‘ತುಳುನಾಡಿನ ವೈಭವಕ್ಕೆ  ತುಳುವರ ಹೋರಾಟ ಅಗತ್ಯ’


Team Udayavani, Nov 2, 2018, 12:08 PM IST

2-november-9.gif

ಬೆಳ್ತಂಗಡಿ : ತಮ್ಮ ಸಾಂಪ್ರದಾಯಿಕ ಆಚರಣೆಗಳಿಗೆ ವಿಶೇಷ ಒತ್ತನ್ನು ನೀಡಿ ಒಂದಾಗಿದ್ದ ತುಳುವರು ಇಂದು ಬೇರೆ ಬೇರೆ ಕಾರಣಗಳಿಂದ ವಿಮುಖರಾಗುತ್ತಿದ್ದಾರೆ. ಹೀಗಾಗಿಯೇ ನಮ್ಮ ಭಾಷೆ, ಸಂಸ್ಕೃತಿ, ಆಚಾರ-ವಿಚಾರಗಳು ವಿನಾಶದ ಅಂಚಿಗೆ ತಲುಪಿದ್ದು, ಅದನ್ನು ಮತ್ತೆ ವೈಭವಕ್ಕೆ ತರುವ ನಿಟ್ಟಿನಲ್ಲಿ ತುಳುವರು ಹೋರಾಡಬೇಕಿದೆ ಎಂದು ಉಡುಪಿ ಜಿಲ್ಲಾ ತುಳುನಾಡು ಒಕ್ಕೂಟದ ಅಧ್ಯಕ್ಷ ಐಕಳಭಾವ ಚಿತ್ತರಂಜನ್‌ ಶೆಟ್ಟಿ ಹೇಳಿದರು.

ಅವರು ಗುರುವಾರ ಇಲ್ಲಿನ ಲಯನ್ಸ್‌ ಭವನದಲ್ಲಿ ಬೆಳ್ತಂಗಡಿ ತುಳುನಾಡು ಒಕ್ಕೂಟ ಆಯೋಜಿಸಿದ್ದ ಭಾರತೊಡು ಒಂಜಿ ತುಳುರಾಜ್ಯೊ ಒಂಜಿ ಚಿಂತನೆ ಎಂಬ ವಿಚಾರಗೋಷ್ಠಿಯಲ್ಲಿ ಮಾತನಾಡಿದರು. ತುಳುನಾಡು ಒಕ್ಕೂಟದ ಸ್ಥಾಪಕಾಧ್ಯಕ್ಷ ಶೈಲೇಶ್‌ ಆರ್‌.ಜೆ. ಉದ್ಘಾಟಿಸಿದರು. ವಿಚಾರಗೋಷ್ಠಿಯಲ್ಲಿ ಪುತ್ತೂರು ಜಿಲ್ಲಾ ತುಳುನಾಡು ಒಕ್ಕೂಟದ ಅಧ್ಯಕ್ಷ ನವೀನ್‌ ಬಿ.ಕೆ. ಭಾಷಾವಾರು ಪ್ರಾಂತ ಮತ್ತು ತುಳುನಾಡು, ಉಡುಪಿ ಜಿಲ್ಲಾ ಮಹಿಳಾ ಕೂಟದ ಅಧ್ಯಕ್ಷೆ ಸುಕನ್ಯಾ ಪ್ರಭಾಕರ್‌ ತುಳು ಚಳವಳಿಯಲ್ಲಿ ಮಹಿಳೆಯರ ಪಾತ್ರ, ಪತ್ರಕರ್ತ ಸಂಜೀವ ಎನ್‌.ಸಿ. ತುಳು ಬುಲೆಚ್ಚಿಲ್ಡ್‌ ಮಾಧ್ಯಮ ಪಾತ್ರ, ಪುತ್ತೂರು ತಾಲೂಕು ಅಧ್ಯಕ್ಷ ಶೇಖರ್‌ ಪೂಜಾರಿ ಕೌಡಂತ್ತಿಗೆ ತುಳುನಾಡ್‌ ರಾಜ್ಯ ಪೊರಂಬಾಟದ ದುಂಬುದು ಪಜ್ಯ, ಕಾನೂನು ಘಟಕದ ಅಧ್ಯಕ್ಷ ಪ್ರಶಾಂತ್‌ ಎಂ. ತುಳು ಚಳವಳಿ ಬೊಕ್ಕ ರಾಜಕೀಯ ಪಕ್ಷ ಎಂಬ ವಿಷಯದ ಕುರಿತು ವಿಚಾರ ಮಂಡಿಸಿದರು.

ಒಕ್ಕೂಟದ ಮೂಡಬಿದಿರೆ ತಾಲೂಕಿನ ಸತೀಶ್‌ ಕೋಟ್ಯಾನ್‌, ಮಂಗಳೂರಿನ ಅರವಿಂದ್‌ ಪಂಡಿತ್‌, ಕಾರ್ಕಳದ ರವಿಚಂದ್ರ ಆಚಾರ್‌ ಮೊದಲಾದವರು ಉಪಸ್ಥಿತರಿದ್ದರು. ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನ್ಸೆಂಟ್‌ ಲೋಬೋ ಪ್ರಸ್ತಾವಿಸಿದರು. ಉಪಾಧ್ಯಕ್ಷ ನವೀನ್‌ ಪೂಜಾರಿ ಸ್ವಾಗತಿಸಿ, ಕಾರ್ಯದರ್ಶಿ ಜಿ.ವಿ. ಹರೀಶ್‌ ಸವಣಾಲ್‌ ವಂದಿಸಿದರು. ಬೆಳ್ತಂಗಡಿ ನಗರ ಅಧ್ಯಕ್ಷ ರಾಜು ಬಿ.ಎಚ್‌. ಕಾರ್ಯಕ್ರಮ ನಿರೂಪಿಸಿದರು.

ಅಸ್ತಿತ್ವದ ಉಳಿವಿಗೆ ಹೋರಾಟ
ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇಧಕ್ಕೆ ಸೇರಿಸಬೇಕು ಎಂಬ ಕೂಗು ಜೋರಾಗಿದ್ದರೂ ಅದಕ್ಕೆ ಮನ್ನಣೆ ಇಲ್ಲದಂತಾಗಿದೆ. ಭಾಷಾವಾರು ಪ್ರಾಂತಗಳ ರಚನೆಯ ಸಂದರ್ಭ ತುಳುನಾಡು ಹರಿದು ಹಂಚಿಹೋಗಿದೆ. ನಮ್ಮ ಅಸ್ತಿತ್ವದ ಉಳಿವಿಗಾಗಿ ಹೋರಾಟ ಅನಿವಾರ್ಯ.
-ಐಕಳಬಾವ ಚಿತ್ತರಂಜನ್‌ ಶೆಟ್ಟಿ,
 ಉಡುಪಿ ಜಿಲ್ಲಾ ತುಳುನಾಡು ಒಕ್ಕೂಟದ ಅಧ್ಯಕ್ಷರು

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.