‘ದೇಗುಲದಲ್ಲಿ ಡ್ರೆಸ್‌ಕೋಡ್‌ ಚಿಂತನೆ’


Team Udayavani, Oct 20, 2018, 11:59 AM IST

19-october-9.gif

ವೇಣೂರು: ದೇವಸ್ಥಾನಗಳ ಆದಾಯ ಸರಕಾರದ ಖಜಾನೆಗೆ ಸೇರುವುದಿಲ್ಲ. ಎ ಗ್ರೇಡ್‌ ದೇವಸ್ಥಾನಗಳ ಆದಾಯವನ್ನು ಆದಾಯ ಕಡಿಮೆ ಇರುವ ಸಿ ಗ್ರೇಡ್‌ ದೇವಸ್ಥಾನಗಳ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ. ಖಾಸಗಿ ದೇವಸ್ಥಾನಗಳ ಅಭಿವೃದ್ಧಿಗೂ ಧಾರ್ಮಿಕ ಪರಿಷತ್‌ನಿಂದ ಅನುದಾನ ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಭಕ್ತರ ಡ್ರೆಸ್‌ ಕೋಡ್‌ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಪದ್ಮನಾಭ ಕೋಟ್ಯಾನ್‌ ಹೇಳಿದರು. 

ವೇಣೂರು ಶ್ರೀ ಶಾರದಾ ಸೇವಾ ಟ್ರಸ್ಟ್‌ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಜರಗಿದ 14ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದಿರೆಯ ವಕೀಲ ನಾಗೇಶ್‌ ಶೆಟ್ಟಿ ಮಾತನಾಡಿ, ಹಿಂದೂ ಧಾರ್ಮಿಕ ಕೇಂದ್ರಗಳ ಕಡಿವಾಣ ಸಲ್ಲದು. ಈ ಬಗ್ಗೆ ರಾಜಕಾರಣಿಗಳು ಚಿಂತಿಸುವ ಆವಶ್ಯಕತೆ ಇದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ವೇಣೂರಿನ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್‌, ವೇಣೂರು ವಲಯ ಅರಣ್ಯಾಧಿಕಾರಿ ಪ್ರಶಾಂತ್‌ ಕುಮಾರ್‌ ಪೈ, ವೇಣೂರು ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ| ಧನುಷ್‌ ಕೆ.ಎಸ್‌., ವೇಣೂರು ಠಾಣೆಯ ಪೊಲೀಸ್‌ ಸಿಬಂದಿ ವಿಜಯ ಕುಮಾರ್‌ ರೈ, ಶಂಕರ ಎಸ್‌. ಸಂಕಲಿಕೆ, ಸಮಿತಿ ಪೂರ್ವಾಧ್ಯಕ್ಷ ರಾಜೇಶ್‌ ಪೂಜಾರಿ ಮೂಡುಕೋಡಿ, ಶ್ರೀ ಶಾರದಾ ಸೇವಾ ಟ್ರಸ್ಟ್‌ ಅಧ್ಯಕ್ಷ ಅಶೋಕ ಪಾಣೂರು, ಕಾರ್ಯದರ್ಶಿ ಕೆ. ಲೋಕಯ್ಯ ಪೂಜಾರಿ ಮತ್ತಿತರರಿದ್ದರು. ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಪಿ. ಧರಣೇಂದ್ರ ಕುಮಾರ್‌ ಸ್ವಾಗತಿಸಿ, ಕಾರ್ಯದರ್ಶಿ ಕೊರಗಪ್ಪ ಎಂ. ವಂದಿಸಿದರು. ಸಂತೋಷ್‌ ಕುಲಾಲ್‌ ಸಿದ್ದಕಟ್ಟೆ ನಿರೂಪಿಸಿದರು.

ವೈಭವದ ಶೋಭಾಯಾತ್ರೆ
ಇದಕ್ಕೂ ಮೊದಲು ಬಜಿರೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ವೈಭವದ ಶೋಭಾಯಾತ್ರೆಯೊಂದಿಗೆ ಶಾರದೆ ವಿಗ್ರಹವನ್ನು ವಿಸರ್ಜಿಸ ಲಾಯಿತು. ಶಾಸಕ ಹರೀಶ್‌ ಪೂಂಜ, ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷ ಸತೀಶ್‌ ಕಾಶಿಪಟ್ಣ ಭೇಟಿ ನೀಡಿದರು.

ಸಮ್ಮಾನ
ನಿವೃತ್ತ ಯೋಧ ಚಂದ್ರಹಾಸ ಕುಂಞೊಟ್ಟು ಅವರನ್ನು ಸಮ್ಮಾನಿಸಲಾಯಿತು. ರಾಜೇಶ್‌ ಪೂಜಾರಿ ಮೂಡುಕೋಡಿ ಹಾಗೂ ಜಗದೀಶ್‌ ಭಟ್‌ ಶ್ರೀನಿಧಿ ಅವರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.