ಖಾಯಂ ವೈದ್ಯರಿಲ್ಲ, ಆ್ಯಂಬುಲೆನ್ಸ್ ಕೂಡ ನಾಪತ್ತೆ!


Team Udayavani, Sep 23, 2018, 11:32 AM IST

23-sepctember-6.jpg

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರಿಲ್ಲದೆ ಬೆಳ್ಳಾರೆ ಹಾಗೂ ನೆರೆಯ ಗ್ರಾಮದ ರೋಗಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆರು ತಿಂಗಳಿಂದ ಇಲ್ಲಿ ಖಾಯಂ ವೈದ್ಯರಿಲ್ಲ. ಮಹಿಳಾ ವೈದ್ಯರೊಬ್ಬರು ಕೆಲವು ವರ್ಷಗಳಿಂದ ಇಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರೂ ಈಗ ಉನ್ನತ ವಿದ್ಯಾಭ್ಯಾಸಕ್ಕೆ ತೆರಳಿದ್ದರಿಂದ ಇಲ್ಲಿ ವೈದ್ಯರೇ ಇಲ್ಲದಂತಾಗಿದೆ.

ನಾಲ್ಕೈದು ವರ್ಷಗಳ ಹಿಂದ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ದಿನದ 24 ಗಂಟೆಯೂ ಹೆರಿಗೆ ಮಾಡಿಸುವ ವ್ಯವಸ್ಥೆ ಹೊಂದಿತ್ತು. ಈಗ ಇಲ್ಲಿ ಖಾಯಂ ವೈದ್ಯರಿಲ್ಲದ ಕಾರಣ ಸಂಚಾರಿ ಗಿರಿಜನ ಘಟಕದ ಡಾ| ನಂದಕುಮಾರ್‌ ಹಾಗೂ ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ಪಲ್ಲವಿ ಅವರು ವಾರದಲ್ಲಿ ತಲಾ ಮೂರು ದಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಇಲಾಖೆಯ ಸಭೆ ಇತ್ಯಾದಿಗಳಿದ್ದರೆ ಬೆಳ್ಳಾರೆಯಲ್ಲಿ ವೈದ್ಯಕೀಯ ಸೇವೆ ಲಭ್ಯವಿರುವುದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.

ಖಾಯಂ ವೈದ್ಯರಿದ್ದ ಸಂದರ್ಭದಲ್ಲಿ ನಿತ್ಯ ಸರಾಸರಿ 250 ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಈ ಸಂಖ್ಯೆ ತುಂಬಾ ಕಡಿಮೆಯಾಗಿದ್ದು, ಸರಾಸರಿ 50 ಜನರಷ್ಟೇ ಭೇಟಿ ಕೊಡುತ್ತಿದ್ದಾರೆ. ಉಳಿದವರೆಲ್ಲ ಅನಿವಾರ್ಯವಾಗಿ ಸುಳ್ಯ ಸಮುದಾಯ ಆರೋಗ್ಯ ಕೇಂದ್ರ ಅಥವಾ ಖಾಸಗಿ ಕ್ಲಿನಿಕ್‌ಗಳ ಕಡೆಗೆ ಮುಖ ಮಾಡಿದ್ದಾರೆ.

ಹುದ್ದೆಗಳು ಖಾಲಿ
ವೈದ್ಯಾಧಿಕಾರಿ, ಸ್ಟಾಫ್ ನರ್ಸ್‌, ಲ್ಯಾಬ್‌ ಟೆಕ್ನೀಶಿಯನ್‌, ಹಿರಿಯ ಆರೋಗ್ಯ ಸಹಾಯಕಿಯ ತಲಾ ಒಂದು ಹುದ್ದೆ, ಎ.ಎನ್‌. ಎಂ., ಗ್ರೂಪ್‌ ಡಿ ತಲಾ ಎರಡು ಹುದ್ದೆಗಳು ಖಾಲಿ ಇವೆ. ಲ್ಯಾಬ್‌ ಟೆಕ್ನೀಶಿಯನ್‌, ಇಬ್ಬರು ಗ್ರೂಪ್‌ ಡಿ ನೌಕರರನ್ನು ತಾತ್ಕಾಲಿಕ ನೆಲೆಯಲ್ಲಿ ಭರ್ತಿ ಮಾಡಿಕೊಳ್ಳಲಾಗಿದೆ. ಕೆಲವು ತಿಂಗಳಿಂದ ಬೆಳ್ಳಾರೆ ಪೇಟೆಯಲ್ಲಿ 108 ಆ್ಯಂಬುಲೆನ್ಸ್‌ ಇಲ್ಲ. ಸ್ಥಳೀಯ ಗ್ರಾ.ಪಂ. ಅಥವಾ ಆರೋಗ್ಯ ಇಲಾಖೆಗೆ ಈ ಕುರಿತು ಮಾಹಿತಿ ನೀಡಿಲ್ಲ. ಇದರಿಂದ ಬೇಸತ್ತಿರುವ ಜನರು ಇಲಾಖೆ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ವಾಣಿಜ್ಯ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಬೆಳ್ಳಾರೆ, ನೆರೆಯ ಹಲವು ಗ್ರಾಮಗಳಿಗೆ ವಿದ್ಯಾ ಕೇಂದ್ರವೂ ಆಗಿದೆ. ಪೇಟೆಗೆ ಬರುವ ಜನರು ಹಾಗೂ ವಾಹನಗಳ ಸಂಖ್ಯೆ ಹೆಚ್ಚಿದೆ. ಗ್ರಾಮದ ಜನಸಂಖ್ಯೆಯೂ ವೃದ್ಧಿಸುತ್ತಿದೆ. ಈ ಕಾರಣದಿಂದ ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಓರ್ವ ಖಾಯಂ ವೈದ್ಯರನ್ನು ತತ್‌ಕ್ಷಣ ನೇಮಕ ಮಾಡಬೇಕು. 108 ಆ್ಯಂಬುಲೆನ್ಸ್‌ ಸೇವೆ ಮರು ಒದಗಿಸಿ ಕೊಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಖಾಯಂ ವೈದ್ಯರು ಬೇಕು
ನಿಯೋಜನೆ ನೆಲೆಯಲ್ಲಿ ಇಬ್ಬರು ವೈದ್ಯರು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುತ್ತಿದ್ದು, ಉತ್ತಮ ಸೇವೆ ನೀಡುತ್ತಿದ್ದಾರೆ. ಆದರೆ ಇಲ್ಲಿಗೆ ಒಬ್ಬರು ಖಾಯಂ ವೈದ್ಯರ ಅಗತ್ಯ ಇದೆ. ನಾನು ಆರೋಗ್ಯ ಇಲಾಖೆಗೆ ಅನೇಕ ಬಾರಿ ಪತ್ರ ಬರೆದಿದ್ದೇನೆ. ಇನ್ನು 15 ದಿವಸದಲ್ಲಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರು ಬರುತ್ತಾರೆ ಎಂದು ಡಿಎಚ್‌ಒ ತಿಳಿಸಿದ್ದಾರೆ.
– ಶಕುಂತಳಾ ನಾಗರಾಜ್‌
 ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ

ಶೀಘ್ರ ಒದಗಿಸಿ
ಬೆಳ್ಳಾರೆ ಪ್ರಾ. ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರಿಲ್ಲದೆ ಜನರಿಗೆ ತೊಂದರೆಯಾಗಿದೆ. ಆರೋಗ್ಯ ಹದಗೆಟ್ಟರೆ ಸುಳ್ಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋಗಬೇಕು. ಬೆಳ್ಳಾರೆಯಲ್ಲಿ ಈಗ 108 ಆ್ಯಂಬುಲೆನ್ಸ್‌ ಸೇವೆಯೂ ಇಲ್ಲ. ನಮಗೆ ವೈದ್ಯರು ಹಾಗೂ ಆ್ಯಂಬುಲೆನ್ಸ್‌ ಸೇವೆ ಶೀಘ್ರ ಲಭಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ.
– ಪ್ರೇಮಚಂದ್ರ ಬೆಳ್ಳಾರೆ, ಸ್ಥಳೀಯರು

ನಿರೀಕ್ಷೆ ಇದೆ
108 ಆ್ಯಂಬುಲೆನ್ಸ್‌ ಬಗ್ಗೆ ನಮಗೆ ಮಾಹಿತಿ ಇಲ್ಲ. ಸದ್ಯದಲ್ಲಿ ಬೆಳ್ಳಾರೆಗೆ ವೈದ್ಯರ ನೇಮಕ ಆಗಬಹುದು ಎನ್ನುವ ನಿರೀಕ್ಷೆ ಇದೆ.
– ಡಾ| ಸುಬ್ರಹ್ಮಣ್ಯ, ಸುಳ್ಯ ತಾಲೂಕು ವೈದ್ಯಾಧಿಕಾರಿ

ವಿಶೇಷ ವರದಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.