ಮಾಣಿ-ಮೈಸೂರು ರಸ್ತೆ: ಬಸ್ ಸಂಚಾರ ಇನ್ನೂ ಇಲ್ಲ
Team Udayavani, Nov 12, 2018, 9:40 AM IST
ಅರಂತೋಡು: ಮಾಣಿ – ಮೈಸೂರು ರಸ್ತೆಯಲ್ಲಿ ಲಾರಿಗಳು ಸಂಚರಿಸುತ್ತಿದ್ದರೂ ಬಸ್ ಸಂಚಾರಕ್ಕೆ ಅವಕಾಶ ನೀಡಿಲ್ಲ. ಇದಕ್ಕೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆಗಸ್ಟ್ನಲ್ಲಿ ಪ್ರಕೃತಿ ವಿಕೋಪದಿಂದಾಗಿ ಗುಡ್ಡ ಕುಸಿದು ಈ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ರಸ್ತೆ ದುರಸ್ತಿ ಕಾಮಗಾರಿ ನಡೆಸಿ ಮಡಿಕೇರಿಯಿಂದ ಜೋಡುಪಾಲ ತನಕ ಕೆಎಸ್ಸಾರ್ಟಿಸಿ ಮಿನಿ ಬಸ್ ಸಂಚಾರ ಆರಂಭಿಸಲಾಯಿತು.
ಸದ್ಯ ಮಂಗಳೂರು, ಪುತ್ತೂರು, ಸುಳ್ಯ ಕಡೆಯ ಬಸ್ಗಳಿಗೆ ಜೋಡುಪಾಲ ತನಕ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲಿಳಿದ ಪ್ರಯಾಣಿಕರು ಮಡಿಕೇರಿ ತನಕ ಮಿನಿ ಬಸ್ಸಿನಲ್ಲಿ ಸಂಚರಿಸಬೇಕು. ಒಂದೂವರೆ ತಿಂಗಳಿನಿಂದ ಈಚೆಗೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಲಾರಿಗಳ ಸಂಚಾರಕ್ಕೆ ಅನುಮತಿ ಇಲ್ಲವಾದರೂ ರಾತ್ರಿ ವೇಳೆ ಓಡಾಡುತ್ತಿವೆ. ಇದರಿಂದ ಸಂಬಂಧಪಟ್ಟ ಇಲಾಖೆಯ ಮೇಲೆ ಪ್ರಯಾಣಿಕರು ಸಂಶಯ ವ್ಯಕ್ತಪಡಿಸ ಲಾರಂಭಿಸಿದ್ದು, ಬಸ್ ಸಂಪರ್ಕಕ್ಕೆ ಯಾಕೆ ಅವಕಾಶ ನೀಡಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ.
ಬಸ್ಗಳಲ್ಲಿ ನೂಕುನುಗ್ಗಲು
ಜೋಡುಪಾಲದಿಂದ ಮಡಿಕೇರಿವರೆಗೆ ಸದ್ಯ ಸಂಚರಿಸುತ್ತಿರುವುದು ಮಿನಿ ಬಸ್ಗಳು. ಇದರಿಂದ ಪ್ರಯಾಣಿಕರ ನೂಕುನುಗ್ಗಲು ಉಂಟಾಗುತ್ತಿದೆ. ಆಸನಗಳು ಕೂಡ ಇಕ್ಕಟ್ಟಾಗಿದ್ದು, ವೃದ್ಧರು, ಮಹಿಳೆಯರು, ಚಿಕ್ಕ ಮಕ್ಕಳನ್ನು ಕರೆದುಕೊಂಡು ಹೋಗುವವರಿಗೆ ಕಷ್ಟವಾಗಿದೆ. ಕಿಸೆಗಳ್ಳರಿಗೆ ವರವಾಗಿದೆ. ಪ್ರಯಾಣಿಕರ ದಟ್ಟಣೆಯ ದುರ್ಲಾಭ ಪಡೆದು ಕೆಲವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ದೂರುಗಳು ಕೇಳಿಬರುತ್ತಿವೆ.
ಬಸ್ ಸಂಚರಿಸಬಹುದು
ಮಡಿಕೇರಿಯಿಂದ ಜೋಡುಪಾಲದವರೆಗೆ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಬಸ್ ಸಂಚರಿಸಬಹುದು. ರಾತ್ರಿ ಲಾರಿ, ಘನ ವಾಹನಗಳು ಓಡಾಡುತ್ತವೆ. ಇದಕ್ಕೆ ಅವಕಾಶ ಕಲ್ಪಿಸುವವರು ಯಾರು ಎನ್ನುವುದು ಸಂಶಯಕ್ಕೆ ಕಾರಣವಾಗಿದೆ. ಸೀಮಿತ ಕೆಎಸ್ಸಾರ್ಟಿಸಿ ಬಸ್ಗಳು ಸುಳ್ಯದಿಂದ ಮಡಿಕೇರಿ ತನಕ ಸಂಚರಿಸಲಿ. ಇದರಿಂದ ಜನರಿಗೆ ಅನುಕೂಲವಾಗಲಿದೆ.
ಬಾಲಚಂದ್ರ ಕಳಗಿ, ಸಂಪಾಜೆ ಗ್ರಾ.ಪಂ. ಅಧ್ಯಕ್ಷರು
ಸಮಸ್ಯೆ ಹೆಚ್ಚಿದೆ
ರಸ್ತೆಯಲ್ಲಿ ನೇರ ಬಸ್ ಸಂಪರ್ಕಕ್ಕೆ ಅವಕಾಶ ಕಲ್ಪಿಸದೆ ಇರುವುದರಿಂದ ಅನೇಕರಿಗೆ ಸಮಸ್ಯೆಯಾಗುತ್ತಿದೆ. ಜೋಡುಪಾಲದಲ್ಲಿ ಪ್ರಯಾಣಿಕರು ಬಸ್ ಕಾಯಬೇಕು. ಅಲ್ಲಿ ಬಸ್ ನಿಲ್ದಾಣವೂ ಇಲ್ಲ. ಹೊಟೇಲ್, ಶೌಚಾಲಯದ ವ್ಯವಸ್ಥೆಯೂ ಇಲ್ಲ. ಇದರಿಂದ ಪ್ರಯಾಣಿಕರು ಸಮಸ್ಯೆಗೊಳಗಾಗುತ್ತಿದ್ದಾರೆ.
ತಿರುಮಲ ಸೋನ ಕೊಯಿನಾಡು, ಸ್ಥಳೀಯ ಪ್ರಯಾಣಿಕ
ತೇಜೇಶ್ವರ್ ಕುಂದಲ್ಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು