ಅಧ್ಯಕ್ಷರ ಆಯ್ಕೆಯಾಗದೆ ಸದಸ್ಯರಿಗೆ ಪೂರ್ಣಾಧಿಕಾರ ಅಲಭ್ಯ


Team Udayavani, Nov 10, 2018, 10:07 AM IST

10-november-2.gif

ಬೆಳ್ತಂಗಡಿ: ಬೆಳ್ತಂಗಡಿ ಪ.ಪಂ. ಚುನಾವಣೆ ನಡೆದು ಹೊಸ ಸದಸ್ಯರು ಆಯ್ಕೆಯಾಗಿದ್ದರೂ ಅವರಿಗೆ ಪೂರ್ಣ ಅಧಿಕಾರ ಇನ್ನೂ ಸಿಕ್ಕಿಲ್ಲ. ಅಂದರೆ ಪಂ.ನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಇನ್ನೂ ದಿನಾಂಕ ನಿಗದಿಯಾಗದೇ ಇರುವುದರಿಂದ ಆಡಳಿತಾಧಿಕಾರಿಯವರ ಅವಧಿಯೇ ಮುಂದುವರಿದಿದೆ.

ಪಂ.ನ ಚುನಾವಣೆಯ ಫಲಿತಾಂಶ ಅ. 31ಕ್ಕೆ ಪ್ರಕಟಗೊಂಡಿದ್ದು, ಬಿಜೆಪಿಯು 7 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತ ಪಡೆದಿದ್ದರೆ, ಕಾಂಗ್ರೆಸ್‌ 4 ಸ್ಥಾನಗಳನ್ನು ಪಡೆದಿದೆ. ವಿಶೇಷವೆಂದರೆ ಬಿಜೆಪಿಯು ಇಲ್ಲಿ ಇದೇ ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದಿದೆ. ಹೊಸ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯು ವಿಳಂಬವಾದಲ್ಲಿ ಅಭಿವೃದ್ಧಿಗೂ ಹೊಡೆತ ನೀಡಲಿದೆ.

ಬೆಳ್ತಂಗಡಿ ತಹಶೀಲ್ದಾರ್‌ ಅವರು ಆಡಳಿತಾಧಿಕಾರಿಯಾಗಿ ಅಧ್ಯಕ್ಷರ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಹಾಲಿ ನಡೆಯುತ್ತಿರುವ ಕಾಮಗಾರಿಗಳಿಗೆ ತೊಂದರೆ ಇಲ್ಲದಿದ್ದರೂ ಹೊಸ ಕಾಮಗಾರಿಗಳನ್ನು ನಡೆಸುವುದು ಅಸಾಧ್ಯ. ಜತೆಗೆ ಪಂ. ವ್ಯಾಪ್ತಿಯ ಜನತೆಯ ಬೇಡಿಕೆಗಳೇನು ಎಂಬುದು ಕೂಡ ತಹಶೀಲ್ದಾರ್‌ಗಿಂತಲೂ ಹೆಚ್ಚು ಸದಸ್ಯರಿಗೆ ತಿಳಿದಿರುತ್ತದೆ. ಹೀಗಾಗಿ ಸರಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಹೊಸ ಆಡಳಿತ ಮಂಡಳಿಯೇ ಬೇಕಾಗುತ್ತದೆ. ಹೀಗಾಗಿ ಹೊಸ ಆಡಳಿತ ಮಂಡಳಿ ಬರದೆ ಚುನಾವಣೆ ನಡೆದರೂ ಯಾವುದೇ ಪ್ರಯೋಜನ ಇಲ್ಲದಂತಾಗುತ್ತದೆ. ಜಿಲ್ಲೆಯ ಇತರ ಕಡೆಗಳಲ್ಲಿ ನಡೆದ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಅದೇ ಪರಿಸ್ಥಿತಿ ಉಂಟಾಗಿದೆ.

ಮೀಸಲಾತಿ ಅಂತಿಮವೇ?
ಇತರ ನಗರ ಸ್ಥಳೀಯ ಸಂಸ್ಥೆಗಳ ಜತೆಗೆ ಕಳೆದ ಸೆಪ್ಟಂಬರ್‌ನಲ್ಲಿ ಸರಕಾರವು ಬೆಳ್ತಂಗಡಿಯ ಪ. ಪಂ.ನ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗೂ ಮೀಸಲಾತಿ ತಂದಿದೆ. ಅದರ ಪ್ರಕಾರ ಅಧ್ಯಕ್ಷರ ಹುದ್ದೆ ಹಿಂದುಳಿದ ವರ್ಗ ಎ (ಬಿಸಿಎ) ಹಾಗೂ ಉಪಾಧ್ಯಕ್ಷರ ಹುದ್ದೆ ಸಾಮಾನ್ಯಕ್ಕೆ ಮೀಸಲಾಗಿದೆ.

ಇಲ್ಲಿ ಬಿಜೆಪಿಯು ಸ್ಪಷ್ಟ ಬಹುಮತ ಪಡೆದಿರುವ ಜತೆಗೆ ವಾರ್ಡ್‌ ಸಂಖ್ಯೆ 8ರಿಂದ ಗೆದ್ದಿರುವ ಬಿಜೆಪಿಯ ತುಳಸಿ ಅವರು ಅಧ್ಯಕ್ಷ ಹುದ್ದೆಗೆ ಅರ್ಹರಾಗಿದ್ದು, ಉಪಾಧ್ಯಕ್ಷ ಹುದ್ದೆಗೆ ಎಲ್ಲರೂ ಅರ್ಹರಾಗಿದ್ದಾರೆ. ಆದರೆ ಇತರ ಸ್ಥಳೀಯ ಸಂಸ್ಥೆಗಳ ಗೊಂದಲದಿಂದ ಬೆಳ್ತಂಗಡಿಯ ಮೀಸಲಾತಿಯೂ ಬದಲಾದಲ್ಲಿ ಬೇರೆಯವರಿಗೆ ಅವಕಾಶ ಸಿಗಬಹುದು.

ವಿಳಂಬ ಸಾಧ್ಯತೆ
ದ.ಕ. ಜಿಲ್ಲೆಯ ಪುತ್ತೂರು, ಬಂಟ್ವಾಳ ಹಾಗೂ ಉಳ್ಳಾಲಗಳಲ್ಲಿ ಚುನಾವಣೆ ಮುಗಿದು ಎರಡು ತಿಂಗಳುಗಳೇ ಕಳೆದರೂ ಇನ್ನೂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ. ಹೀಗಾಗಿ ಬೆಳ್ತಂಗಡಿ ಪ.ಪಂ.ನ ಆಯ್ಕೆಯೂ ವಿಳಂಬವಾಗುವ ಸಾಧ್ಯತೆ ಇದೆ.

ಸರಕಾರದ ತೀರ್ಮಾನ
ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ದಿನಾಂಕ ನಿಗದಿ ಸರಕಾರ ಮಟ್ಟದ ತೀರ್ಮಾನವಾಗಿದೆ. ಈ ಹಿಂದೆ ನಡೆದಿರುವ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯೂ ನಡೆಯಬೇಕಿದೆ. ಜತೆಗೆ ಹಾಲಿ ಬಂದಿರುವ ಮೀಸಲಾತಿಯೂ ಅಂತಿಮವೇ ಎಂಬುದನ್ನೂ ಸರಕಾರವೇ ತೀರ್ಮಾನಿಸಬೇಕಿದೆ.
– ಮದನ್‌ಮೋಹನ್‌ ಸಿ.
ತಹಶೀಲ್ದಾರರು, ಬೆಳ್ತಂಗಡಿ

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.