ಶಾಸಕರ ಊರಿನ ರಸ್ತೆಯೂ ಹೊಂಡಮಯ!
Team Udayavani, Oct 21, 2018, 11:56 AM IST
ಉಪ್ಪಿನಂಗಡಿ: ಉಪ್ಪಿನಂಗಡಿಯ ರಾಮನಗರ ಹಿರೇಬಂಡಾಡಿ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಂಚಾರಕ್ಕೆ ಆಯೋಗ್ಯವಾದ ಸ್ಥಿತಿ ಇದೆ.
ಏಳು ವರ್ಷಗಳ ಹಿಂದೆ ಗ್ರಾಮೀಣ ಸಡಕ್ ಯೋಜನೆಯಡಿ ಒಂದು ಕೋಟಿ ರೂ.ಗೂ ಮಿಕ್ಕಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಸಲಾಗಿತ್ತು. ರಸ್ತೆಯ ಗುತ್ತಿಗೆ ವಹಿಸಿಕೊಂಡಿದ್ದ ಗುತ್ತಿಗೆದಾರ ಒಳಗುತ್ತಿಗೆ ವಹಿಸುವ ಮೂಲಕ ಆರಂಭದಲ್ಲೇ ಕಾಮಗಾರಿ ಸಂಪೂರ್ಣ ಕಳಪೆಯಾಗಲು ಕಾರಣವಾಗಿತ್ತು. ಈ ಬಗ್ಗೆ ಲೋಕಯುಕ್ತರಿಗೂ ದೂರು ಸಲ್ಲಿಕೆಯಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಎಂಜಿನಿಯರ್ಗಳ ಮೂಲಕ ರಸ್ತೆಯ ಗುಣಮಟ್ಟವನ್ನು ಪರಿಶೀಲಿಸಿ ಕಳಪೆ ಯಾಗಿರುವುದನ್ನು ದೃಢಪಡಿಸಿಕೊಂಡು ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಮುಂಗಡ ಹಣವನ್ನು ಮುಟ್ಟುಗೋಲು ಹಾಕಿದ್ದರು. ಆನಂತರದ ಐದು ವರ್ಷ ನಿರ್ವಹಣೆಯನ್ನು ಬದಲಿ ಗುತ್ತಿಗೆದಾರರಿಗೆ ವಹಿಸಿದ್ದು, ಇದೀಗ ನಿರ್ವಹಣೆ ಅವಧಿ ಮುಗಿದ ಕಾರಣ ರಸ್ತೆಯಲ್ಲಿ ಹೊಂಡ – ಗುಂಡಿಗಳನ್ನು ಕಾಣುವಂತಾಗಿದೆ.
ಸಡಕ್ ಯೋಜನೆಯಾಗಿರುವ ಕಾರಣ ಜಿ.ಪಂ. ಹಾಗೂ ಲೋಕೋಪ ಯೋಗಿ ಇಲಾಖೆ ಈ ರಸ್ತೆ ತಮ್ಮ ಇಲಾಖೆಗೆ ಸೇರಿಕೊಂಡಿಲ್ಲ ಎಂದು ನುಣಿಚಿ ಕೊಳ್ಳುತ್ತಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರ ಮನೆಗೆ ಇದೇ ರಸ್ತೆಯ ಮೂಲಕ ಹೋಗಬೇಕು. ಅವರು ಈ ಬಗ್ಗೆ ಗಮನ ಹರಿಸಬೇಕು ಎನ್ನುವ ಆಗ್ರಹ ಕೇಳಿಬಂದಿದೆ.
ಅಧಿಕಾರಿಗಳ ನಿರ್ಲಕ್ಷ್ಯ
ಗ್ರಾಮೀಣ ಸಡಕ್ ಯೋಜನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯಾಗುತ್ತಲಿದೆ. ಸರಕಾರದ ಯೋಜನೆಗಳ ಕಾಮಗಾರಿ ನಡೆಸುವ ವೇಳೆ ಆ ಭಾಗದ ಎಂಜಿನಿಯರ್ಗಳು ಖುದ್ದು ಪರಿಶೀಲಿಸಬೇಕು. ಎಲ್ಲವೂ ಕಚೇರಿಯಲ್ಲೇ ಕುಳಿತು ನಿಭಾಯಿಸುವುದರಿಂದ ಇಂತಹ ದುಃಸ್ಥಿತಿ ಆಗುತ್ತಿದೆ.
– ಶೌಕತ್ ಅಲಿ
ಹಿರೇಬಂಡಾಡಿ ಗ್ರಾ.ಪಂ. ಅಧ್ಯಕ್ಷರು
ಎಂಜಿನಿಯರ್ಗಳನ್ನು ಹೊಣೆ ಮಾಡಿ
ಸರಕಾರಗಳು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆದರೆ ಕಾಮಗಾರಿ ಸಮರ್ಪಕವಾಗಿ ಇದೆಯೇ ಎನ್ನುವುದಕ್ಕೆ ಎಂಜಿನಿಯರ್ಗಳಿಂದ ಬಿಲ್ಲು ಮಂಜೂರಾತಿಗೆ ಮುನ್ನ ಪರಿಶೀಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಒಂದೊಮ್ಮೆ ಕಳಪೆ ಕಾಮಗಾರಿ ಎಂದು ದೃಢಪಟ್ಟರೆ ಅದಕ್ಕೆ ಎಂಜಿನಿಯರ್ಗನ್ನೇ ಹೊಣೆ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
– ಅಶ್ರಫ್ ಬಸ್ತಿಕಾರ್
ಸ್ಥಳೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ