ನಾಟಕ, ಸಿನೆಮಾಗಳಲ್ಲಿ ಮಿಂಚಿದ ರವಿ ರಾಮಕುಂಜ


Team Udayavani, Oct 18, 2018, 10:04 AM IST

18-october-2.gif

ಆಲಂಕಾರು: ನಾಟಕ ರಚನೆಕಾರ, ಸಂಗೀತ ನಿರ್ದೇಶಕ ಹಾಗೂ ರಂಗ ನಿರ್ದೇಶಕರಾಗಿ ಬೆಳೆದ ಅಪ್ಪಟ ಗ್ರಾಮೀಣ ಪ್ರತಿಭೆ ರಾಜ್ಯ ಮಟ್ಟದಲ್ಲಿ ಹೆಸರು ಮಾಡುತ್ತಿದೆ. ರಾಮಕುಂಜ ಗ್ರಾಮದ ರವಿ ಅವರು ಬಡತನದಲ್ಲಿ ಹುಟ್ಟಿ, ಪಿಯುಸಿ ತನಕ ಶಿಕ್ಷಣ ಪಡೆದರು. ಬಳಿಕ ಅವರಿಗೆ ಬದುಕಿನ ದಾರಿ ತೋರಿಸಿದ್ದು ನಾಟಕ ಕಲೆ. ಐದನೇ ತರಗತಿ ಓದುತ್ತಿರುವಾಗಲೇ ಶಿಕ್ಷಕ ಸೀತಾರಾಮ ಗೌಡ ಅವರ ಮಾರ್ಗದರ್ಶನದಲ್ಲಿ ನಾಟಕದಲ್ಲಿ ಪಾತ್ರ ಮಾಡಿದ ರವಿ, 2007ರಲ್ಲಿ ಪಿ.ಬಿ. ರೈ ನೇತೃತ್ವದ ಮಂಗಳೂರು ನಂದಿಕೇಶ್ವರ ನಾಟಕ ತಂಡದ ಒಬ್ಬ ಕಲಾವಿದ ಕೊನೆಯ ಕ್ಷಣದಲ್ಲಿ ಪ್ರದರ್ಶನಕ್ಕೆ ಗೈರಾದ ಕಾರಣ ಅವಕಾಶ ಪಡೆದರು. ಅದೇ ಅವರ ಬದುಕಿಗೆ ತಿರುವು ನೀಡಿತು.

ಅವಕಾಶಗಳ ಸುರಿಮಳೆ
‘ಮುದುಕನ ಮದುವೆ’ ‘ಕಿವುಡನ ಕಿತಾಪತಿ’ ‘ಬಸ್‌ ಕಂಡಕ್ಟರ್‌’ ನಾಟಕಗಳಲ್ಲಿ ರವಿ ಅವರ ಅಭಿನಯ ಹೆಸರು ಮಾಡಿದೆ. ತುಳು ನಾಟಕಗಳಲ್ಲಿ ಬೇಡಿಕೆಯ ಕಾಮಿಡಿ ಕಲಾವಿದರಾಗಿ ಬೆಳೆದಿದ್ದಾರೆ. ‘ಬೆಚ್ಚ ನೆತ್ತರ್‌’ ಅವರು ಅಭಿನಯಿಸಿದ ಪ್ರಥಮ ತುಳು ನಾಟಕ. ಆನಂತರ ಶಿವಾನಂದ ಶೆಟ್ಟಿ ಮಂಗಲ್ಪಾಡಿ ನೇತೃತ್ವದ ಅಮ್ಮ ಕಲಾವಿದೆರ್‌ ಮಂಗಳೂರು ತಂಡದಲ್ಲಿ ಸೇರಿಕೊಂಡರು. ‘ನಮ್ಮ ಅಮ್ಮ “ಚಿಕ್ಕಮ್ಮ’, ‘ಮದಿಮೆದ ದುಂಬುನಾನಿ’ ನಾಟಕಗಳಲ್ಲಿ ಅಭಿನಯಿಸಿದರು. ಕೃಷ್ಣ ಜಿ. ಮಂಜೇಶ್ವರ ನೇತೃತ್ವದ ಐಸಿರಿ ನಾಟಕ ಕಲಾವಿದರು ತಂಡದಲ್ಲಿ ‘ಕೈ ಪತ್ತಿನಾರ್‌’, ‘ಜನನೇ ಬೇತೆ’ ಹಾಗೂ ‘ಅಂಚಗೆ ಇಂಚಗೆ’ ನಾಟಕಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ನಮ್ಮ ಟಿವಿ ಕುಡ್ಲ ಚಾನೆಲ್‌ನ ಕಾಮಿಡಿ ಶೋಗಳಾದ ‘ಬಲೆ ತೆಲಿಪಾಲೆ’ ವಿ4 ಚಾನೆಲ್‌ನ ‘ಕಾಮಿಡಿ ಪ್ರೀಮಿಯರ್‌ ಲೀಗ್‌’ನಲ್ಲಿ ಕುಸಾಲ್‌ ತಂಡದ ಸದಸ್ಯರಾಗಿ ಅಭಿನಯಿಸಿದ್ದಾರೆ. ಮಂತ್ರವಾದಿಯ ಪಾತ್ರ ಬಹು ಜನಪ್ರಿಯ.

ಮುಂಬಯಿ ಹಾಗೂ ಮಹಾರಾಷ್ಟ್ರದ ಇತರ ಕಡೆಗಳಲ್ಲಿಯೂ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ರವಿ ಅವರ ಸಂಗೀತ ಮತ್ತು ನಿರ್ದೇಶನದ ಬೂಡಿಯಾರ್‌ ರಾಧಾಕೃಷ್ಣ ರೈ ಸಾರಥ್ಯದ ಪುತ್ತೂರು ಕಲಾವಿದರು ಅಭಿನಯಿಸುವ ‘ದಾದಂದ್‌ ಪನೋಡು’ ನಾಟಕ ಅ. 19ರಂದು ಪ್ರಥಮ ಪ್ರದರ್ಶನಗೊಳ್ಳಲಿದೆ.

ಕನ್ನಡಕ್ಕೆ ಪದಾರ್ಪಣೆ 
ಕಾಮಿಡಿ ಶೋಗಳನ್ನು ವೀಕ್ಷಿಸುತ್ತಿದ್ದ ಪಿಲಿಬೈಲ್‌ ಯಮುನಕ್ಕ ಖ್ಯಾತಿಯ ಸೂರಜ್‌ ರೈ ಅವರು ರವಿ ಅವರನ್ನು ಗುರುತಿಸಿ ‘ಅಮ್ಮರ್‌ ಪೊಲೀಸಾ’ ತುಳು ಚಲನಚಿತ್ರದಲ್ಲಿ ಅವಕಾಶ ನೀಡಿದರು. ಸಂದೇತ್‌ ಶೆಟ್ಟಿ ಅಜ್ರಿಯವರ ಮೂಲಕ ‘ಕತ್ತಲಕೋಣೆ’ ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯ ಚಿತ್ರೀಕರಣ ನಡೆಯುತ್ತಿರುವ ‘ವಿಐಪಿ ಲಾಸ್ಟ್‌ ಬೆಂಚ್‌’ ಕನ್ನಡ ಸಿನೆಮಾದಲ್ಲಿ ಹಾಸ್ಯ ಕಲಾವಿದರಾಗಿ ನಟಿಸುತ್ತಿದ್ದಾರೆ. ‘ರಡ್ಡ್ ಎಕ್ರೆ’ ಹಾಗೂ ಹೆಸರಿಡದ ಮತ್ತೂಂದು ತುಳು ಸಿನೆಮಾದಲ್ಲೂ ಅವಕಾಶ ಪಡೆದಿದ್ದಾರೆ.

ಕಲಾಕೇಂದ್ರ ಚಿಂತನೆ
ಹಾಸ್ಯ ಸೀಮಿತವಾಗಿರಬೇಕು. ಪ್ರೇಕ್ಷಕರನ್ನು ನಗಿಸಲು ಪ್ರಯತ್ನಿಸಬಾರದು. ಮಾತಿನ ಮೋಡಿ ಹಾಗೂ ನಟನೆಯ ಮೂಲಕವೇ ನೋಡುಗರಲ್ಲಿ ನಗು ಉಕ್ಕಿಸಬೇಕು. ನಾಟಕದ ಸಂದೇಶ ಸಮಾಜಕ್ಕೆ ಒಳಿತಾಗುವಂತಿರಬೇಕು. ಶಾಲಾ ದಿನಗಳಲ್ಲಿ ಅವಕಾಶ, ಮಾಹಿತಿಯ ಕೊರತೆಯಿಂದ ಹಿಂದೆ ಬಿದ್ದೆ. ಆನಂತರ ಅವಕಾಶ ಒಲಿದು ಬಂತು. ಗ್ರಾಮೀಣ ಪ್ರತಿಭೆಗಳು ಮಾಹಿತಿ ಹಾಗೂ ಅವಕಾಶಗಳಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ರಾಮಕುಂಜದಲ್ಲಿ ಕಲಾಕೇಂದ್ರವನ್ನು ಆರಂಭಿಸಲು ಚಿಂತನೆ ನಡೆಸುತ್ತಿದ್ದೇನೆ.
ರವಿ ರಾಮಕುಂಜ,
  ಕಲಾವಿದ 

ಸದಾನಂದ ಆಲಂಕಾರು

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.