ಮರ್ದಾಳ-ಸುಬ್ರಹ್ಮಣ್ಯ: ಟೆಲಿಕಾಂ ಕೇಬಲ್ ಅಳವಡಿಕೆ
Team Udayavani, Oct 18, 2018, 2:45 PM IST
ಕಡಬ: ಮರ್ದಾಳ-ಸುಬ್ರಹ್ಮಣ್ಯ ರಸ್ತೆಯ ಪಕ್ಕ ಗುಂಡಿ ತೋಡಿ ಕೇಬಲ್ ಅಳವಡಿಸುತ್ತಿರುವ ಟೆಲಿಕಾಂ ಕಂಪೆನಿಯ ಕಾಮಗಾರಿಯಿಂದಾಗಿ ರಸ್ತೆಗೆ ಹಾನಿಯಾಗಿದ್ದು, ವಾಹನ ಸಂಚಾರಕ್ಕೆ ತೊಡಕುಂಟಾಗಿದೆ ಎಂದು ಸಾರ್ವಜನಿಕರು ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಕಾಮಗಾರಿಯಿಂದಾಗಿ ಬಿಳಿನೆಲೆಯಿಂದ ಕೈಕಂಬದ ತನಕ ಅಲ್ಲಲ್ಲಿ ಡಾಮರು ರಸ್ತೆಗೆ ಹಾನಿಯಾಗಿದೆ. ಕೆಲವೆಡೆ ರಸ್ತೆಯಂಚಿನಲ್ಲೇ ಗುಂಡಿ ತೆಗೆದು ಕೇಬಲ್ ಹಾಕಿ ಮಣ್ಣು ಮುಚ್ಚಲಾಗಿದೆ. ವಾಹನಗಳು ಸೈಡ್ ಕೊಡುವ ವೇಳೆ ಚಕ್ರಗಳು ಹೂತು ಹೋಗಿ ತೊಂದರೆಯುಂಟಾಗಿದೆ. ಹೊಂಡದ ಮಣ್ಣು ರಸ್ತೆಗೆ ಬಿದ್ದು ಮಳೆ ಬಂದಾಗ ರಸ್ತೆ ಕೆಸರುಮಯವಾಗುತ್ತಿದೆ.
ರಿಫ್ಲೆಕ್ಟರ್ಗಳನ್ನು ಕಿತ್ತು ಹಾಕಿದರು
ರಾತ್ರಿ ವೇಳೆ ವಾಹನ ಚಾಲಕರಿಗೆ ಅನುಕೂಲವಾಗುವಂತೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಅಳವಡಿಸಲಾಗಿದ್ದ ರಿಫ್ಲೆಕ್ಟರ್ಗಳನ್ನು ಕಾಮಗಾರಿಯ ವೇಳೆ ಕಿತ್ತು ಹಾಕಲಾಗಿದ್ದು, ಮತ್ತೆ ಅಳವಡಿಸಿಲ್ಲ. ಅದರಿಂದಾಗಿ ರಾತ್ರಿ ವೇಳೆ ವಾಹನ ಚಲಾಯಿಸುವ ಚಾಲಕರಿಗೆ ತೀವ್ರ ತೊಂದರೆಯಾಗುತ್ತಿದೆ. ರಸ್ತೆಗೆ ಹಾನಿಯಾಗುವಂತೆ ಕಾಮಗಾರಿ ನಡೆಸುತ್ತಿರುವ ಖಾಸಗಿ ಟೆಲಿಕಾಂ ಕಂಪೆನಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರಸ್ತೆಯನ್ನು ಮತ್ತೆ ಸುಸ್ಥಿತಿಗೆ ತರುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕ್ರಮ ಕೈಗೊಂಡಿದ್ದೇವೆ
ಕಂಪೆನಿಯವರು ಇಲಾಖೆಗೆ ನಿಗದಿತ ಶುಲ್ಕ ಪಾವತಿಸಿ ಕೇಬಲ್ ಅಳವಡಿಸುವ ಕಾಮಗಾರಿ ನಡೆಸುತ್ತಿದ್ದಾರೆ. ರಸ್ತೆಗೆ ಹಾನಿ ಮಾಡದಂತೆ ಷರತ್ತು ವಿಧಿಸಿ ಅನುಮತಿ ನೀಡಲಾಗಿತ್ತು. ಕೆಲಸ ನಿರ್ವಹಿಸುವ ವೇಳೆಯಲ್ಲಿ ಅವರು ರಸ್ತೆಗೆ ಹಾನಿ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಅದರಂತೆ ನಮ್ಮ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕಂಪೆನಿಯ ವಿರುದ್ಧ ಪೊಲೀಸರಿಗೆ ದೂರು ನೀಡಿ ಕಾಮಗಾರಿಯನ್ನು ನಿಲ್ಲಿಸಿದ್ದರು. ಆನಂತರದಲ್ಲಿ ಹಾನಿಯಾಗಿರುವ ರಸ್ತೆಯನ್ನು ಸರಿ ಪಡಿಸಿಕೊಡುವ ಭರವಸೆ ನೀಡಿ ಕಂಪೆನಿಯವರು ಕಾಮಗಾರಿ ನಡೆಸುತ್ತಿದ್ದಾರೆ. ಹಾನಿಯಾಗಿರುವ ರಸ್ತೆಯ ಭಾಗವನ್ನು ಕಂಪೆನಿಯವರಿಂದಲೇ ದುರಸ್ತಿಪಡಿಸಲು ಕ್ರಮ ಕೈಗೊಂಡಿದ್ದೇವೆ.
– ಪ್ರಮೋದ್ಕುಮಾರ್ ಕೆ.ಕೆ.,
ಪಿಡಬ್ಲ್ಯುಡಿ ಎಇ, ಪುತ್ತೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ