ತಾತ್ಕಾಲಿಕ ಕಟ್ಟ ನಿರ್ಮಿಸಿದರೂ ಮಳೆಗೆ ಕೊಚ್ಚಿ ಹೋಗುವ ಭೀತಿ


Team Udayavani, Sep 21, 2018, 10:00 AM IST

21-sepctember-1.jpg

ಬೆಳ್ತಂಗಡಿ: ಬೆಳ್ತಂಗಡಿಯ ಜನತೆ ಕುಡಿಯುವುದಕ್ಕಾಗಿ ನಗರದ ಹತ್ತಿರದಲ್ಲಿ ಹರಿಯುತ್ತಿರುವ ಸೋಮಾವತಿ ನದಿಯ ನೀರನ್ನೇ ಆಶ್ರಯಿಸಿದ್ದು, ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾದಾಗ ಇಲ್ಲಿನ ಪ.ಪಂ. ತಾತ್ಕಾಲಿಕ ಕಟ್ಟ ನಿರ್ಮಿಸಿ ನಗರಕ್ಕೆ ನೀರು ನೀಡುತ್ತದೆ.

ಆದರೆ ಪ್ರಸ್ತುತ ಏಕಾಏಕಿ ನದಿ ನೀರು ಕಡಿಮೆಯಾಗಿದ್ದು, ಕಟ್ಟ ನಿರ್ಮಿಸಲೂ ಆತಂಕದ ಸ್ಥಿತಿ ಇದೆ. ಮತ್ತೆ ಮಳೆ ಬಂದು ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ ಕಟ್ಟ ನೀರು ಪಾಲಾಗುತ್ತದೆ. ಹೀಗಾಗಿ ನೀರು ಕಡಿಮೆಯಾದರೂ ಮಳೆಗಾಲ ಮುಗಿಯದೆ ಕಟ್ಟ ಹಾಕುವಂತಿಲ್ಲ.!

ನದಿಯಲ್ಲಿ ಜಾಕ್‌ವೆಲ್‌ ನಿರ್ಮಿಸಿ ಪಂ. ಕುಡಿಯುವ ನೀರನ್ನು ಪೂರೈಕೆ ಮಾಡುತ್ತದೆ. ನೀರು ಕಡಿಮೆಯಾಗುತ್ತಾ ಬಂದಂತೆ ಸುಮಾರು 1.05 ಲಕ್ಷ ರೂ. ಖರ್ಚು ಮಾಡಿ ತಾತ್ಕಾಲಿಕ ಕಟ್ಟ ನಿರ್ಮಿಸಲಾಗುತ್ತದೆ. ಸಾಮಾನ್ಯವಾಗಿ ಪ್ರತಿ ವರ್ಷ ಜನವರಿ ತಿಂಗಳಲ್ಲಿ ಕಟ್ಟ ನಿರ್ಮಿಸುವ ಸ್ಥಿತಿ ಬರುತ್ತದೆ. ಆದರೆ ಕಳೆದ ವರ್ಷ ಕೊನೆಯ ಅವಧಿಯಲ್ಲಿ ಹೆಚ್ಚು ಮಳೆಯಾದ ಪರಿಣಾಮ ಫೆಬ್ರವರಿಯಲ್ಲಿ ಕಟ್ಟ ಹಾಕಲಾಗಿತ್ತು.

ಆದರೆ ಸದ್ಯ ನದಿಯಲ್ಲಿ ನೀರಿನ ಮಟ್ಟದಲ್ಲಿ ಇಳಿಕೆಯಾಗಿದ್ದು, ಅವಧಿಗಿಂತ ಮೊದಲೇ ಕಟ್ಟ ಹಾಕಬೇಕಾದ ಸ್ಥಿತಿ ಇದೆ. ಆದರೆ ನೀರು ಕಡಿಮೆಯಾಯಿತೆಂದು ಕಟ್ಟ ಹಾಕಿದರೆ ಮಳೆಗೆ ಅದು ನಾಶವಾಗುವ ಭೀತಿ ಇದೆ. ಮಳೆ ಆರಂಭಗೊಂಡರೆ ಕಳೆದ ವರ್ಷ ದಂತೆ ಕಟ್ಟ ವಿಳಂಬವಾಗಿ ಹಾಕಿದರೂ ತೊಂದರೆಯಾಗದು.

1.05 ಎಂಎಲ್‌ಡಿ ಬೇಡಿಕೆ
ಬೆಳ್ತಂಗಡಿ ನಗರಕ್ಕೆ ಪ್ರತಿನಿತ್ಯ ಸುಮಾರು 1.05 ಎಂಎಲ್‌ಡಿ ನೀರಿನ ಬೇಡಿಕೆ ಇದೆ. 0.6 ಎಂಎಲ್‌ಡಿ ನೀರನ್ನು ನದಿಯಿಂದ ಪಡೆಯಲಾಗುತ್ತಿದ್ದು, 0.45 ಎಂಎಲ್‌ಡಿ ನೀರನ್ನು 9 ಕೊಳವೆಬಾವಿಗಳಿಂದ ಪಡೆಯಲಾಗುತ್ತದೆ. ಪ.ಪಂ. ವ್ಯಾಪ್ತಿ ಯಲ್ಲಿ ಒಟ್ಟು 1,415 ನೀರಿನ ಕನೆಕ್ಷನ್‌ಗಳಿವೆ. ನದಿಯಲ್ಲಿ ನೀರಿದ್ದರೆ ನಗರಕ್ಕೆ ನೀರಿನ ತೊಂದರೆಯಾಗದು. ಅಂದರೆ ಬೆಳ್ತಂಗಡಿಯಲ್ಲಿ ಈವರೆಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿಲ್ಲ ಎಂದು ಅಧಿಕಾರಿ ಹೇಳುತ್ತಾರೆ. ಒಂದು ವೇಳೆ ಕೊಳವೆಬಾವಿಗಳಲ್ಲಿ ನೀರಿ ಬತ್ತಿದರೂ ಅಲ್ಲಲ್ಲಿ ನಿರ್ಮಿಸಲಾಗಿರುವ ಓವರ್‌ ಹೆಡ್‌ ಟ್ಯಾಂಕ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ಕಳೆದ ವರ್ಷ ಸುಮಾರು 13 ಕೋ.ರೂ.ಗಳ ಕುಡಿಯುವ ನೀರಿನ ಯೋಜನೆಯನ್ನು ಅಂದಿನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ಅದರಲ್ಲಿ ಕಲ್ಲಗುಡ್ಡೆಯಲ್ಲಿ 5 ಲಕ್ಷ ಲೀ. ಸಾಮರ್ಥ್ಯದ ಮಾಸ್ಟರ್‌ಟ್ಯಾಂಕ್‌, ಟ್ರೀಟ್‌ ಮೆಂಟ್‌ ಪ್ಲ್ರಾಂಟ್‌, ಜ್ಯಾಕ್‌ವೆಲ್‌ ಹಾಗೂ 2 ಓವರ್‌ಹೆಡ್‌ ಟ್ಯಾಂಕ್‌ಗಳು ನಿರ್ಮಾಣಗೊಂಡಿದ್ದವು.

ಚೆಕ್‌ಡ್ಯಾಮ್‌ ನಿರ್ಮಾಣ
ಪ.ಪಂ. ಪ್ರತಿವರ್ಷ ತಾತ್ಕಾಲಿಕ ಕಟ್ಟ ನಿರ್ಮಿಸುವುದಕ್ಕೆ 1.05 ಲಕ್ಷ ರೂ. ಖರ್ಚು ಮಾಡುತ್ತದೆ. ಹೀಗಾಗಿ ಅದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸುವುದು ಅನಿವಾರ್ಯವಾಗಿದೆ. ನಗರ ಪ್ರದೇಶಕ್ಕೆ ನೀರು ಪೂರೈಕೆ ಮಾಡುವುದಕ್ಕೆ ಚೆಕ್‌ಡ್ಯಾಮ್‌ ನಿರ್ಮಿಸುವುದಕ್ಕಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ 80 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಅದನ್ನು ಸಣ್ಣ ನೀರಾವರಿ ಇಲಾಖೆಯವರೇ ನಿರ್ಮಿಸಲಿದ್ದಾರೆ.

ಆತಂಕ ಸೃಷ್ಟಿ
ಸದ್ಯಕ್ಕೆ ನೀರು ಕಡಿಮೆಯಾದರೂ ಕಟ್ಟ ನಿರ್ಮಿಸುವಂತಿಲ್ಲ. ಮತ್ತೆ ನದಿಯಲ್ಲಿ ನೀರು ಹೆಚ್ಚಾದರೆ ಅದು ಕೊಚ್ಚಿಕೊಂಡು ಹೋಗುತ್ತದೆ. ನಗರಕ್ಕೆ ಈ ತನಕ ನೀರಿನ ಸಮಸ್ಯೆಯಾಗಿಲ್ಲ. ಆದರೆ ಈ ಬಾರಿ ನದಿಯಲ್ಲಿ ನೀರು ಕಡಿಮೆಯಿದ್ದು, ಆತಂಕ ಸೃಷ್ಟಿಸಿದೆ. ನದಿಯಲ್ಲಿ ನೀರಿದ್ದರೆ ಕೊಳವೆಬಾವಿಗಳು ಬತ್ತಿದರೂ ಯಾವುದೇ ಸಮಸ್ಯೆಯಾಗದ ವ್ಯವಸ್ಥೆ ಇದೆ. ಹೀಗಾಗಿ ಜನತೆ ನೀರಿನ ಮಿತ ಬಳಕೆಗೆ ಒತ್ತು ನೀಡಬೇಕು.
ಮಹಾವೀರ ಆರಿಗ
  ಕಿರಿಯ ಎಂಜಿನಿಯರ್‌, ಪ.ಪಂ.

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.