4 ತಿಂಗಳಿಂದ ಅತಿಥಿ ಶಿಕ್ಷಕರಿಗೂ ವೇತನವಿಲ್ಲ


Team Udayavani, Nov 9, 2018, 6:45 AM IST

untitled-1.jpg

ಸುಳ್ಯ: ರಾಜ್ಯದ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಅತಿಥಿ ಶಿಕ್ಷಕರಿಗೆ ದಸರಾ ಬಳಿಕ ಈಗ ದೀಪಾವಳಿ ಹಬ್ಬದ ಸಂಭ್ರಮವೂ ಇಲ್ಲ. ಏಕೆಂದರೆ, ಈ ಸಿಬ್ಬಂದಿಗೆ ನಾಲ್ಕು ತಿಂಗಳಿನಿಂದ ಮಾಸಿಕ ಗೌರವಧನವೇ ಸಿಕ್ಕಿಲ್ಲ. 2018-19ನೇ ಸಾಲಿಗೆ ಪ್ರಾಥಮಿಕ ಶಾಲೆಗಳ 12,500 ಮತ್ತು ಪ್ರೌಢಶಾಲೆಗಳ 3,100 ಹುದ್ದೆಗಳು ಸೇರಿ ಖಾಲಿ ಇರುವ ಒಟ್ಟು 15,600 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಸರಕಾರವು ಶಿಕ್ಷಣ ಇಲಾಖೆ ಮೂಲಕ ನೇಮಕ ಮಾಡಿಕೊಂಡಿತ್ತು. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಧನ ತಿಂಗಳಿಗೆ 10,500 ರೂ. ಹಾಗೂ ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ 12,500 ರೂ. ನಿಗದಿಪಡಿಸಿ ಆದೇಶಿಸಿತ್ತು.
ಸರಕಾರದ ಸುತ್ತೋಲೆಯಂತೆ ಶಿಕ್ಷಣ ಇಲಾಖೆ ಈ ಜೂನ್‌ನಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿತ್ತು. ಆದರೆ
ನಾಲ್ಕು ತಿಂಗಳಿಂದ ವೇತನ ನೀಡಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ ಎಂಬುದು ಶಿಕ್ಷಕರ ಗೋಳು.

ಶಿಕ್ಷಕರ ಕೊರತೆಗೆ ಪರಿಹಾರ: ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತೀವ್ರ ಸ್ಥಿತಿಗೆ ತಲುಪಿದಾಗ ಅತಿಥಿ ಶಿಕ್ಷಕರ ನೇಮಕದ
ಮೂಲಕ ಪರಿಸ್ಥಿತಿಯಲ್ಲಿ ಸುಧಾರಣೆ ತರುವುದು ಸರಕಾರದ ಇಚ್ಛೆಯಾಗಿತ್ತು. ಹೀಗಾಗಿ ನೇಮಕ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿತ್ತು. ಆದರೆ ಬಳಿಕ ವೇತನ ನೀಡುವುದನ್ನು ಅದು ಮರೆತಂತಿದೆ ಎಂದು ಅತಿಥಿ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಳ ಇಲ್ಲದೆ ಕೆಲಸ ಮಾಡುವುದು ಹೇಗೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ ಈ ಹಿಂದೆ 5,000 ರೂ. ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 6,500ರೂ. ವೇತನ ನಿಗದಿ ಪಡಿಸಲಾಗಿತ್ತು. ಈ ವರ್ಷ ಮಾಸಿಕ ಗೌರವ ಧನವನ್ನು ಸರಕಾರ ಹೆಚ್ಚಿಸಿತ್ತು. 

ತಾಂತ್ರಿಕ ಕಾರಣದ ಸಬೂಬು: ಗೌರವಧನ ವಿಳಂಬವಾಗಲು ತಾಂತ್ರಿಕ ತೊಂದರೆಗಳು ಕಾರಣ ಎನ್ನುವುದು  ಶಿಕ್ಷಣ ಇಲಾಖೆ ನೀಡುತ್ತ ಬಂದಿರುವ ಕಾರಣ. ಆದರೆ ಸರಕಾರದ ಅಧೀನದಲ್ಲಿರುವ ಶಿಕ್ಷಣ ಇಲಾಖೆಯೇ ಈ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಅದಾಗಿಲ್ಲ. ದಸರಾ ಬಳಿಕ ದೀಪಾವಳಿಗೂ ಅವರಿಗೆ ವೇತನ ಸಿಕ್ಕಿಲ್ಲ. ಸೂಕ್ತ ಸಮಯದಲ್ಲಿ ಸರಕಾರ ನಿಗದಿಪಡಿಸಿದ ವೇತನ ನೀಡುವುದಕ್ಕೆ ಇಲಾಖೆ ಮುತುವರ್ಜಿ ವಹಿಸಬೇಕು. ಇಲಾಖೆಯ ನಿರ್ಲಕ್ಷ್ಯದಿಂದಲೇ ಈ ಗೊಂದಲ ಉಂಟಾಗುತ್ತಿದೆ ಎನ್ನುವುದು ಅತಿಥಿ ಶಿಕ್ಷರ ವಲಯದಿಂದ ಕೇಳಿಬರುವ ಆರೋಪ. ವೇತನ ವಿಳಂಬ ಕುರಿತು ಅತಿಥಿ ಶಿಕ್ಷಕರು ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಳಿ ವಿಚಾರಿಸಿದರೆ, ಸರಕಾರದಿಂದ ಬಿಡುಗಡೆಗೊಂಡಿದೆ, ಶೀಘ್ರ ನಿಮ್ಮ ಬ್ಯಾಂಕು ಖಾತೆಗೆ ತಲುಪುತ್ತದೆ ಎನ್ನುವ ಉತ್ತರ ನೀಡುತ್ತಾರೆ. ಆದರೆ ವೇತನ ಇನ್ನೂ ಶಿಕ್ಷಕರ ಖಾತೆ ಸೇರಿಲ್ಲ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವೇತನ ನೀಡಲಾಗಿದೆ ಎನ್ನುವ ಮಾಹಿತಿ ಇದ್ದರೂ ಅದೂ
ಖಚಿತಗೊಂಡಿಲ್ಲ.

ಸರಕಾರದಿಂದ ಹಣ ಬಿಡುಗಡೆಗೊಂಡು ತಾ.ಪಂ. ಕಚೇರಿಗೆ ಬಂದಿದೆ. ತಾಂತ್ರಿಕ ಕಾರಣಗಳಿಂದ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವಲ್ಲಿ ತೊಡಕು ಕಂಡುಬಂದ ಕಾರಣ ತಡವಾಗಿದೆ. ಕೆಲವೇ ದಿನಗಳಲ್ಲಿ ಅತಿಥಿ ಶಿಕ್ಷಕರ ಖಾತೆಗೆ ಬಾಕಿ ಇರುವ ಎಲ್ಲ ವೇತನ ಪಾವತಿಯಾಗಲಿದೆ. 
● ವಾಲ್ಟರ್‌ ಡಿಮೆಲ್ಲೊ, ಡಿಡಿಪಿಐ, ಮಂಗಳೂರು

ಬಾಲಕೃಷ್ಣ ಭೀಮಗುಳಿ 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.