ಸವಣೂರು-ಬೆಳ್ಳಾರೆ: ಹೆಚ್ಚುವರಿ ಬಸ್ಸಿಗೆ ಬೇಡಿಕೆ 


Team Udayavani, Sep 21, 2018, 10:11 AM IST

21-sepctember-2.jpg

ಸವಣೂರು: ಬೆಳ್ಳಾರೆ- ಪೆರುವಾಜೆ-ಸವಣೂರು ಬೆಳ್ಳಾರೆ ರಸ್ತೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ ಬೇಡಿಕೆ ವ್ಯಕ್ತವಾಗಿದೆ. ಬೆಳ್ಳಾರೆಯಿಂದ ಬೆಳಗ್ಗೆ 7.30ಕ್ಕೆ ಹೊಸ ಬಸ್‌ ಸಂಚಾರ ಆರಂಭಿಸಿದರೆ ಪೆರುವಾಜೆ, ಕುಂಡಡ್ಕ, ಮುಕ್ಕೂರು, ಬಂಬಿಲ, ಪರಣೆ ಕಡೆಗಳಿಂದ ಪುತ್ತೂರಿನ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಹಾಗೂ ನೌಕರರಿಗೆ ಅನುಕೂಲವಾಗಲಿದೆ. ಈ ಕುರಿತು ಸಾರ್ವಜನಿಕರಿಂದ ಬೇಡಿಕೆ ವ್ಯಕ್ತವಾಗಿದೆ.

ಸಮಯ ಬದಲಾವಣೆ ಅನುಕೂಲಕರ
ಈಗ ಬೆಳ್ಳಾರೆಯಿಂದ ಬೆಳಗ್ಗೆ 8 ಗಂಟೆಗೆ ಹೊರಡುವ ಸವಣೂರು-ಪುತ್ತೂರು ಬಸ್‌ 7.30ಕ್ಕೆ ಹೊರಡುವಂತೆ ಸಮಯ ಬದಲಾವಣೆ ಮಾಡಿದರೆ ಅನುಕೂಲವಾಗಬಹುದು. ಜತೆಗೆ 8.30ಕ್ಕೆ ಬೆಳ್ಳಾರೆಯಿಂದ ಹೊರಡುವ ಸವಣೂರು – ಶಾಂತಿಮೊಗರು – ಕಡಬ ಬಸ್‌ 8.15ಕ್ಕೆ ಹೊರಡುವಂತೆ ಮಾಡಿದರೆ ಸೂಕ್ತ. ಹೆಚ್ಚುವರು ಬಸ್‌ ಬೇಡಿಕೆಯನ್ನು ಸರಿದೂಗಿಸಬಹುದು.

ಸಂಜೆ ಹೆಚ್ಚುವರಿ ಬಸ್‌ನ ಬೇಡಿಕೆ
ಸವಣೂರಿನಿಂದ ಬೆಳ್ಳಾರೆಗೆ ಹೋಗುವ ಸವಣೂರು, ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಂಜೆ 4.30ರಿಂದ 5 ಗಂಟೆಯ ಅವಧಿಯಲ್ಲಿ ಹೆಚ್ಚುವರಿ ಬಸ್‌ನ ಬೇಡಿಕೆ ವ್ಯಕ್ತವಾಗಿದೆ. ಈಗ ಪುತ್ತೂರಿನಿಂದ 3.45ಕ್ಕೆ ಹೊರಟು ಸವಣೂರಿಗೆ 4.25ಕ್ಕೆ ತಲುಪುತ್ತಿದ್ದು, ಇದರಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿರುತ್ತಾರೆ. ಸವಣೂರಿನಿಂದ ಏರುವ ಮಕ್ಕಳು ಬಸ್‌ನ ಬಾಗಿಲಲ್ಲೇ ನೇತಾಡಿಕೊಂಡು ಪ್ರಯಾಣಿಸುವುದು ಅನಿವಾರ್ಯವಾಗಿದೆ.

ಪುತ್ತೂರಿನಿಂದ ಸಂಜೆ 5 ಗಂಟೆಯಿಂದ ಹೊರಡುವ ಬಸ್‌ 5.30ಕ್ಕೆ ತಲುಪುತ್ತಿದೆ. ಈ ಎರಡೂ ಬಸ್ಸುಗಳ ಮಧ್ಯೆ ಇನ್ನೊಂದು ಹೆಚ್ಚುವರಿ ಬಸ್‌ ಸವಣೂರು – ಬೆಳ್ಳಾರೆ ನಡುವೆ ಸಂಚರಿಸುವಂತಾದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಹಿಂದಿನ ಬಸ್‌ ಪುನರಾರಂಭಿಸಿ
ಈ ಹಿಂದೆ ಈ ಮಾರ್ಗವಾಗಿ ಸವಣೂರಿಗೆ ಅಪರಾಹ್ನ 3.45ಕ್ಕೆ ತಲುಪುವಂತೆ ಬಸ್‌ ಸಂಚಾರವಿತ್ತು. ಈಗ ಆ ಬಸ್‌ ಸಂಚಾರ ನಿಲ್ಲಿಸಲಾಗಿದೆ. ಪುನಃ ಸಂಚಾರ ಆರಂಭಿಸಿದರೆ ಈ ಸಮಸ್ಯೆಯನ್ನು ಪರಿಹರಿಸಬಹುದು. ಇಲ್ಲದಿದ್ದಲ್ಲಿ ಬೇರೆ ಬಸ್‌ ನೀಡಬೇಕು. ಈ ಕುರಿತು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಗಮನಹರಿಸಬೇಕಿದೆ.
 - ಸತೀಶ್‌ ಬಲ್ಯಾಯ, ಸದಸ್ಯರು, ಗ್ರಾ.ಪಂ. ಸವಣೂರು

ಬೆಳಗ್ಗೆ ಹೆಚ್ಚುವರಿ ಬಸ್‌ ಬೇಕು
ಬೆಳಗ್ಗೆ ಬೆಳ್ಳಾರೆಯಿಂದ 7.30ಕ್ಕೆ ಹೊರಡುವಂತೆ ಬಸ್‌ ಸಂಚಾರ ಆರಂಭಿಸಿದರೆ ಮುಕ್ಕೂರು, ಬಂಬಿಲ ಭಾಗದಿಂದ ಪುತ್ತೂರಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈಗ ಹೆತ್ತವರು ನಮ್ಮನ್ನು ಸವಣೂರಿಗೆ ಬಿಟ್ಟು ಬೇರೆ ಬಸ್‌ಗೆ ಹೋಗುವಂತಾಗಿದೆ. ಹೆಚ್ಚುವರಿ ಬಸ್‌ಗಳು ಸಂಚರಿಸುವಂತಾಗಲು ಜನಪ್ರತಿನಿಧಿಗಳು, ಕೆಎಸ್‌ಆರ್‌ ಟಿಸಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.
– ಬೃಂದಾ ಪಿ.,
ಪ್ರಿಯಾ ಎಸ್‌.ಎಂ.,
ವಿದ್ಯಾರ್ಥಿಗಳು, ಪುತ್ತೂರು

 ಪ್ರವೀಣ್‌ ಚೆನ್ನಾವರ 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.