೀಕರಿಸಿದರು.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.