“ಡ್ಯಾಡ್‌’ ಸ್ಕಾಲರ್‌ಶಿಪ್‌ ಬೆಳ್ತಂಗಡಿ ಕಾನರ್ಪದ ವಿದ್ಯಾಶ್ರೀ ಆಯ್ಕೆ


Team Udayavani, Sep 23, 2018, 10:41 AM IST

vidyashri.jpg

ಬೆಳ್ತಂಗಡಿ: ಜರ್ಮನಿ ಸರಕಾರ ಪ್ರಾಯೋಜಿತ “ಡ್ಯಾಡ್‌’ ಸಂಸ್ಥೆಯು ಉನ್ನತ ವ್ಯಾಸಂಗಕ್ಕೆ ನೀಡುವ ವಿದ್ಯಾರ್ಥಿ ವೇತನಕ್ಕೆ ಬೆಳ್ತಂಗಡಿ ತಾಲೂಕಿನ ಕಾನರ್ಪ ನಿವಾಸಿ ವಿದ್ಯಾಶ್ರೀ ಎಸ್‌. ಆಯ್ಕೆಯಾಗಿದ್ದಾರೆ. ಅದರಂತೆ ವಿದ್ಯಾಶ್ರೀ, ಜರ್ಮನಿಯ ಬೊನ್‌ ವಿಶ್ವವಿದ್ಯಾನಿಲಯದಲ್ಲಿ ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆಯುವರು. ಮೂಲತಃ ಬೆಂಗಳೂರಿನವರಾದ ಅವರು ಕಾನರ್ಪದ ಸತ್ಯನಾರಾಯಣ ಹೊಳ್ಳ ಹಾಗೂ ಶಶಿಕಲಾ ಕೆ. ಅವರ ಪುತ್ರ ವಿಜಯ್‌ ಹೊಳ್ಳ ಅವರನ್ನು ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಬೆಂಗಳೂರಿನ ಆರ್‌ವಿ ಕಾಲೇಜಿನಲ್ಲಿ ಬಯೋಟೆಕ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದು, ಕಂಪೆನಿಯೊಂದರಲ್ಲಿ ಕಿರಿಯ ಕೃಷಿ ವಿಜ್ಞಾನಿಯಾಗಿದ್ದರು.

ಆರ್ಟ್ಸ್ ಎಂಎಸ್ಸಿ ಕೋರ್ಸ್‌
ವಿದ್ಯಾಶ್ರೀ ಅವರು “ಅಗ್ರಿಕಲ್ಚರಲ್‌ ಸೈನ್ಸಸ್‌ ಆ್ಯಂಡ್‌ ರಿಸೋರ್ಸ್‌ ಮ್ಯಾನೇಜ್‌ಮೆಂಟ್‌ ಇನ್‌ ದಿ ಟ್ರೊಪಿಕ್ಸ್‌ ಆ್ಯಂಡ್‌ ಸಬ್‌ಟ್ರೊಪಿಕ್ಸ್‌ (ಆರ್ಟ್ಸ್)’ ಎಂಬ ವಿಷಯದ ಕುರಿತು ವ್ಯಾಸಂಗ ಮಾಡುವರು. ಈ ಬಾರಿ ಈ ಕೋರ್ಸ್‌ಗೆ ಆಯ್ಕೆಯಾದ ಏಕೈಕ ಭಾರತೀಯಳು ಎನ್ನುತ್ತದೆ ಅವರ ಕುಟುಂಬ. ಅಕ್ಟೋಬರ್‌ನಿಂದ ಕೋರ್ಸ್‌ ಆರಂಭ ವಾಗಲಿದ್ದು, ಅವರು ಜರ್ಮನಿಗೆ ತೆರಳಿದ್ದಾರೆ. ಕೋರ್ಸ್‌ ಶುಲ್ಕ, ವಸತಿ, ಪ್ರಯಾಣ ಭತ್ಯೆಯನ್ನು ಸಂಸ್ಥೆಯೇ ಭರಿಸಲಿದೆ. ಪ್ರವೇಶ ಪರೀಕ್ಷೆ, ಸಂಶೋಧನಾ ಪ್ರಸ್ತಾವನೆ ಹಾಗೂ ವೃತ್ತಿಯ ಅನುಭವ ಆಧರಿಸಿ ಆಯ್ಕೆ ನಡೆಯುತ್ತದೆ.

ಸ್ಕಾಲರ್‌ಶಿಪ್‌ ವಿವರ
ಭಾಷಾ ತರಬೇತಿಯ ಅವಧಿಯ ಮೊತ್ತವಾಗಿ 750 ಯೂರೋ, ಕೋರ್ಸ್‌ ಮುಗಿಯುವವರೆಗೆ ತಿಂಗಳಿಗೆ 850 ಯೂರೋ, ಎರಡು ವರ್ಷಗಳಿಗೆ ತಲಾ 460 ಯೂರೊ ಅಧ್ಯಯನ ಭತ್ಯೆ, ಜತೆಗೆ 825 ಯೂರೊ ಪ್ರಯಾಣ ಭತ್ಯೆಯನ್ನು ಸಂಸ್ಥೆ ನೀಡುತ್ತದೆ. ಕ್ಷೇತ್ರ ಅಧ್ಯಯನದ ಭಾಗವಾಗಿ ವಿವಿಧ ದೇಶಗಳಿಗೆ ತೆರಳುವ ಅವಕಾಶವೂ ಇರಲಿದೆ. ಈ ಹಿನ್ನೆಲೆಯಲ್ಲಿ ಬೆಲ್ಜಿಯಂಗೆ ಭೇಟಿ ನೀಡಿದ್ದು, ಮುಂದಿನ ತಿಂಗಳು ಇಟೆಲಿಗೆ ತೆರಳುವರು. ಭೂಮಿ ನಿರ್ವಹಣೆ, ಆಯಾ ಭೌಗೋಳಿಕ ವಾತಾವರಣಕ್ಕೆ ಏನು ಬೆಳೆಯಬಹುದು, ಯಾವ ರೀತಿ ರೋಗ ನಿಯಂತ್ರಣ ಮಾಡಬಹುದೆಂದು ಅಧ್ಯಯನ ನಡೆಸುವರು.

ಅಪೂರ್ವ ಅವಕಾಶ
ಇದು ಅಪೂರ್ವ ಅವಕಾಶ. ಇಲ್ಲಿ ಕೃಷಿ ತಂತ್ರಜ್ಞಾನದ ಕುರಿತು ಕಲಿಯಲು ಸಾಕಷ್ಟಿದೆ. ಸಾವಯವ ಕೀಟನಾಶಕ, ನೀರು ಹಾಗೂ ಭೂಮಿಯ ನಿರ್ವಹಣೆ ಇತ್ಯಾದಿಯಿಂದ ನಮಗೂ ಅನುಕೂಲವಾಗಲಿದೆ. ಹೀಗಾಗಿ ನಮ್ಮ ಕೃಷಿ ವಿಜ್ಞಾನಿಗಳೂ ಇಲ್ಲಿನ ಕೃಷಿಯನ್ನು ಅಧ್ಯಯನ ಮಾಡಬೇಕು.

*ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.