ಗನ್‌ ಹಿಡಿದು ಕೆಲಸ ಮಾಡುವಂತಿರಬಾರದು


Team Udayavani, Oct 8, 2018, 12:23 PM IST

8-october-9.gif

ಪುತ್ತೂರು: ಪಿಸ್ತೂಲ್‌, ಗನ್‌ ಹಿಡಿದು ಕೆಲಸ ಮಾಡುವ ಸ್ಥಿತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬರಬಾರದು. ಇಲ್ಲಿರುವವರು ನಮ್ಮದೇ ಜನ. ಅವರು ನಮ್ಮ ಮಾತನ್ನು ಕೇಳಿಯೇ ಕೇಳುತ್ತಾರೆ. ಇದೇ ಕಾರಣಕ್ಕೆ ಯಾವತ್ತೂ ಪಿಸ್ತೂಲ್‌ ಹಿಡಿದುಕೊಂಡು ಓಡಾಡಿದ್ದೇ ಇಲ್ಲ ಎಂದು ಪೊಲೀಸ್‌ ನಿರೀಕ್ಷಕ ಮಹೇಶ್‌ ಪ್ರಸಾದ್‌ ಹೇಳಿದರು.

ನಗರ ಠಾಣೆಯಿಂದ ಕಾಪುವಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅ. 6ರಂದು ರಾತ್ರಿ ಬ್ರಹ್ಮಶ್ರೀ  ನಾರಾಯಣ ಗುರು ಸಭಾ ಭವನದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಎಷ್ಟೋ ಸಂದರ್ಭ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುವಾಗ ನಾವು ನಡುವಿದ್ದೆವು. ಆಗಲೂ ಗನ್‌, ಪಿಸ್ತೂಲ್‌ ಹಿಡಿದುಕೊಂಡಿಲ್ಲ. ಘರ್ಷಣೆಯಲ್ಲಿ ನಮಗೇ ಎರಡೇಟು ಬಿದ್ದದ್ದೂ ಇದೆ. ಆದರೆ ಹೊಡೆದ ವ್ಯಕ್ತಿ ಮತ್ತೆ ನಮ್ಮ ಬಳಿ ಬಂದು ಕ್ಷಮೆ ಕೇಳಿದ ಉದಾಹರಣೆ ಇದೆ. ನಮ್ಮ ಜನಗಳಿಗೆ ನಾವೇ ಹಿಂಸೆ ನೀಡುವುದು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ಕಾಶ್ಮೀರದಂತಹ ಪರಿಸ್ಥಿತಿ ಇನ್ನೆಲ್ಲಿಯೂ ಬರಬಾರದು ಎನ್ನುವುದೇ ನಮ್ಮೆಲ್ಲರ ಆಶಯ ಆಗಿರಬೇಕು ಎಂದರು.

ಆಂತರಿಕ ಭದ್ರತೆ ದೊಡ್ಡ ಸವಾಲು
ಆಂತರಿಕ ಭದ್ರತೆ ಇಂದಿನ ದೊಡ್ಡ ಸವಾಲು. ಇದನ್ನು ಎದುರಿಸಲು ಶಸ್ತ್ರಾಸ್ತ್ರಗಳಿಂದ ಸಾಧ್ಯವಿಲ್ಲ. ಜನರಿಗೆ ಮನವರಿಕೆ ಮಾಡುವುದು ಒಂದೇ ದಾರಿ. ಪುತ್ತೂರಿನಲ್ಲಿ ಕಳೆದ ಮೂರು ವರ್ಷಗಳಿಂದ ಇದನ್ನೇ ಮಾಡಿದ್ದೇನೆ. ಜನಸ್ನೇಹಿ ಪೊಲೀಸರಿಂದ ಉತ್ತಮ ಬೆಂಬಲ ಸಿಕ್ಕಿದೆ. ಆದ್ದರಿಂದ ಇಷ್ಟೆಲ್ಲ ಕೆಲಸ ಮಾಡಲು ಸಾಧ್ಯವಾಗಿದೆ ಎಂದರು.

ಮಾದರಿ ಠಾಣೆ
ಎಸ್‌ಐ ಜಗದೀಶ್‌ ರೆಡ್ಡಿ ಮಾತನಾಡಿ, ನಗರ ಠಾಣೆ ರಾಜ್ಯಕ್ಕೆ ಮಾದರಿಯಾಗಿ ನಿಂತಿದೆ. ಇಲ್ಲಿ ನಡೆದಷ್ಟು ಉತ್ತಮ ಕೆಲಸಗಳು ಬೇರೆಲ್ಲೂ ನಡೆದಿಲ್ಲ. ಸರಕಾರದ ಯಾವುದೇ ಅನುದಾನಕ್ಕೆ ಕಾಯದೆ, ಪೇಟೆಯಲ್ಲಿ ಸಿಸಿ ಕೆಮರಾ ಅಳವಡಿಸಿರುವುದು ಮಹತ್ವದ ಕೆಲಸ ಎಂದು ಶ್ಲಾಘಿಸಿದರು.

ಸ್ಕರಿಯ ಮಾತನಾಡಿ, ಮಹೇಶ್‌ ಪ್ರಸಾದ್‌ ಎಂದರೆ ಪುತ್ತೂರಿನ ಸಿಂಗಂ ಎಂದೇ ಖ್ಯಾತಿ. ಕಾನೂನು ಸುವ್ಯವಸ್ಥೆಯನ್ನು ರಾಜ್ಯಕ್ಕೆ ಮಾದರಿಯಾಗಿ ರೂಪಿಸಿದ್ದಾರೆ. ಇವರಿಗೆ ಕರ್ತವ್ಯವೇ ಮುಖ್ಯ. ಊಟ, ನಿದ್ರೆ ಆನಂತರ. ಪ್ರಧಾನಿ ನಂತರ ಅಷ್ಟು ಕೆಲಸ ಮಾಡುವ ವ್ಯಕ್ತಿ ಇದ್ದರೆ, ಅದು ಮಹೇಶ್‌ ಪ್ರಸಾದ್‌. ರಾಜ್ಯದಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಪತ್ತೆ ಹಚ್ಚಿದ ಕೀರ್ತಿ ಮಹೇಶ್‌ ಪ್ರಸಾದ್‌ ಅವರಿಗೆ ಸಲ್ಲುತ್ತದೆ ಎಂದರು.

ಪಿಎಸ್‌ಐ ಅಜಯ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಎಸ್‌ಐಗಳಾದ ರವಿ, ನಾರಾಯಣ ರೈ, ರುಕ್ಮಯ, ಓಮನಾ, ಸೇಸಮ್ಮ, ಮಂಜುನಾಥ್‌, ಚಂದ್ರಶೇಖರ್‌, ಎಎಸ್‌ಐಗಳಾದ ಲೋಕನಾಥ್‌, ಶ್ರೀಧರ್‌, ಸಿಬಂದಿ ಹರೀಶ್‌, ಕಿರಣ್‌ ಕುಮಾರ್‌, ಶರಣ ಪಾಟೀಲ ಅನಿಸಿಕೆ ವ್ಯಕ್ತಪಡಿಸಿದರು.

ವಿಶ್ವಾಸ ಮುಖ್ಯ
ಸಮಾಜದ ಮುಂದೆ ಪೊಲೀಸರು ದೊಡ್ಡ ಹುದ್ದೆಯಲ್ಲಿರುತ್ತಾರೆ. ಬಿಟ್ಟರೆ ಮತ್ತೆ ನ್ಯಾಯಾಲಯ. ಪ್ರತಿಯೊಬ್ಬ ಪೊಲೀಸರು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಜನರು ನಮ್ಮ ಮೇಲಿಟ್ಟ ವಿಶ್ವಾಸವನ್ನು ಉಳಿಸಿಕೊಳ್ಳಬೇಕು. ಹಾಗೆಂದು ಪೊಲೀಸರಿಗೆ ಅವಮಾನ ಆಗುವುದನ್ನು ಯಾವ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ.
– ಮಹೇಶ್‌ ಪ್ರಸಾದ್‌
ವರ್ಗಾವಣೆಗೊಂಡ ಪುತ್ತೂರು ಪೊಲೀಸ್‌ ನಿರೀಕ್ಷ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.