ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗ ದುರಸ್ತಿ ಬಹುತೇಕ ಪೂರ್ಣ


Team Udayavani, Sep 23, 2018, 10:59 AM IST

train.jpg

ಸುಬ್ರಹ್ಮಣ್ಯ: ಅತಿವೃಷ್ಟಿಯಿಂದ ಭೂಕುಸಿತ ಸಂಭವಿಸಿ ರೈಲು ಓಡಾಟ ಸ್ಥಗಿತಗೊಂಡ ಸುಬ್ರಹ್ಮಣ್ಯ- ಸಕಲೇಶಪುರ ರೈಲು ಮಾರ್ಗದಲ್ಲಿ ಮಣ್ಣು ತೆರವು ಕಾರ್ಯ ಅಂತಿಮ ಹಂತಕ್ಕೆ ತಲುಪಿದೆ. ಶೇ. 70ರಷ್ಟು ತೆರವು ಕಾರ್ಯ ಪೂರ್ಣಗೊಂಡಿದ್ದು ವಾರಾಂತ್ಯಕ್ಕೆ ರೈಲು ಯಾನ ಆರಂಭಗೊಳ್ಳಲಿದೆ.

ಸಿರಿಬಾಗಿಲು ಹೊರತುಪಡಿಸಿ ಉಳಿದ ಎಲ್ಲ ಕಡೆ ತೆರವು ಕಾರ್ಯ ಪೂರ್ತಿಯಾಗಿ ರೈಲು ಓಡಾಟಕ್ಕೆ ಮಾರ್ಗ ಸಿದ್ಧವಾಗಿದೆ. ಸಿರಿಬಾಗಿಲಿನ ಕೊಡವರಹಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿಯುತ್ತಿರುವುದು ಕಾಮಗಾರಿಗೆ ಅಡ್ಡಿಯಾಗಿದೆ.
ಸಿರಿಬಾಗಿಲು ಮಾರ್ಗ 86ರ ಬಳಿ ಭಾರೀ ಗಾತ್ರದ ಗುಡ್ಡ ಜರಿದು ರೈಲು ಟನೆಲ್‌ ಮೇಲೆ ಬಿದ್ದಿತ್ತು. ಇದರಿಂದ 170 ಮೀ. ಉದ್ದದ ಟನೆಲ್‌ ಸಂಪೂರ್ಣ ಮಣ್ಣಿನಡಿ ಮುಚ್ಚಿತ್ತು. ಟೆನಲ್‌ ಮೇಲೆ 25 ಮೀ. ಎತ್ತರಕ್ಕೆ ಮಣ್ಣು ಆವರಿಸಿಕೊಂಡಿತ್ತು. ಇದು ಗುಡ್ಡ ಕುಸಿತದ ತೀವ್ರತೆಗೆ ಸಾಕ್ಷಿಯಾಗಿದೆ.

ನಿರಂತರ ಕಾಮಗಾರಿ
ಸುಮಾರು 13 ಹಿಟಾಚಿಗಳು ಕಳೆದ ಒಂದು ತಿಂಗಳಿಂದ ನಿರಂತರ ಹಗಲು ರಾತ್ರಿ ಪಾಳಿಯಲ್ಲಿ ಟೆನಲ್‌ ಮೇಲೆ ಹಾಗೂ ಹಳೀ ಮೇಲೆ ಬಿದ್ದ ಮಣ್ಣು ತೆರವು ಕಾರ್ಯದಲ್ಲಿ ತೊಡಗಿವೆ. ಒಂದೆಡೆ ಟೆನಲ್‌ ಮೇಲೆ ಬಿದ್ದ ಮಣ್ಣು ತೆರವು ಕಾರ್ಯ ನಡೆಸುತ್ತಿದ್ದಂತೆ ಇನ್ನೊಂದು ಕಡೆ ಗುಡ್ಡ ಜರಿಯುತ್ತಿದೆ. ಸ್ಥಳವು ಇಕ್ಕಟ್ಟಾಗಿದೆ. ಒಂದು ಕಡೆ ಗುಡ್ಡ ಇನ್ನೊಂದು ಕಡೆ ಪ್ರಪಾತವಿದೆ.  ಜಾಗದ ಕೊರತೆ ಇದೆ. ಇಲ್ಲಿ ಟಿಪ್ಪರ್‌ ಬಳಸಿ ಮಣ್ಣು ಸ್ಥಳಾಂತರಿಸಲೂ ಸಾಧ್ಯವಿಲ್ಲ. ಸ್ಥಳದಲ್ಲಿ ರೈಲ್ವೇ ಅಧಿಕಾರಿಗಳು, ಸಿಬಂದಿ ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಸಿರಿಬಾಗಿಲು ಬಳಿ ಮಣ್ಣು ತೆರವು ಕಾರ್ಯ ಪೂರ್ಣವಾದ ಬಳಿಕ ಕೆಟ್ಟು ಹೋದ ಸ್ಲಿàಪರ್‌ಗಳ ಮರುಜೋಡಣೆ ಕ್ಲಿಪ್‌ ಬಿಗಿಗೊಳಿಸುವುದು, ಮಾರ್ಗದ ಇತರ ದೋಷಗಳ ಪರಿಶೀಲನೆ ನಡೆದು ಬಳಿಕ ರೈಲ್ವೇ ಇಲಾಖೆಯ ತಾಂತ್ರಿಕ ಅಧಿಕಾರಿಗಳು ಮಾರ್ಗದ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನೆ ನಡೆಸಿ ರೈಲು ಓಡಾಟಕ್ಕೆ ಅನುಮತಿ ನೀಡಲಿದ್ದಾರೆ. ಸಕಲೇಶಪುರ ಭಾಗದಲ್ಲಿ ಸುರಿದ ಭಾರೀ ಮಳೆಯಿಂದ ಸುಬ್ರಹ್ಮಣ್ಯ- ಸಕಲೇಶಪುರ ರೈಲು ಮಾರ್ಗದ ನಡುವೆ 65 ಕಡೆ ಭೂಕುಸಿತ ಸಂಭವಿಸಿತ್ತು. ಬೃಹತ್‌ ಗಾತ್ರದ ಬಂಡೆಕಲ್ಲು, ಮಣ್ಣು ಗುಡ್ಡ ಮಾರ್ಗದ ಹಳಿ ಮೇಲೆ ಅಲ್ಲಲ್ಲಿ ಬಿದ್ದು ಭಾರೀ ಅನಾಹುತ ಸೃಷ್ಟಿಯಾಗಿತ್ತು.

ಕೊಡವರಹಳ್ಳಿ ಒಂದು ಕಡೆ ಮಾತ್ರ ಕಾಮಗಾರಿ ನಡೆಯುತ್ತಿದೆ. ಇನ್ನು ಹತ್ತು ದಿನಗಳಲ್ಲಿ ಕಾಮಗಾರಿ ಪೂರ್ಣವಾಗಬಹುದು ಬಳಿಕ ಸಂಚಾರಕ್ಕೆ ಮಾರ್ಗ ಒದಗಿಸುವ ಕುರಿತು ನಿರ್ಧರಿಸಲಾಗುವುದು.
ರವೀಂದ್ರ ದೀರೆಧಾರ್‌, ಸೀನಿಯರ್‌ ಡಿವಿಜನಲ್‌ ಎಂಜಿನಿಯರ್‌ ಮೈಸೂರು ರೈಲ್ವೇ ವಿಭಾಗ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.