ಭರದಿಂದ ಸಾಗುತ್ತಿದೆ ಇಂದಿರಾ ಕ್ಯಾಂಟೀನ್‌ ಕಾಮಗಾರಿ


Team Udayavani, Sep 23, 2018, 10:06 AM IST

23-sepctember-2.jpg

ಸುಳ್ಯ : ರಾಜ್ಯ ಸರಕಾರದ ಮಹತ್ವ ಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಪ್ರಕ್ರಿಯೆಗೆ ಇಲ್ಲಿ ಮರು ಜೀವ ದೊರೆತಿದೆ. ಕಾಮಗಾರಿ ಭರದಿಂದ ಸಾಗಿದ್ದು, ಕೆಲವೇ ದಿನಗಳಲ್ಲಿ ಕಡಿಮೆ ದರದಲ್ಲಿ ಊಟ-ಉಪಾಹಾರದ ಭಾಗ್ಯ ಜನರಿಗೆ ದೊರಕಲಿದೆ.

ನಗರದ ಮಿನಿ ವಿಧಾನಸೌಧದ ಹಿಂಭಾಗದಲ್ಲಿ 5 ಸೆಂಟ್ಸ್‌ ಸ್ಥಳದಲ್ಲಿ ಎಪ್ರಿಲ್‌ ತಿಂಗಳಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ನೆಲ ಸಮತಟ್ಟು ಆಗಿ, ಅಡಿಪಾಯ ಕಾಮಗಾರಿ ಪೂರ್ಣಗೊಂಡ ವೇಳೆ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಆಯಿತು. ಅದಾದ ಬಳಿಕ ನಾಲ್ಕು ತಿಂಗಳ ಕಾಲ ಕಾಮಗಾರಿ ಸ್ಥಗಿತಗೊಂಡಿತ್ತು. ಹೊಸ ಸರಕಾರ ಅಧಿಕಾರಕ್ಕೆ ಬಂದು ಈ ಹಿಂದಿನ ಯೋಜನೆ ಮುಂದುವರಿಸುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾವಿಸಿತ್ತು. ನಾಲ್ಕು ತಿಂಗಳ ಬಳಿಕ ಕಾಮಗಾರಿ ಮರು ಆರಂಭಗೊಂಡಿದೆ.

ರೆಡಿಮೇಡ್‌ ಕಟ್ಟಡ
ತಳಪಾಯ ಕಾಮಗಾರಿಯೊಂದನ್ನು ಹೊರತುಪಡಿಸಿ ಗೋಡೆ, ಛಾವಣಿ ಎಲ್ಲವೂ ರೆಡಿಮೇಡ್‌ ಮಾದರಿಯದ್ದು. ಹೊರ ಭಾಗದಿಂದ ಪರಿಕರ ತರಲಾಗಿದೆ. ಕ್ರೇನ್‌ ಸಹಾಯದಿಂದ ರೆಡಿಮೇಡ್‌ ಗೋಡೆಗಳನ್ನು ಜೋಡಿಸಲಾಗುತ್ತಿದೆ. ಗೋಡೆ ನಿರ್ಮಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಸಿಮೆಂಟ್‌, ಕಬ್ಬಿಣ ಮಿಶ್ರಿತ ಪಿಲ್ಲರ್‌, ಗೋಡೆಗಳಿಗೆ ಆಧಾರ ಕಂಬ ಕಲ್ಪಿಸಲಾಗಿದೆ. ಪ್ರವೇಶ ದ್ವಾರದ ಗೋಡೆ ಕಲ್ಲಿನಲ್ಲಿ ಇಂದಿರಾ ಗಾಂಧಿ ಅವರ ಬೃಹತ್‌ ಗಾತ್ರದ ಭಾವಚಿತ್ರವನ್ನು ಅಚ್ಚು ರೂಪದಲ್ಲಿ ಚಿತ್ರಿಸಲಾಗಿದೆ.

ಇಂದಿರಾ ಕ್ಯಾಂಟಿನ್‌ನಲ್ಲಿ 10 ರೂ.ಗೆ ಊಟ, 5 ರೂ.ಗೆ ತಿಂಡಿ ನೀಡಲಾಗುತ್ತದೆ. ಸುತ್ತೋಲೆಯಲ್ಲಿ ಇರುವ ಮೆನು ಪ್ರಕಾರ, ಬೆಳಗ್ಗೆ ಉಪಾಹಾರ, ಇಡ್ಲಿ ಸಾಂಬಾರ್‌, ರೈಸ್‌ಬಾತ್‌, ಅವಲಕ್ಕಿ, ಉಪ್ಪಿಟ್ಟು, ಖಾರಾ ಪೊಂಗಲ್‌ (ವಾರದಲ್ಲಿ ಒಂದರಂತೆ) ಮಧ್ಯಾಹ್ನ ಮತ್ತು ರಾತ್ರಿ ಅನ್ನ- ಸಾರು, ಉಪ್ಪಿನಕಾಯಿ, ಹಪ್ಪಳ, ರವಿವಾರ ಬಿಸಿಬೇಳೆ ಬಾತ್‌, ತರಕಾರಿ, ಅನ್ನ, ಪುಳಿ ಯೋಗರೆ (ವಾರದಲ್ಲಿ ಒಂದು ದಿನ). ಇಲ್ಲಿಗೆ ಕೇಂದ್ರೀಕೃತ ಅಡುಗೆ ಮನೆ ಮೂಲಕ ಆಹಾರ ಪೂರೈಸಬೇಕಿದೆ.

ನಿರ್ವಹಣೆ ಯಾರಿಂದ?
ಸಕಲೇಶಪುರ ಮೂಲದವರು ಗುತ್ತಿಗೆ ಪಡೆದಿರುವ ಮಾಹಿತಿ ಇದೆ. ಕ್ಯಾಂಟೀನ್‌ ಕಾಮಗಾರಿ ಬಗ್ಗೆ ತಾಲೂಕು ಕಚೇರಿ, ನ.ಪಂ.ಗೆ ಯಾವುದೇ ಮಾಹಿತಿ ಇಲ್ಲ. ಇಲ್ಲಿ ಕಂದಾಯ ಇಲಾಖೆ ಸ್ಥಳ ಗುರುತಿಸಿರುವುದು ಹಾಗೂ ನ.ಪಂ. ಮೂಲ ಸೌಕರ್ಯ ಒದಗಿಸಿರುವುದು ಮಾತ್ರ. ಆಹಾರ ತಯಾರಿ, ಪೂರೈಕೆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡುವ ಅಧಿಕಾರಿಗಳು ಜಿಲ್ಲಾಮಟ್ಟದಲ್ಲಿ ಇಲ್ಲ.

ಸ್ಥಳೀಯಾಡಳಿತದ ಪಾತ್ರ 
ಕ್ಯಾಂಟೀನ್‌ ನಿರ್ಮಿಸಲು ಸ್ಥಳ, ಕುಡಿ ಯುವ ನೀರು, ವೇಸ್ಟೇಜ್‌ ಸಂಗ್ರಹಕ್ಕೆ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ, ನಿರ್ವಹಣೆ ಹೊಣೆ ಸ್ಥಳೀಯಾಡಳಿತದ್ದು. ಕ್ಯಾಂಟೀನ್‌ ಸ್ಥಾಪನೆಗೆ ಸುಳ್ಯ ನ.ಪಂ.ವ್ಯಾಪ್ತಿಯಲ್ಲಿ ಕಂದಾಯ ಇಲಾಖೆ ಸ್ಥಳ ಒದಗಿಸಿದೆ. ಇನ್ನುಳಿದ ಕಟ್ಟಡ ನಿರ್ಮಾಣ, ಆಹಾರ ಪೂರೈಕೆ ವಿತರಣೆಗೆ ರಾಜ್ಯ ಮಟ್ಟದಲ್ಲೇ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ಪಡೆದ ಸಂಸ್ಥೆ ಅದರ ಜವಾಬ್ದಾರಿ ವಹಿಸಲಿದೆ. ಪ್ರತಿ ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ 32 ಲಕ್ಷ ರೂ. ವೆಚ್ಚ ತಗಲುತ್ತದೆ ಅನ್ನುವುದು ಸರಕಾರದ ಅಂದಾಜು.

ಸ್ಥಳ ಒದಗಿಸಿದ್ದಷ್ಟೆ
ಕಂದಾಯ ಇಲಾಖೆ 5 ಸೆಂಟ್ಸ್‌ ಸ್ಥಳ ಒದಗಿಸಿದ್ದಷ್ಟೆ. ಕ್ಯಾಂಟೀನ್‌ ನಿರ್ಮಾಣ, ನಿರ್ವಹಣೆ ರಾಜ್ಯಮಟ್ಟದ ಪ್ರಕ್ರಿಯೆ. ನಮಗೆ ಅದರ ಬಗ್ಗೆ ಯಾವುದೇ ಸೂಚನೆಗಳು ಬಂದಿಲ್ಲ.
– ಕುಂಞಿಮ್ಮ
ತಹಶೀಲ್ದಾರ್‌, ಸುಳ್ಯ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.