ಬೇಸಗೆ ಲೋ ವೋಲ್ಟೇಜ್‌: ಸಿದ್ಧಗೊಂಡಿಲ್ಲ ಸುಳ್ಯ!


Team Udayavani, Oct 24, 2018, 10:23 AM IST

24-october-3.gif

ಸುಳ್ಯ : ಹಲವು ವರ್ಷಗಳಿಂದ ವಿದ್ಯುತ್‌ ಕಣ್ಣಾಮುಚ್ಚಾಲೆ ಪರಿಣಾಮ ಬೇಸಗೆ ಬಿಸಿಯಿಂದ ತತ್ತರಿಸಿದ್ದ ತಾಲೂಕಿಗೆ ಈ ಬಾರಿಯು ಮುಕ್ತಿ ಸಿಗುವ ಲಕ್ಷಣ ಕಾಣುತ್ತಿಲ್ಲ. ಎಲ್ಲ ಸ್ತರದ ಚುನಾವಣೆ ಪೂರ್ವದಲ್ಲಿ ಚರ್ಚಾ ವಸ್ತುವಾಗುವ ವಿದ್ಯುತ್‌ ಅವ್ಯವಸ್ಥೆಯು ಫಲಿತಾಂಶ ಪ್ರಕಟಗೊಂಡ ಬಳಿಕ ತೆರೆಮರೆಗೆ ಸರಿದು ಬಿಡುವುದು ಇಲ್ಲಿನ ಕಥೆ. ಹಾಗಾಗಿ ಸಮಸ್ಯೆ ಇನ್ನಷ್ಟು ಜಟಿಲಗೊಳ್ಳುತ್ತಿದೆ.

ಎಲ್ಲವೂ ಅಪೂರ್ಣ
ಶಾಶ್ವತ ಪರಿಹಾರಕ್ಕಿರುವ 110 ಕೆ.ವಿ. ಸಬ್‌ಸ್ಟೇಷನ್‌ ಅನುಷ್ಠಾನ ಆರಂಭದ ಹಂತದಿಂದ ಚಿಗಿತುಕೊಂಡಿಲ್ಲ. ತಾತ್ಕಾಲಿಕ ಪರಿಹಾರಕ್ಕಿರುವ ಪುತ್ತೂರು-ಸುಳ್ಯ ನಡು ವಿನ 33 ಕೆ.ವಿ. ಹಳೆ ತಂತಿ ಮತ್ತು ಕಂಬ ಬದಲಾವಣೆ ಪೂರ್ಣವಾಗಿಲ್ಲ. ಎರಡನೇ ಕಾಮಗಾರಿ ಕೆಲ ತಿಂಗಳಲ್ಲಿ ಪೂರ್ಣ ಗೊಂಡರೂ ಅದರಿಂದ ಬೇಸಗೆಯ ಬವಣೆ ನೀಗದು. ಅದು ಸೋರಿಕೆಯಾಗುವ ವಿದ್ಯುತ್‌ ಉಳಿಸಬಹುದಷ್ಟೆ. ಹೀಗಾಗಿ ಶಾಶ್ವತ ಪರಿಹಾರಕ್ಕೆ ಇನ್ನು ಹಲವು ವರ್ಷ ಕಾಯಬೇಕು ಎನ್ನುವ ಕೊರಗು ಜನರದ್ದಾಗಿದೆ.

ತಾಲೂಕಿನ ಸ್ಥಿತಿ
ತಾಲೂಕಿನಲ್ಲಿ ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ದಲ್ಲಿ 33 ಕೆ.ವಿ. ಸಬ್‌ಸ್ಟೇಷನ್‌ ಗಳು ಇವೆ. 18 μàಡರ್‌ಗಳಿವೆ. ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯಕ್ಕೆ ಪುತ್ತೂರು 110 ಕೆ.ವಿ. ಸಬ್‌ಸ್ಟೇಷನ್‌ನಿಂದ ವಿದ್ಯುತ್‌ ಪೂರೈಸಲಾಗುತ್ತಿದೆ. ಇಲ್ಲಿ 53 ಸಾವಿರಕ್ಕೂ ಅಧಿಕ ವಿದ್ಯುತ್‌ ಸಂಪರ್ಕಗಳಿವೆ. ಇದರಲ್ಲಿ 44 ಸಾವಿರ ಮನೆ, ವಾಣಿಜ್ಯ ಕಟ್ಟಡ, 12 ಸಾವಿರ ಕೃಷಿಗೆ ಸಂಪರ್ಕವಿದೆ. ಇಡೀ ಸುಳ್ಯ ತಾಲೂಕಿಗೆ ವಿದ್ಯುತ್‌ ಪೂರೈಕೆಯಾಗುವುದು ಪುತ್ತೂರಿನ 110 ಕೆ.ವಿ. ಸಬ್‌ಸ್ಟೇಷನ್‌ನಿಂದ. ಸುಳ್ಯ 33 ಕೆ.ವಿ. ಸಬ್‌ಸ್ಟೇಷನ್‌ನಿಂದ ಗೃಹ ಮತ್ತು ಗೃಹೇತರ ಬಳಕೆದಾರರಿಗೆ ಒದಗಿಸಲಾಗುತ್ತದೆ.

ಕೃಷಿಕರ ಸಮಸ್ಯೆ
ಈ ಬಾರಿಯ ಬಿಸಿಲಿನ ತೀವ್ರತೆ ಕಂಡರೆ, ನವೆಂಬರ್‌ನಲ್ಲೇ ವಿದ್ಯುತ್‌ ಅಭಾವ ಉದ್ಭವಿಸುವ ಸಾಧ್ಯತೆ ಅಧಿಕವಾಗಿದೆ. ಪ್ರತಿ ಬಾರಿ ಜನವರಿಯಲ್ಲಿ ಸಮಸ್ಯೆ ಆರಂಭಗೊಂಡು, ಎಪ್ರಿಲ್‌-ಮೇ ಅಂತ್ಯದ ತನಕ ಇರುತ್ತದೆ. ಹೊಳೆ, ತೋಡು, ನದಿಗಳಲ್ಲಿ ನೀರು ಗಣನೀಯ ಪ್ರಮಾಣದಲ್ಲಿ ಕುಸಿದಿದ್ದು, ಕೊಳವೆ ಬಾವಿಯಿಂದ ನೀರು ಹಾಯಿಸುವ ಕಾರ್ಯಅನಿವಾರ್ಯವೆನಿಸಿದೆ.

20 ಎಂವಿಎ ಪರಿವರ್ತಕ ಅಳವಡಿಸಿದರೆ ಪರಿಹಾರ?
ಪುತ್ತೂರಿನಲ್ಲಿ 20 ಎಂವಿಎ ಸಾಮರ್ಥ್ಯದ ಹೆಚ್ಚುವರಿ ಪರಿವರ್ತಕ ಅಳವಡಿಸಿದರೆ ಬೇಸಗೆಯಲ್ಲಿ ಸುಳ್ಯದ ಸಮಸ್ಯೆ ನೀಗ ಬಹುದು. ಇದರಿಂದ ಸುಳ್ಯದಲ್ಲಿ ವಿದ್ಯುತ್‌ ಧಾರಣ ಸಾಮರ್ಥ್ಯ ಈಗಿರುವ 8 ಮೆಗಾ ವ್ಯಾಟ್‌ನಿಂದ 18ರಿಂದ 20 ಮೆ.ವ್ಯಾ. ತನಕ ಸಂಗ್ರಹಿಸಲು ಸಾಧ್ಯವಿದೆ ಎನ್ನುವುದು ಮೆಸ್ಕಾಂ ಜಿಲ್ಲಾಮಟ್ಟದ ಅಧಿಕಾರಿಗಳ ಮಾತು.

ಪರಿಹಾರ ಸಾಧ್ಯ
ಹೆಚ್ಚುವರಿ 20 ಎಂವಿಎ ಪರಿವರ್ತಕ ಸ್ಥಾಪಿಸುವಂತೆ ಕೆಪಿಟಿಸಿಎಲ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿ ಡಿಪಿಆರ್‌ ಮುಗಿದು ಟೆಂಡರ್‌ಗೆ ಬಾಕಿ ಇದೆ. ಡಿಸೆಂಬರ್‌ ಒಳಗೆ ಪೂರ್ಣ ಗೊಳಿಸಿದರೆ ಬೇಸಗೆಯಲ್ಲಿ ಸುಳ್ಯಕ್ಕೆ ಅನಿಯಮಿತ ವಿದ್ಯುತ್‌ ಪೂರೈಸಲು ಸಾಧ್ಯವಿದೆ.
– ಮಂಜಪ್ಪ ಅಧೀಕ್ಷಕ ಎಂಜಿನಿಯರ್‌, ಮೆಸ್ಕಾಂ
ಮಂಗಳೂರು ವೃತ್ತ 

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.