ಧರ್ಮಸ್ಥಳ: 281 ಶಿಬಿರಾರ್ಥಿಗಳಿಗೆ ಭಜನ ಕಲಿಕೆ ಪಾಠ 


Team Udayavani, Sep 27, 2018, 12:36 PM IST

27-sepctember-10.gif

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್‌ ವತಿಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ 20ನೇ ವರ್ಷದ ಭಜನ ತರಬೇತಿ ಕಮ್ಮಟವು ಸೆ. 23ಕ್ಕೆ ಆರಂಭಗೊಂಡು, ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ.

ಕಮ್ಮಟದಲ್ಲಿ ರಾಜ್ಯದ 157 ಭಜನ ಮಂಡಳಿಗಳ 281 ಸದಸ್ಯರು ಶಿಬಿರಾರ್ಥಿಗಳಾಗಿ ಪಾಲ್ಗೊಂಡಿದ್ದು, 186 ಪುರುಷರು ಹಾಗೂ 95 ಮಹಿಳಾ ಶಿಬಿರಾರ್ಥಿಗಳಿದ್ದಾರೆ. ಹೇಮಾವತಿ ವಿ. ಹೆಗ್ಗಡೆ, ಶ್ರೀ ಮೋಹನದಾಸ ಸ್ವಾಮೀಜಿ, ಡಿ. ಹರ್ಷೇನ್ದ್ರ ಕುಮಾರ್‌ ಅವರು ಕಮ್ಮಟಕ್ಕೆ ಆಗಮಿಸಿ, ಪ್ರೇರಣೆ ನೀಡಿದ್ದಾರೆ.

ಕಮ್ಮಟದ 2ನೇ ದಿನ ಧಾರ್ಮಿಕ ಹಾಗೂ ಸಾಮಾಜಿಕ ಸಮನ್ವಯತೆಯಲ್ಲಿ ಭಜನ ಮಂಡಳಿಯ ಪಾತ್ರದ ಕುರಿತು ಡಾ| ಎಲ್‌.ಎಚ್‌. ಮಂಜುನಾಥ್‌ ಉಪನ್ಯಾಸ ನೀಡಿದ್ದು, 3ನೇ ದಿನ ವಿಟ್ಠಲ್‌ ನಾಯಕ್‌ ವಿಟ್ಲ ಅವರು ಗೀತ ಸಾಹಿತ್ಯ ಸಂಭ್ರಮ ನಡೆಸಿಕೊಟ್ಟಿದ್ದಾರೆ.

ಶಿಬಿರಾರ್ಥಿಗಳ ಪರಿಚಯ ಹಾಗೂ ಗುಂಪು ರಚನೆಯನ್ನು ಮಮತಾ ರಾವ್‌ ಹಾಗೂ ಶ್ರೀನಿವಾಸ್‌ ರಾವ್‌ ನಡೆಸಿದ್ದು, ರಾಗ-ತಾಳ-ಶ್ರುತಿ ಕುರಿತು ಮನೋರಮಾ ತೋಳ್ಪಾಡಿತ್ತಾಯ ನಡೆಸಿಕೊಟ್ಟಿದ್ದಾರೆ. ಸುಬ್ರಹ್ಮಣ್ಯ ಪ್ರಸಾದ್‌ ಕ್ಷೇತ್ರದ ಸಮಗ್ರ ಪರಿಚಯ ತಿಳಿಸಿದ್ದಾರೆ.

ರಾಗ-ತಾಳ-ವೈವಿಧ್ಯ ಪ್ರಾತ್ಯಕ್ಷಿಕೆ
ರಾಗ-ತಾಳ-ವೈವಿಧ್ಯ ಕುರಿತು ಅಣ್ಣು ದೇವಾಡಿಗ ಹಾಗೂ ಪ್ರಭಾಕರ್‌ ಅವರ ತಂಡ ಪ್ರಾತ್ಯಕ್ಷಿಕೆ ನಡೆಸಿಕೊಟ್ಟಿದೆ. ನೃತ್ಯ ಭಜನೆ ಕುರಿತು ರಮೇಶ್‌ ಕಲ್ಮಾಡಿ, ಶಂಕರ್‌, ಬೆಳಾಲು ಲಕ್ಷ್ಮಣ್‌ ಗೌಡ, ಧೀವಿತ್‌ ಕೋಟ್ಯಾನ್‌, ಚೈತ್ರಾ ನಡೆಸಿಕೊಡುತ್ತಿದ್ದಾರೆ. ಕಮ್ಮಟದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಷಾ ಹೆಬ್ಟಾರ್‌, ಶಿವಾನಂದ ರಾವ್‌ ಕಕ್ಕಿನೇಜಿ, ಭಗೀರಥ್‌, ದೇವದಾಸ್‌ ಪ್ರಭು, ಮನೋರಮಾ ತೋಳ್ಪಾಡಿತ್ತಾಯ, ಮಂಗಲದಾಸ ಗುಲ್ವಾಡಿ, ಮೋಹನ್‌ದಾಸ್‌ ಶೆಣೈ ಮಂಗಳೂರು ಭಾಗವಹಿಸಿದ್ದಾರೆ.

ಯೋಗಾಭ್ಯಾಸ, ಉಪನ್ಯಾಸ
ಡಾ| ಶಶಿಕಾಂತ್‌ ಜೈನ್‌ ಅವರು ಪ್ರತಿ ದಿನ ಯೋಗಾಭ್ಯಾಸ ನಡೆಸುತ್ತಿದ್ದಾರೆ. ಹರಿದಾಸ್‌ ಗಾಂಭೀರ್‌, ವೀರು ಶೆಟ್ಟಿ ಚಿಂತನ ಕಾರ್ಯಕ್ರಮ, ವಿವೇಕ್‌ ವಿನ್ಸೆಂಟ್‌ ಪಾಯ್ಸ ಆರೋಗ್ಯಕರ ಅಭ್ಯಾಸಗಳು, ದುರಭ್ಯಾಸದ ವಿರುದ್ಧ ಜಾಗೃತಿ ಮೂಡಿಸುವ ಚಲನಚಿತ್ರ ಪ್ರದರ್ಶನದ ಜತೆಗೆ ಉಪನ್ಯಾಸ ನೀಡಿದ್ದಾರೆ. ಯೋಜನಾಧಿಕಾರಿ ದಿನೇಶ್‌, ಶ್ರೀನಿವಾಸ್‌ ರಾವ್‌, ಬಾಲಕೃಷ್ಣ, ರಾಜೇಶ್‌ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದಾರೆ. 

ಸಾಂಸ್ಕೃತಿಕ ಕಾರ್ಯಕ್ರಮ
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧ.ಮಂ. ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿಗಳು ಭಕ್ತಿಗೀತೆ ನಡೆಸಿಕೊಟ್ಟಿದ್ದಾರೆ. ಕಮ್ಮಟದ ಯಶಸ್ಸಿಗೆ ಸುಬ್ರಹ್ಮಣ್ಯ ಪ್ರಸಾದ್‌, ಮಮತಾ ಹರೀಶ್‌ ರಾವ್‌, ಶಾಂತಿವನದ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಕೋಶಾಧಿಕಾರಿ ನಾಗೇಂದ್ರ ಅಡಿಗ, ಭುಜಬಲಿ, ಬಿ. ಜಯರಾಮ ನೆಲ್ಲಿತ್ತಾಯ, ಕಮ್ಮಟದ ಕಾರ್ಯಕಾರಿ ಸದಸ್ಯರು, ಕ್ಷೇತ್ರದ ಸಿಬಂದಿ, ಯೋಜನೆ ಪ್ರಮುಖರು, ಸ್ವಯಂ ಸೇವಕರು, ಕನ್ಯಾಕುಮಾರಿ ಯುವತಿ ಮಂಡಲದ ಸದಸ್ಯರು ಸಹಕರಿಸುತ್ತಿದ್ದಾರೆ.

ಸೆ. 30: ಭಜನೋತ್ಸವ
ಸೆ. 30ರಂದು ಭಜನೋತ್ಸವ ಹಾಗೂ ಭಜನ ತರಬೇತಿ ಕಮ್ಮಟದ ಸಮಾರೋಪ ನಡೆಯಲಿದ್ದು,ಬೆಳಗ್ಗೆ 10ಕ್ಕೆ ಸುಮಾರು 3,000 ಭಜನ ಪಟುಗಳಿಂದ ಶೋಭಾಯಾತ್ರೆ, ಅಮೃತ ವರ್ಷಿಣಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ ಭಜನೆ ನಡೆಯಲಿದೆ. ಸಮಾರಂಭದಲ್ಲಿ ಶ್ರೀಕ್ಷೇತ್ರ ಕನಕಗಿರಿಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.