ಮಣ್ಣು, ಕಟ್ಟಿಗೆ ಕೊರತೆ: ಕುಂಬಾರಿಕೆ ಕುಲಕಸುಬಿಗೆ ಈಗ ಭಾರೀ ಹಿನ್ನಡೆ 


Team Udayavani, Nov 14, 2018, 11:44 AM IST

14-november-4.gif

ಉಪ್ಪಿನಂಗಡಿ: ಮಣ್ಣಿನ ಮಡಿಕೆಗಳಿಗೆ ಮತ್ತೆ ಬೇಡಿಕೆ ಬಂದಿದ್ದರೂ ಅವುಗಳನ್ನು ತಯಾರಿಸುವ ಆಸಕ್ತಿ ಕುಂಬಾರ ಕುಟುಂಬಗಳಲ್ಲಿ ಉಳಿದಿಲ್ಲ. ಮಣ್ಣು ಹಾಗೂ ಕಟ್ಟಿಗೆ ಕೊರತೆ ಈ ಕುಲಕಸುಬಿಗೆ ಹೊಡೆತ ನೀಡಿದೆ.

ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾ.ಪಂ. ವ್ಯಾಪ್ತಿಯ ಎನ್ಮಾಡಿಯಲ್ಲಿ 40 ಕುಂಬಾರ ಕುಟುಂಬಗಳಿವೆ. ಇಲ್ಲಿ ಕುಂಬಾರಿಕೆ ವೃತ್ತಿ ನಡೆಸಲು 1984-85ರಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ, ಜಿಲ್ಲಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ನೆರವಿನಲ್ಲಿ ಕಟ್ಟಡ ನಿರ್ಮಿಸಲಾಗಿತ್ತು. ಆಗ ಇಲ್ಲಿ ನಿತ್ಯ 15-20 ಮಂದಿ ಮಣ್ಣಿನ ಮಡಿಕೆಗಳ ತಯಾರಿಕೆಯಲ್ಲಿ ತೊಡಗಿದ್ದರು. ಈಗ ಎರಡು-ಮೂರು ಹಿರಿಯ ಜೀವಗಳು ಮಾತ್ರ ಕುಂಬಾರಿಕೆ ವೃತ್ತಿ ನಡೆಸುತ್ತಿವೆ. ಅವರು ವೈವಿಧ್ಯಮಯ ಮಡಿಕೆಗಳು ಹಾಗೂ ಆಲಂಕಾರಿಕ ವಸ್ತುಗಳನ್ನು ತಯಾರಿಸುತ್ತಿದ್ದಾರೆ.

ತಾಳ್ಮೆಯ ಕಸುಬು
ಎನ್ಮಾಡಿಯಲ್ಲಿ 27 ವರ್ಷಗಳಿಂದ ಮಡಿಕೆ ತಯಾರಿಸುತ್ತಿರುವ ಸುಬ್ರಾಯ ಕುಂಬಾರ ಹಾಗೂ 20 ವರ್ಷಗಳಿಂದ ಈ ಉದ್ಯೋಗ ಮಾಡುತ್ತಿರುವ ಡೊಂಬಯ್ಯ ಕುಂಬಾರರು ತಮ್ಮ ಅನುಭವ ಬಿಚ್ಚಿಟ್ಟಿದ್ದು ಹೀಗೆ:

ಮಡಿಕೆ ತಯಾರಿಸಲು ಬೇಕಾದ ಜೇಡಿ ಮಣ್ಣು ಈ ಹಿಂದೆ ಉಪ್ಪಿನಂಗಡಿ ಸಹಿತ ಕೆಲವು ಕಡೆ ಹೇರಳವಾಗಿ ಸಿಗುತ್ತಿತ್ತು. ಈಗ ಬಂಗಾಡಿ ಹಾಗೂ ಸೇಡಿಯಾಪು ಗ್ರಾಮದ ಅಲ್ಮಾಜೆಯಲ್ಲಿ ಮಾತ್ರ ಸಿಗುತ್ತಿದೆ. ಮಡಿಕೆ ತಯಾರಿ ನಾಜೂಕಿನ ಕೆಲಸ. ಶ್ರದ್ಧೆ, ತಾಳ್ಮೆ ಹಾಗೂ ಏಕಾಗ್ರತೆ ಬೇಕು. ಒಂದೇ ದಿನದಲ್ಲಿ ಮಡಿಕೆ ತಯಾರಿಸಲು ಸಾಧ್ಯವಿಲ್ಲ. ತಂದ ಮಣ್ಣನ್ನು ಮೊದಲಿಗೆ ಒಣಗಿಸಿ ಹುಡಿ ಮಾಡಬೇಕು. ಸಣ್ಣ ಕಣ್ಣುಗಳಿರುವ ನೆಟ್‌ನಲ್ಲಿ ಚೆನ್ನಾಗಿ ಗಾಳಿಸಿ, ನೀರು ಹಾಕಿ ಕಲಸಿ, ಅಂಟು ಬರಿಸಬೇಕು. ಈ ಮಣ್ಣನ್ನು ತಿಗರಿಯ ಮೂಲಕ ತಿರುಗಿಸಿ, ಬೇಕಾದ ಪಾತ್ರೆಗಳ ರೂಪ ಕೊಡಬೇಕು. ಮತ್ತೆ ಅವುಗಳನ್ನು ಹದವಾಗಿ ಒಣಗಲು ಇಡಬೇಕು. ಒಣಗಿದ ಪಾತ್ರೆಯನ್ನು ತೆಗೆದು ಸಣ್ಣ ಕೋಲು ಹಾಗೂ ಕಲ್ಲಿನ ಮೂಲಕ ಪಾತ್ರೆಗೆ ಅಡಿಭಾಗ ಮೆತ್ತಬೇಕು. ಪಾತ್ರೆ ಅಂಕು-ಡೊಂಕಾಗಿದ್ದಲ್ಲಿ ಸರಿಪಡಿಸಬೇಕು. ಈ ಕೆಲಸ ಕೈಯಿಂದಲೇ, ನಾಜೂಕಾಗಿ ನಡೆಯಬೇಕು. ಮತ್ತೆ ಒಣಗಿಸಿ, ಪಾತ್ರೆಗಳನ್ನು ಬೆಂಕಿಯಲ್ಲಿ ಆವೆ ಹಾಕಬೇಕು. ಒಮ್ಮೆ ಆವೆ ಹಾಕಲು 35 ಕಟ್ಟು ಕಟ್ಟಿಗೆ ಬೇಕಾಗುತ್ತದೆ. ಇಷ್ಟರಲ್ಲಿ ಗಾತ್ರ ಹಾಗೂ ವಿನ್ಯಾಸ ಅನುಸರಿಸಿ 200ರಿಂದ 300 ಮಡಿಕೆಗಳನ್ನು ಬೇಯಿಸಲು ಸಾಧ್ಯವಾಗುತ್ತದೆ. ಹಿಂದೆ ಕುಂಬಾರರೇ ಮಡಿಕೆಗಳನ್ನು ಹೊತ್ತು ಹಳ್ಳಿಗಳಲ್ಲಿ ತಿರುಗಿ ಮಾರಾಟ ಮಾಡುತ್ತಿದ್ದರು. ಹೊತ್ತೂಯ್ಯುವುದು ಕಷ್ಟವಾದ್ದರಿಂದ ಈಗ ಸಹಕಾರ ಸಂಘಗಳಿಗೆ ನೀಡುವುದೇ ಹೆಚ್ಚು. ಆದರೆ, ಇದರಿಂದ ಆದಾಯ ಕಮ್ಮಿ ಎಂದರು.

ಪ್ರೋತ್ಸಾಹ ಬೇಕು
ಈಗ ಮಣ್ಣು ಹಾಗೂ ಕಟ್ಟಿಗೆ ಕೊರತೆ ಈ ಉದ್ಯೋಗಕ್ಕೆ ಹೊಡೆತ ನೀಡಿದೆ. 1984-85ರ ಕಾಲಘಟ್ಟದಲ್ಲಿ ನಿರ್ಮಾಣವಾದ ಇಲ್ಲಿನ ಕೇಂದ್ರ ಇದೀಗ ಶಿಥಿಲಗೊಂಡು, ಬೀಳುವ ಸ್ಥಿತಿಯಲ್ಲಿದೆ. ಮಡಿಕೆಗಳನ್ನು ಆವೆಗೆ ಇಡುವ ಕಟ್ಟಡವೂ ಹಾಳಾಗಿದೆ. ಕುಂಬಾರಿಕೆಯನ್ನು ಸರಕಾರ ಪ್ರೋತ್ಸಾಹಿಸಬೇಕು. ಈ ಕೇಂದ್ರವನ್ನು ದುರಸ್ತಿ ಮಾಡಬೇಕು ಎಂದವರು ಆಗ್ರಹಿಸಿದರು.

 ಎಂ.ಎಸ್‌. ಭಟ್‌

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.