ಬೆಳ್ತಂಗಡಿ:10 ರೂ. ಊಟ, 5 ರೂ. ತಿಂಡಿ ಭಾಗ್ಯ ಶೀಘ್ರ


Team Udayavani, Sep 26, 2018, 10:43 AM IST

26-sepctember-2.gif

ಬೆಳ್ತಂಗಡಿ: ಕಳೆದ ಅವಧಿಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಕಡಿಮೆಯ ಬೆಲೆಯಲ್ಲಿ ಆಹಾರೋತ್ಪನ್ನ ಒದಗಿಸುವ ‘ಇಂದಿರಾ ಕ್ಯಾಂಟೀನ್‌’ ಕಾಮಗಾರಿ ಬೆಳ್ತಂಗಡಿಯಲ್ಲೂ ಆರಂಭಗೊಂಡಿದ್ದು, ಶೀಘ್ರದಲ್ಲಿ ಬೆಳ್ತಂಗಡಿಯ ನಾಗರಿಕರೂ ಇಂದಿರಾ ಕ್ಯಾಂಟೀನ್‌ ರುಚಿ ಅನುಭವಿಸಬಹುದಾಗಿದೆ!

ನಗರದ ಹೃದಯ ಭಾಗವಾಗಿ ಗುರುತಿಸಲ್ಪಟ್ಟಿರುವ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ಪ.ಪಂ. ಸ್ಥಳದಲ್ಲಿ ಕ್ಯಾಂಟೀನ್‌ನ ಕಾಮಗಾರಿ ಆರಂಭಗೊಂಡಿದೆ. ಪ್ರಸ್ತುತ ಜೇಸಿಬಿ ಮೂಲಕ ಸಮತಟ್ಟುಗೊಳಿಸುವ ಕಾಮಗಾರಿ ಆರಂಭಗೊಂಡಿದ್ದು, ಶೀಘ್ರದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ.

ದ.ಕ. ಜಿಲ್ಲೆಯಲ್ಲಿ ಮಂಗಳೂರಿನಲ್ಲಿ 5, ಪ್ರತಿ ತಾಲೂಕು ಕೇಂದ್ರಕ್ಕೆ ಒಂದೊಂದು ಇಂದಿರಾ ಕ್ಯಾಂಟೀನ್‌ ಆರಂಭಗೊಳ್ಳಲಿದೆ ಎಂದು ಹಿಂದಿನ ಸರಕಾರ ಘೋಷಿಸಿತ್ತು. ಅದೇ ರೀತಿ ಮಂಗಳೂರಿನಲ್ಲಿ 5 ಹಾಗೂ ಮಂಗಳೂರು ತಾ| ಕೇಂದ್ರದ ಕ್ಯಾಂಟೀನ್‌ ತೊಕ್ಕೊಟ್ಟಿನಲ್ಲಿ ಕಾರ್ಯಾಚರಿ ಸುತ್ತಿದೆ. ಉಳಿದ ತಾ| ಕೇಂದ್ರಗಳಲ್ಲಿ ಇನ್ನೂ ಕ್ಯಾಂಟೀನ್‌ ಕಾರ್ಯಾರಂಭಗೊಂಡಿಲ್ಲ.

ಕ್ಯಾಂಟೀನ್‌ಗೆ ಪ.ಪಂ. ಸ್ಥಳ ಹಾಗೂ ಇತರ ವ್ಯವಸ್ಥೆಗಳನ್ನು ನೋಡಿಕೊಳ್ಳಬೇಕಿದೆ. ಆದರೆ ಪ್ರಸ್ತುತ ಬೆಳ್ತಂಗಡಿ ಪಂ.ನಲ್ಲಿ ಆಡಳಿತ ಮಂಡಳಿಯ ಅವಧಿ ಮುಗಿದಿದ್ದು, ತಹಶೀಲ್ದಾರ್‌ ಆಡಳಿತಾಧಿಕಾರಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಕ್ಯಾಂಟೀನ್‌ಗೆ ಜಾಗ ಮಂಜೂರಾತಿ ಸಹಿತ ಕಾಮಗಾರಿ ಅವರ ನಿರ್ದೇಶನದಂತೆಯೇ ನಡೆಯಲಿದೆ.

ಮುಂದೆ ಯಾವುದೇ ಅಡ್ಡಿಗಳು ವ್ಯಕ್ತವಾಗದೇ ಇದ್ದರೆ ಬೆಳ್ತಂಗಡಿಯ ಜನತೆಯೂ ಇಂದಿರಾ ಕ್ಯಾಂಟೀನ್‌ ಮೂಲಕ 5 ರೂ.ಗಳ ಉಪಾಹಾರ, 10 ರೂ.ಗಳ ಊಟದ ಸವಿಯನ್ನು ಸವಿಯಬಹುದಾಗಿದೆ. ಕ್ಯಾಂಟೀನ್‌ಗೆ ತಳಪಾಯ ಹಾಕಿದ ಬಳಿಕ ರೆಡಿಮೇಡ್‌ ಸಲಕರಣೆಗಳ ಮೂಲಕ ಕಾಮಗಾರಿ ನಡೆಯುವುದರಿಂದ ಕ್ಯಾಂಟೀನ್‌ ಶೀಘ್ರವೇ ಕಾರ್ಯಾರಂಭಗೊಳ್ಳುವ ಸಾಧ್ಯತೆ ಇದೆ.

ಹಿಂದೆ ಬೇರೊಂದು ಜಾಗ ನಿಗದಿ
ಇಂದಿರಾ ಕ್ಯಾಂಟೀನ್‌ ನಿರ್ಮಿಸುವುದಕ್ಕೆ ಸ್ಥಳ ನೀಡುವಂತೆ ಪಟ್ಟಣ ಪಂಚಾಯತ್‌ ಗೆ ಹಿಂದೆ ಜಿಲ್ಲಾಧಿಕಾರಿ ಕಚೇರಿಯಿಂದ ಪತ್ರ ಬಂದಾಗ ಅಟಲ್‌ ಸೇವಾ ಕೇಂದ್ರದ ಬಳಿ ಸುಮಾರು 6 ಸೆಂಟ್ಸ್‌ ಸ್ಥಳವನ್ನು ಪಂಚಾಯತ್‌ ನಿಗದಿ ಪಡಿಸಿತ್ತು. ಆದರೆ ಕ್ಯಾಂಟೀನ್‌ ನಿರ್ಮಿಸುವ ಸಮಿತಿಯು ಅದನ್ನು ಪರಿಶೀಲಿಸಿ, ಈ ಸ್ಥಳ ಆಗುವುದಿಲ್ಲ ಎಂದಿತ್ತು. ಅಂದರೆ ಅದು ಎತ್ತರದ ಪ್ರದೇಶ, ಅಲ್ಲಿ ಕ್ಯಾಂಟೀನ್‌ನ ಜತೆಗೆ ತಡಗೋಡೆಯನ್ನೂ ನಿರ್ಮಿಸಬೇಕಾಗುತ್ತದೆ. ಜತೆಗೆ ನಿಗದಿಯಂತೆ 60×60 ಫೀಟ್‌ ಸ್ಥಳ ಇಲ್ಲ ಎಂದು ಸೂಚಿಸಿತ್ತು. ಹೀಗಾಗಿ ಬೇರೆ ಸ್ಥಳವನ್ನು ಸೂಚಿಸುವಂತೆ ಪಂ.ಗೆ ಸೂಚನೆ ಬಂದಿತ್ತು. ಪ್ರಸ್ತುತ ಜಿಲ್ಲಾಧಿಕಾರಿ ಕಚೇರಿಯಿಂದ ಬೇಗ ಸ್ಥಳ ನಿಗದಿಗೆ ಒತ್ತಡ ಬಂದ ಹಿನ್ನೆಲೆಯಲ್ಲಿ ಬಸ್‌ ನಿಲ್ದಾಣದ ಸಮೀಪದ ಸ್ಥಳವನ್ನು ನಿಗದಿ ಪಡಿಸಲಾಗಿದೆ.

ಪಾರ್ಕಿಂಗ್‌ ಸ್ಥಳ
ಬೆಳ್ತಂಗಡಿ ನಗರದ ಪಾರ್ಕಿಂಗ್‌ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಪಂ.ನಿಂದ ಬಸ್‌ ನಿಲ್ದಾಣದ ಹಿಂಬದಿಯ ಸ್ಥಳದಲ್ಲಿ ಇಂಟರ್‌ಲಾಕ್‌ ಅಳವಡಿಸಿ, ಪೇ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿತ್ತು. ಅದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪಂ. ಆಡಳಿತ ಮಂಡಳಿ ಅದನ್ನು ರದ್ದುಗೊಳಿಸಿತ್ತು. ಇದೀಗ ಅದೇ ಸ್ಥಳದ ಒಂದು ಬದಿಯಲ್ಲಿ ಇಂದಿರಾ ಕ್ಯಾಂಟೀನ್‌ಗೆ ಸ್ಥಳ ನಿಗದಿ ಮಾಡಿ, ಕಾಮಗಾರಿ ಆರಂಭಿಸಲಾಗಿದೆ.

ಕಾಮಗಾರಿ
ಪ.ಪಂ.ನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಲಾಗುತ್ತಿದೆ. ಡಿಸಿ ನಿರ್ದೇಶನದಂತೆ ಬಸ್‌ ನಿಲ್ದಾಣ ಪಕ್ಕ ಇಂದಿರಾ ಕ್ಯಾಂಟೀನ್‌ ಕಾಮಗಾರಿ ಆರಂಭಗೊಂಡಿದ್ದು, ಶೀಘ್ರ ಕಾರ್ಯಾರಂಭಗೊಳಿಸುವ ಆಲೋಚನೆ ಇದೆ.
– ಮದನ್‌ಮೋಹನ್‌ ಸಿ.
ತಹಶೀಲ್ದಾರ್‌, ಪ.ಪಂ. ಆಡಳಿತಾಧಿಕಾರಿ

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.